AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಗತಿಕ ವಿಮಾನ ಉತ್ಪಾದನೆಗೆ ಭಾರತ ಅಡ್ಡೆಯಾಗಬಲ್ಲುದಾ? ಎಸ್​ಪಿವಿ ತಂಡ ಕಟ್ಟಲಿರುವ ಸರ್ಕಾರ; ಎಚ್​​ಎಎಲ್​ಗೆ ಗುರುತರ ಜವಾಬ್ದಾರಿ

India plans to manufacture planes indigenously: ಬೋಯಿಂಗ್ ಮತ್ತು ಏರ್​ಬಸ್ ಪ್ರಾಬಲ್ಯ ಇರುವ ವಿಮಾನ ತಯಾರಿಕಾ ಕ್ಷೇತ್ರಕ್ಕೆ ಹೆಜ್ಜೆ ಇರಿಸಲು ಸರ್ಕಾರ ನಿರ್ಧರಿಸಿದೆ. ಭಾರತದಲ್ಲೇ ಸಂಪೂರ್ಣ ವಿಮಾನ ತಯಾರಿಕೆಯ ಸೌಲಭ್ಯ ನಿರ್ಮಾಣವಾಗಲಿದೆ. ಭಾರತಕ್ಕೆ ಅಗತ್ಯ ಇರುವ ವಿಮಾನಗಳನ್ನು ಪೂರೈಸಲು ಮಾತ್ರವಲ್ಲ, ಬೇರೆಡೆ ರಫ್ತು ಮಾಡಲು ಭಾರತ ಯೋಜಿಸುತ್ತಿದೆ.

ಜಾಗತಿಕ ವಿಮಾನ ಉತ್ಪಾದನೆಗೆ ಭಾರತ ಅಡ್ಡೆಯಾಗಬಲ್ಲುದಾ? ಎಸ್​ಪಿವಿ ತಂಡ ಕಟ್ಟಲಿರುವ ಸರ್ಕಾರ; ಎಚ್​​ಎಎಲ್​ಗೆ ಗುರುತರ ಜವಾಬ್ದಾರಿ
ವಿಮಾನ ತಯಾರಿಕೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 05, 2024 | 10:53 AM

Share

ನವದೆಹಲಿ, ಸೆಪ್ಟೆಂಬರ್ 5: ಸೆಮಿಕಂಡಕ್ಟರ್ ಉತ್ಪಾದನೆಗೆ ಹೆಜ್ಜೆ ಇಟ್ಟಿರುವ ರೀತಿಯಲ್ಲಿ ವಿಮಾನಗಳ ತಯಾರಿಕೆಗೂ ಭಾರತ ಸಾಹಸಕ್ಕೆ ಕೈಹಾಕಲು ನಿರ್ಧರಿಸಿದಂತಿದೆ. ಭಾರತದಲ್ಲಿ ವಿಮಾನಗಳ ತಯಾರಿಕೆ (Aircraft manufacturing) ಕಾರ್ಯವನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಕೇಂದ್ರ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿನ್ನೆ ನಡೆದ ಸಮಾವೇಶವೊಂದರಲ್ಲಿ ಮಾತನಾಡುತ್ತಿದ್ದ ಅವರು, ಏರ್​ಕ್ರಾಫ್ಟ್ ಮ್ಯಾನುಫ್ಯಾಕ್ಚರಿಂಗ್​ನಲ್ಲಿ ಭಾರತವನ್ನು ವಿಶ್ವದ ಅಡ್ಡೆಯನ್ನಾಗಿ ಮಾಡುವ ಗುರಿ ಇದೆ ಎಂದಿದ್ದಾರೆ. ಇದಕ್ಕಾಗಿ ಸ್ಪೆಷಲ್ ಪರ್ಪೋಸ್ ವೆಹಿಕಲ್ (ಎಸ್​​ಪಿವಿ) ಮೂಲಕ ಒಂದು ವಿಶೇಷ ತಂಡವನ್ನು ರಚಿಸುವ ಪ್ಲಾನ್ ಹೊಂದಿರುವುದನ್ನೂ ಅವರು ತಿಳಿಸಿದ್ದಾರೆ.

ವಿಶ್ವದಲ್ಲಿ ಬಹುತೇಕ ವಿಮಾನಗಳನ್ನು ತಯಾರಿಸುವುದು ಬೋಯಿಂಗ್ ಮತ್ತು ಏರ್​ಬಸ್ ಕಂಪನಿಗಳು. ಭಾರತದ ವಿಮಾನ ಸಂಸ್ಥೆಗಳ ಬಳಿ ಇರುವ ಎಲ್ಲಾ ವಿಮಾನಗಳು ಬೋಯಿಂಗ್ ಅಥವಾ ಏರ್​​ಬಸ್ ಕಂಪನಿಗಳದ್ದೇ ಆಗಿವೆ. ಹೆಚ್ಚಿನವನ್ನು ಎರವಲು ಪಡೆದುಕೊಂಡು ಸೇವೆಗೆ ಬಳಸಲಾಗಿದೆ. ಈಗ ಭಾರತದಲ್ಲೇ ದೇಶೀಯವಾಗಿ ವಿಮಾನಗಳನ್ನು ನಿರ್ಮಾಣ ಮಾಡುವ ಗುರಿ ಸರ್ಕಾರಕ್ಕಿದೆ. ಇದರಿಂದ ಸಾಕಷ್ಟು ಹಣ ಉಳಿತಾಯವಾಗುವ ನಿರೀಕ್ಷೆ ಇದೆ. ಹಾಗೂ ವೈಮಾನಿಕ ಕ್ಷೇತ್ರದಲ್ಲಿ ಭಾರತ ಸ್ವಾವಲಂಬನೆ ಸಾಧಿಸುವ ಸಂಭವ ಇದೆ.

ಭಾರತದಲ್ಲಿ ವಿಮಾನ ತಯಾರಿಕೆ ಕಾರ್ಯಕ್ಕೆ ಹಲವು ಸವಾಲುಗಳಿವೆ. ಯಾವ ಭಾರತೀಯ ಕಂಪನಿಗಳಿಗೆ ವಿಮಾನ ತಯಾರಿಕೆಯ ತಂತ್ರಜ್ಞಾನ ತಿಳಿದಿಲ್ಲ. ಎಂಜಿನ್ ಇತ್ಯಾದಿ ಪ್ರಮುಖ ಭಾಗಗಳಿಗೆ ವಿದೇಶೀ ಕಂಪನಿಗಳನ್ನು ಅವಲಂಬಿಸುವುದು ಅನಿವಾರ್ಯ. ಇವೆಲ್ಲವನ್ನೂ ಮೀರಿ ವಿಮಾನ ತಯಾರಿಕೆಗೆ ಅಡಿ ಇಡುವುದು ಸರಕಾರದ ನಿರ್ಧಾರವಾಗಿದೆ. ತಯಾರಿಕೆಗೆ ಅಗತ್ಯವಾದ ಮೂಲಭೂತ ಸೌಕರ್ಯದಲ್ಲಿ ಯಾವುದಾದರೂ ಕೊರತೆ ಕಂಡುಬಂದರೆ ಅದನ್ನು ಪತ್ತೆ ಮಾಡಿ ನೀಗಿಸುವುದು ಎಸ್​ಪಿವಿ ತಂಡದ ಗುರಿಯಾಗಿರುತ್ತದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ವಿಶ್ವದ ಅತಿದೊಡ್ಡ ವ್ಯಾಪಾರ ಬಳಗವಾದ ಆರ್​ಸಿಇಪಿಯಿಂದ ಭಾರತ ಹೊರಬೀಳಲು ಏನು ಕಾರಣ?

ಸರ್ಕಾರದ ಈ ಗುರಿಯಲ್ಲಿ ಎಚ್​ಎಎಲ್ ಪಾತ್ರ ಮಹತ್ವದ್ದಿರಲಿದೆ. ಎಚ್​ಎಎಲ್​ಗೆ ಯುದ್ಧವಿಮಾನಗಳನ್ನು ತಯಾರಿಸಿರುವ ಅನುಭವ ಇದೆ. 119 ಸೀಟುಗಳಿರುವ ವಿಮಾನವನ್ನೂ ಅದು ತಯಾರಿಸಿದೆ. ಹೀಗಾಗಿ, ಬೆಂಗಳೂರು ಮೂಲದ ಈ ಸಂಸ್ಥೆಯ ಮೇಲೆ ಗುರುತರ ಜವಾಬ್ದಾರಿ ಬೀಳುವ ಸಂಭವ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!