Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ

ಪೋಸ್ಟ್ ಆಫೀಸ್ ಖಾತೆಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಅಥವಾ ವರ್ಗಾಯಿಸಲು ವಿಶೇಷ ಪರಿಶೀಲನೆಯನ್ನು ಮಾಡುವುದು ಅವಶ್ಯಕವಾಗಿದೆ. ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ
ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಡ್ರಾ ಮಾಡಬೇಕಾದರೆ ವಿಶೇಷ ಪರಿಶೀಲನೆ ಅವಶ್ಯಕ
Follow us
TV9 Web
| Updated By: Rakesh Nayak Manchi

Updated on:Sep 26, 2022 | 9:39 AM

ಅಂಚೆ ಕಚೇರಿ ಉಳಿತಾಯ ಖಾತೆ (Post Office Savings Account)ಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು (Withdrawal) ಅಥವಾ ಅದನ್ನು ಯಾರಿಗಾದರೂ ವರ್ಗಾಯಿಸಲು (Transactions) ಬಯಸಿದರೆ ನೀವು ವಿಶೇಷ ಪರಿಶೀಲನೆ (Special Verification)ಯನ್ನು ಮಾಡಬೇಕಾಗುತ್ತದೆ. ಆಗ ಮಾತ್ರ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟು ಮಾಡಬಹುದು. ಏಕೆಂದರೆ ಪರಿಶೀಲನೆ ಇಲ್ಲದೆ ನೀವು 10 ಸಾವಿರಕ್ಕಿಂತ ಹೆಚ್ಚಿನ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನೀವು ನಿಯಮಿತವಾಗಿ ಅಂಚೆ ಕಚೇರಿಯಲ್ಲಿನ ಉಳಿತಾಯ ಖಾತೆಯಿಂದ ಹಣವನ್ನು ಹಿಂಪಡೆಯಬಹುದು. ಆದರೆ ಇದೇ ಖಾತೆಯಿಂದ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ನಡೆಸಬೇಕಾದರೆ ಅದಕ್ಕಿರುವ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಅಂಚೆ ಕಚೇರಿಯಲ್ಲಿ ಖಾತೆಯನ್ನು ಹೊಂದಿದ್ದರೆ ಈ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳುಬಹುದು ಬಹಳ ಮುಖ್ಯ.

ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿರುವಂತೆ ಗ್ರಾಹಕರು 10,000 ರೂ.ಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಬಯಸಿದರೆ ಇದಕ್ಕಾಗಿ ಅವರು ವಿಶೇಷ ಪರಿಶೀಲನೆ ಮಾಡಬೇಕಾಗುತ್ತದೆ. ಈ ಬಗ್ಗೆ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸಿಂಗಲ್ ಹ್ಯಾಂಡ್ ಪೋಸ್ಟ್ ಆಫೀಸ್‌ಗಳಲ್ಲಿ ಹೆಚ್ಚಿನ ಹಿಂಪಡೆಯುವಿಕೆಗಾಗಿ ಪರಿಶೀಲನೆ ಪ್ರಕ್ರಿಯೆಯನ್ನು ತೆಗೆದುಹಾಕಲಾಗಿದೆ. ಇದಲ್ಲದೆ ಕೆಲವು ಷರತ್ತುಗಳಲ್ಲಿ ಅಂಚೆ ಕಛೇರಿಯಿಂದ ವಹಿವಾಟುಗಳನ್ನು ಸಹ ಪರಿಶೀಲಿಸಬಹುದು. ಅಂಚೆ ಕಚೇರಿಯಲ್ಲಿ ಬ್ಯಾಂಕಿಂಗ್ ವಂಚನೆ ತಡೆಯಲು ಇಂತಹ ನಿಯಮಗಳನ್ನು ತರಲಾಗಿದೆ. ಇದರಿಂದ ವಂಚನೆ ಪ್ರಕರಣಗಳು ಕಡಿಮೆಯಾಗಲಿವೆ. ಇದರೊಂದಿಗೆ ಜನರನ್ನು ವಂಚನೆಗೆ ಬಲಿಯಾಗದಂತೆ ಸುರಕ್ಷಿತವಾಗಿರಿಸಬಹುದು.

ನೀವು ವಿಶೇಷ ಪರಿಶೀಲನೆಗಾಗಿ ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೊಬೈಲ್ ಸಂಖ್ಯೆಯನ್ನು ಪೋಸ್ಟ್ ಆಫೀಸ್ ಖಾತೆಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಬ್ಯಾಂಕಿಂಗ್‌ಗೆ ಸಂಬಂಧಿಸಿದ ವಂಚನೆ ತಡೆಯಲು ಜಾರಿಗೆ ತಂದಿರುವ ನಿಯಮಗಳ ಹೊರತಾಗಿ ಹಿಂಪಡೆಯುವ ಮಿತಿಯನ್ನೂ ಅಂಚೆ ಇಲಾಖೆ ಹೆಚ್ಚಿಸಿದೆ. ಈ ಹಿಂದೆ ಖಾತೆದಾರರು 5000 ರೂ.ವರೆಗೆ ಮಾತ್ರ ಹಿಂಪಡೆಯಬಹುದಾಗಿತ್ತು. ಆದರೆ ಈಗ ಅದನ್ನು 20,000 ರೂ.ಗೆ ಹೆಚ್ಚಿಸಲಾಗಿದೆ. ಇದಲ್ಲದೇ ಯಾವುದೇ ಗ್ರಾಹಕರ ಖಾತೆಯಲ್ಲಿ 50 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ಶಾಖೆಯ ಪೋಸ್ಟ್ ಮಾಸ್ಟರ್ ಸ್ವೀಕರಿಸುವುದಿಲ್ಲ.

ದೇಶದ ಯಾವುದೇ ಪ್ರಜೆಯು ಅಂಚೆ ಕಛೇರಿಯಲ್ಲಿ ತನ್ನ ಖಾತೆಯನ್ನು ಸುಲಭವಾಗಿ ತೆರೆಯಬಹುದು. ಇಲ್ಲಿ ಮಿನಿಮಮ್ ಬ್ಯಾಲೆನ್ಸ್ ಆಗಿ 500 ರೂಪಾಯಿ ಕಾಯ್ದುಕೊಳ್ಳಬೇಕು. ಸದ್ಯ ಈ ಖಾತೆಗೆ ಶೇ.4ರಷ್ಟು ಬಡ್ಡಿ ನೀಡಲಾಗುತ್ತಿದೆ. ಇದು ಇತರ ಉಳಿತಾಯ ಖಾತೆಗಳಿಗಿಂತ ಹೆಚ್ಚು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Mon, 26 September 22

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ