AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ

ಪೋಸ್ಟ್ ಆಫೀಸ್ ಖಾತೆಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಅಥವಾ ವರ್ಗಾಯಿಸಲು ವಿಶೇಷ ಪರಿಶೀಲನೆಯನ್ನು ಮಾಡುವುದು ಅವಶ್ಯಕವಾಗಿದೆ. ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ಇದನ್ನು ಉಲ್ಲೇಖಿಸಲಾಗಿದೆ.

Post Office: ನೀವು ಅಂಚೆ ಕಚೇರಿಯಲ್ಲಿ ಖಾತೆ ಹೊಂದಿದ್ದೀರಾ? ಹಣಕಾಸಿನ ವಹಿವಾಟಿನ ಹೊಸ ನಿಬಂಧನೆ ತಿಳಿದುಕೊಳ್ಳಿ
ಹತ್ತು ಸಾವಿರಕ್ಕಿಂತ ಹೆಚ್ಚಿನ ಹಣ ಡ್ರಾ ಮಾಡಬೇಕಾದರೆ ವಿಶೇಷ ಪರಿಶೀಲನೆ ಅವಶ್ಯಕ
TV9 Web
| Edited By: Rakesh Nayak Manchi|

Updated on:Sep 26, 2022 | 9:39 AM

Share

ಅಂಚೆ ಕಚೇರಿ ಉಳಿತಾಯ ಖಾತೆ (Post Office Savings Account)ಯಿಂದ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು (Withdrawal) ಅಥವಾ ಅದನ್ನು ಯಾರಿಗಾದರೂ ವರ್ಗಾಯಿಸಲು (Transactions) ಬಯಸಿದರೆ ನೀವು ವಿಶೇಷ ಪರಿಶೀಲನೆ (Special Verification)ಯನ್ನು ಮಾಡಬೇಕಾಗುತ್ತದೆ. ಆಗ ಮಾತ್ರ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟು ಮಾಡಬಹುದು. ಏಕೆಂದರೆ ಪರಿಶೀಲನೆ ಇಲ್ಲದೆ ನೀವು 10 ಸಾವಿರಕ್ಕಿಂತ ಹೆಚ್ಚಿನ ವಹಿವಾಟು ಮಾಡಲು ಸಾಧ್ಯವಾಗುವುದಿಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿ. ನೀವು ನಿಯಮಿತವಾಗಿ ಅಂಚೆ ಕಚೇರಿಯಲ್ಲಿನ ಉಳಿತಾಯ ಖಾತೆಯಿಂದ ಹಣವನ್ನು ಹಿಂಪಡೆಯಬಹುದು. ಆದರೆ ಇದೇ ಖಾತೆಯಿಂದ ನೀವು 10 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ನಡೆಸಬೇಕಾದರೆ ಅದಕ್ಕಿರುವ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ನೀವು ಅಂಚೆ ಕಚೇರಿಯಲ್ಲಿ ಖಾತೆಯನ್ನು ಹೊಂದಿದ್ದರೆ ಈ ನಿಯಮಗಳ ಬಗ್ಗೆ ನೀವು ತಿಳಿದುಕೊಳ್ಳುಬಹುದು ಬಹಳ ಮುಖ್ಯ.

ಆಗಸ್ಟ್ 25 ರಂದು ಸಂವಹನ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಿರುವಂತೆ ಗ್ರಾಹಕರು 10,000 ರೂ.ಗಿಂತ ಹೆಚ್ಚಿನ ಹಣವನ್ನು ಹಿಂಪಡೆಯಲು ಬಯಸಿದರೆ ಇದಕ್ಕಾಗಿ ಅವರು ವಿಶೇಷ ಪರಿಶೀಲನೆ ಮಾಡಬೇಕಾಗುತ್ತದೆ. ಈ ಬಗ್ಗೆ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ. ಆದರೆ ಸಿಂಗಲ್ ಹ್ಯಾಂಡ್ ಪೋಸ್ಟ್ ಆಫೀಸ್‌ಗಳಲ್ಲಿ ಹೆಚ್ಚಿನ ಹಿಂಪಡೆಯುವಿಕೆಗಾಗಿ ಪರಿಶೀಲನೆ ಪ್ರಕ್ರಿಯೆಯನ್ನು ತೆಗೆದುಹಾಕಲಾಗಿದೆ. ಇದಲ್ಲದೆ ಕೆಲವು ಷರತ್ತುಗಳಲ್ಲಿ ಅಂಚೆ ಕಛೇರಿಯಿಂದ ವಹಿವಾಟುಗಳನ್ನು ಸಹ ಪರಿಶೀಲಿಸಬಹುದು. ಅಂಚೆ ಕಚೇರಿಯಲ್ಲಿ ಬ್ಯಾಂಕಿಂಗ್ ವಂಚನೆ ತಡೆಯಲು ಇಂತಹ ನಿಯಮಗಳನ್ನು ತರಲಾಗಿದೆ. ಇದರಿಂದ ವಂಚನೆ ಪ್ರಕರಣಗಳು ಕಡಿಮೆಯಾಗಲಿವೆ. ಇದರೊಂದಿಗೆ ಜನರನ್ನು ವಂಚನೆಗೆ ಬಲಿಯಾಗದಂತೆ ಸುರಕ್ಷಿತವಾಗಿರಿಸಬಹುದು.

ನೀವು ವಿಶೇಷ ಪರಿಶೀಲನೆಗಾಗಿ ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಮೊಬೈಲ್ ಸಂಖ್ಯೆಯನ್ನು ಪೋಸ್ಟ್ ಆಫೀಸ್ ಖಾತೆಗೆ ಲಿಂಕ್ ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಬ್ಯಾಂಕಿಂಗ್‌ಗೆ ಸಂಬಂಧಿಸಿದ ವಂಚನೆ ತಡೆಯಲು ಜಾರಿಗೆ ತಂದಿರುವ ನಿಯಮಗಳ ಹೊರತಾಗಿ ಹಿಂಪಡೆಯುವ ಮಿತಿಯನ್ನೂ ಅಂಚೆ ಇಲಾಖೆ ಹೆಚ್ಚಿಸಿದೆ. ಈ ಹಿಂದೆ ಖಾತೆದಾರರು 5000 ರೂ.ವರೆಗೆ ಮಾತ್ರ ಹಿಂಪಡೆಯಬಹುದಾಗಿತ್ತು. ಆದರೆ ಈಗ ಅದನ್ನು 20,000 ರೂ.ಗೆ ಹೆಚ್ಚಿಸಲಾಗಿದೆ. ಇದಲ್ಲದೇ ಯಾವುದೇ ಗ್ರಾಹಕರ ಖಾತೆಯಲ್ಲಿ 50 ಸಾವಿರ ರೂಪಾಯಿಗಿಂತ ಹೆಚ್ಚಿನ ವಹಿವಾಟುಗಳನ್ನು ಶಾಖೆಯ ಪೋಸ್ಟ್ ಮಾಸ್ಟರ್ ಸ್ವೀಕರಿಸುವುದಿಲ್ಲ.

ದೇಶದ ಯಾವುದೇ ಪ್ರಜೆಯು ಅಂಚೆ ಕಛೇರಿಯಲ್ಲಿ ತನ್ನ ಖಾತೆಯನ್ನು ಸುಲಭವಾಗಿ ತೆರೆಯಬಹುದು. ಇಲ್ಲಿ ಮಿನಿಮಮ್ ಬ್ಯಾಲೆನ್ಸ್ ಆಗಿ 500 ರೂಪಾಯಿ ಕಾಯ್ದುಕೊಳ್ಳಬೇಕು. ಸದ್ಯ ಈ ಖಾತೆಗೆ ಶೇ.4ರಷ್ಟು ಬಡ್ಡಿ ನೀಡಲಾಗುತ್ತಿದೆ. ಇದು ಇತರ ಉಳಿತಾಯ ಖಾತೆಗಳಿಗಿಂತ ಹೆಚ್ಚು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:37 am, Mon, 26 September 22

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ