AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 5.08; ತರಕಾರಿ ಬೆಲೆ ಏರಿಕೆ ಪ್ರಮುಖ ಕಾರಣ

India retail inflation in 2024 June: ಸಿಪಿಐ ಅಥವಾ ಗ್ರಾಹಕ ಬೆಲೆ ಅನುಸೂಚಿ ಆಧಾರಿತ ರೀಟೇಲ್ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 5.08ಕ್ಕೆ ಏರಿದೆ. ಹಿಂದಿನ ತಿಂಗಳು ಮತ್ತು ಹಿಂದಿನ ವರ್ಷಕ್ಕೆ ಹೋಲಿಸಿದರೆ ಇನ್​ಫ್ಲೇಷನ್ ತುಸು ಏರಿಕೆ ಆಗಿದೆ. ತರಕಾರಿ ಹಣದುಬ್ಬರ ಶೇ. 16ಕ್ಕಿಂತಲೂ ಹೆಚ್ಚಿದೆ. ಬೇಳೆ ಕಾಳುಗಳ ಹಣದುಬ್ಬರವೂ ಗಣನೀಯವಾಗಿ ಹೆಚ್ಚಾಗಿದೆ.

ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 5.08; ತರಕಾರಿ ಬೆಲೆ ಏರಿಕೆ ಪ್ರಮುಖ ಕಾರಣ
ಹಣದುಬ್ಬರ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2024 | 6:32 PM

Share

ನವದೆಹಲಿ, ಜುಲೈ 12: ಭಾರತದಲ್ಲಿ ಬೆಲೆ ಏರಿಕೆಗೆ ಕಡಿವಾಣ ಹಾಕುವ ಸರ್ಕಾರದ ಕ್ರಮಗಳು ನಿರೀಕ್ಷಿತ ಗುರಿ ಸಾಧನೆ ಆಗುತ್ತಿಲ್ಲ. ಜೂನ್ ತಿಂಗಳ ಗ್ರಾಹಕ ಬೆಲೆ ಅನುಸೂಚಿ (CPI) ಆಧಾರಿತವಾದ ಹಣದುಬ್ಬರದ ಮಾಹಿತಿ ಹೊರಬಂದಿದ್ದು, ಈ ರೀಟೇಲ್ ಇನ್​ಫ್ಲೇಶನ್ ಶೇ. 5.08ರಷ್ಟು ಇರುವುದು ಗೊತ್ತಾಗಿದೆ. ಇಂದು ಶುಕ್ರವಾರ ಸರ್ಕಾರ (ರಾಷ್ಟ್ರೀಯ ಸಾಂಖ್ಯಿಕ ಕಚೇರಿ) ಬಿಡುಗಡೆ ಮಾಡಿದ ದತ್ತಾಂಶದಲ್ಲಿ ಈ ಮಾಹಿತಿ ಇದೆ. ಕಳೆದ ನಾಲ್ಕು ತಿಂಗಳಲ್ಲೇ ಇದು ಗರಿಷ್ಠ ಹಣದುಬ್ಬರ ದರವಾಗಿದೆ. ಹಿಂದಿನ ತಿಂಗಳು, ಅಂದರೆ ಮೇ ನಲ್ಲಿ ರೀಟೇಲ್ ಹಣದುಬ್ಬರ ಶೇ. 4.75ರಷ್ಟಿತ್ತು. ಕಳೆದ ವರ್ಷದ (2023) ಜೂನ್ ತಿಂಗಳಲ್ಲಿ ಹಣದುಬ್ಬರ ಶೇ. 4.87 ಇತ್ತು. ಫೆಬ್ರುವರಿ ತಿಂಗಳಲ್ಲಿ ಅದು ಶೇ. 5.09 ಇತ್ತು. ಆ ಬಳಿಕ ಗರಿಷ್ಠ ಮಟ್ಟ ಮುಟ್ಟಿದ್ದು ಈ ಜೂನ್ ತಿಂಗಳಲ್ಲೇ.

ಗ್ರಾಮೀಣ ಭಾಗದ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 5.67ರಷ್ಟಿದೆ. 2024ರ ಮೇ ತಿಂಗಳಲ್ಲಿ ಶೇ. 5.34, ಮತ್ತು 2023ರ ಜೂನ್ ತಿಂಗಳಲ್ಲಿ ಶೇ. 4.78 ರಷ್ಟಿತ್ತು. ನಗರಭಾಗದ ಹಣದುಬ್ಬರ ತುಸು ಉತ್ತಮ ಸ್ಥಿತಿಯಲ್ಲಿದೆ. ಕಳೆದ ವರ್ಷದ ಜೂನ್ ತಿಂಗಳಿಗೆ ಹೋಲಿಸಿದರೆ ಈ ಬಾರಿ ನಗರ ಭಾಗದ ಹಣದುಬ್ಬರ ಕಡಿಮೆ ಆಗಿದೆ. ಎನ್​ಎಸ್​ಒ ದತ್ತಾಂಶದ ಪ್ರಕಾರ ನಗರಭಾಗದ ಹಣದುಬ್ಬರ 2023ರ ಜೂನ್ ತಿಂಗಳಲ್ಲಿ ಶೇ. 4.96ರಷ್ಟಿತ್ತು. ಈ ಜೂನ್​ನಲ್ಲಿ ಅದು ಶೇ. 4.39ಕ್ಕೆ ಇಳಿದಿದೆ. ಆದರೆ, ಹಿಂದಿನ ತಿಂಗಳಿಗೆ ಹೋಲಿಸಿದರೆ ಇಲ್ಲಿ ಇನ್​ಫ್ಲೇಷನ್ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಅರ್ಬನ್ ಇನ್​ಫ್ಲೇಷನ್ ಶೇ. 4.21ರಷ್ಟಿತ್ತು.

ಇನ್ನು, ಆಹಾರ ಹಣದುಬ್ಬರ ಜೂನ್ ತಿಂಗಳಲ್ಲಿ ಶೇ. 9.55ಕ್ಕೆ ಹೆಚ್ಚಾಗಿದೆ. ಮೇ ತಿಂಗಳಲ್ಲಿ ಶೇ. 8.69ರಷ್ಟಿತ್ತು ಇದರ ದರ. ಕಳೆದ ವರ್ಷದ ಜೂನ್ ತಿಂಗಳಲ್ಲಿ ಆಹಾರ ಹಣದುಬ್ಬರ ಶೇ. 4.55 ಇತ್ತು. ತರಕಾರಿಗಳ ಬೆಲೆ ಏರಿಕೆ ಅಥವಾ ಹಣದುಬ್ಬರ ಶೇ. 29.32ಕ್ಕೆ ಏರಿದೆ. ಬೇಳೆ ಕಾಳುಗಳ ಹಣದುಬ್ಬರ ಶೇ. 16.1ರಷ್ಟಿದೆ.

ಇದನ್ನೂ ಓದಿ: ಪಿಎಂ ಕಿಸಾನ್ ಎಐ ಚಾಟ್​ಬೋಟ್ ಬಳಸಿದ್ದೀರಾ? ಕಿಸಾನ್ ಇಮಿತ್ರಾ ಬಗ್ಗೆ ಇಲ್ಲಿದೆ ಡೀಟೇಲ್ಸ್

ತರಕಾರಿ ಬೆಲೆಗಳ ಹೆಚ್ಚಳವು ಜೂನ್ ತಿಂಗಳ ಒಟ್ಟಾರೆ ಹಣದುಬ್ಬರ ಏರಿಕೆಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿರುವಂತಿದೆ. ‘ರೀಟೇಲ್ ಹಣದುಬ್ಬರ ನಾವು ನಿರೀಕ್ಷಿಸಿದುದಕ್ಕಿಂತಲೂ ತುಸು ಹೆಚ್ಚಿನ ಮಟ್ಟಕ್ಕೆ ಹೋಗಿದೆ. ಸದ್ಯೋಭವಿಷ್ಯದಲ್ಲಿ ಆಹಾರ ಹಣದುಬ್ಬರ ಹೆಚ್ಚಳ ಭೀತಿ ಇದ್ದೇ ಇದೆ. ಆದರೆ, ಹದವಾದ ಮಳೆ ಮತ್ತು ಸರಿಯಾದ ಬಿತ್ತನೆ ಆಗಿ ಬೆಲೆಗಳು ಹತೋಟಿಗೆ ಬರಬಹುದು ಎಂದು ನಿರೀಕ್ಷಿಸುತ್ತೇವೆ,’ ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ನ ಮುಖ್ಯ ಆರ್ಥಿಕ ತಜ್ಞೆ ಉಪಾಸನಾ ಭಾರದ್ವಜ್ ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ