AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್​ನಲ್ಲಿ ಭಾರತ ವಿರೋಧಿ ಸರ್ಕಾರ ಇದ್ದರೂ ಆ ದೇಶಕ್ಕೆ ಅವಶ್ಯಕ ವಸ್ತುಗಳ ಸರಬರಾಜು ಹೆಚ್ಚಿಸಲು ಭಾರತ ಸಮ್ಮತಿ

India Rises Export Quota to Maldives: ಮಾಲ್ಡೀವ್ಸ್ ದೇಶಕ್ಕೆ ಅವಶ್ಯಕ ವಸ್ತುಗಳ ರಫ್ತು ಕೋಟಾವನ್ನು ಭಾರತ ಹೆಚ್ಚಿಸಿದೆ. ಈರುಳ್ಳಿ, ಆಲೂಗಡ್ಡೆ ಇತ್ಯಾದಿ ಆಹಾರವಸ್ತುಗಳನ್ನು ಭಾರತದಿಂದ ಮಾಲ್ಡೀವ್ಸ್​ಗೆ ಆಗುತ್ತಿರುವ ಸರಬರಾಜು ಇನ್ನಷ್ಟು ಹೆಚ್ಚಲಿದೆ. ಮರಳು ಸರಬರಾಜಿನ ರಫ್ತು ಕೋಟಾವನ್ನು ಶೇ. 25ರಷ್ಟು ಹೆಚ್ಚಿಸಲಾಗಿದೆ. ಮಾಲ್ಡೀವ್ಸ್​ನ ಸರ್ಕಾರ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲಿ ಭಾರತ ವಿರೋಧಿ ಸರ್ಕಾರಿ ಇದ್ದರೂ ಮಾನವೀಯತೆಯ ಆಧಾರದಲ್ಲಿ ಭಾರತದಿಂದ ಈ ವಿನಾಯಿತಿ ನೀಡಲಾಗಿದೆ.

ಮಾಲ್ಡೀವ್ಸ್​ನಲ್ಲಿ ಭಾರತ ವಿರೋಧಿ ಸರ್ಕಾರ ಇದ್ದರೂ ಆ ದೇಶಕ್ಕೆ ಅವಶ್ಯಕ ವಸ್ತುಗಳ ಸರಬರಾಜು ಹೆಚ್ಚಿಸಲು ಭಾರತ ಸಮ್ಮತಿ
ಮಾಲ್ಡೀವ್ಸ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 05, 2024 | 6:19 PM

Share

ಮುಂಬೈ, ಏಪ್ರಿಲ್ 5: ಭಾರತ ವಿರೋಧಿ ನಿಲುವಿರುವ ಸರ್ಕಾರ ಅಸ್ತಿತ್ವದಲ್ಲಿದ್ದರೂ ಮಾಲ್ಡೀವ್ಸ್ ವಿಚಾರದಲ್ಲಿ ಭಾರತದ ಅನುಕಂಪ ಮುಂದುವರಿದಿದೆ. ವಿವಿಧ ಆಹಾರವಸ್ತುಗಳ ರಫ್ತಿಗೆ ನಿರ್ಬಂಧ ಹಾಕಲಾಗಿದ್ದರೂ ಮಾಲ್ಡೀವ್ಸ್ ದೇಶಕ್ಕೆ ಭಾರತ ವಿನಾಯಿತಿ ನೀಡಿದೆ. ಸಕ್ಕರೆ, ಗೋಧಿ, ಅಕ್ಕಿ, ಈರುಳ್ಳಿ ಇತ್ಯಾದಿ ಅಗತ್ಯ ವಸ್ತುಗಳನ್ನು (essential commodities) ಮಾಲ್ಡೀವ್ಸ್ ದೇಶಕ್ಕೆ ಸೀಮಿತ ಪ್ರಮಾಣದಲ್ಲಿ ರಫ್ತು ಮಾಡಲು ಭಾರತದ ಸರ್ಕಾರ ಅನುಮತಿಸಿದೆ. ಮಹತ್ವದ ದ್ವಿಪಕ್ಷೀಯ ಒಪ್ಪಂದದಲ್ಲಿ (bilateral mechanism) ರಫ್ತು ಕೋಟಾ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ. ಭಾರತೀಯ ರಾಯಭಾರ ಅಧಿಕಾರಿಗಳ (Indian high commission) ಹೇಳಿಕೆಯನ್ನು ಉಲ್ಲೇಖಿಸಿರುವ ಈ ವರದಿ ಪ್ರಕಾರ ಗೋದಿ, ಅಕ್ಕಿ, ಈರುಳ್ಳಿ ಇತ್ಯಾದಿ ಅಗತ್ಯ ವಸ್ತುಗಳ ರಫ್ತು ಕೋಟಾವನ್ನು ಶೇ. 5ರಷ್ಟು ಹೆಚ್ಚಿಸಲಾಗಿದೆ.

‘ಮಾಲ್ಡೀವ್ಸ್ ಸರ್ಕಾರದ ಮನವಿ ಮೇರೆಗೆ 2024-25ರ ವರ್ಷದಲ್ಲಿ ನಿರ್ದಿಷ್ಟ ಪ್ರಮಾಣದ ಅಗತ್ಯ ವಸ್ತುಗಳ ರಫ್ತಿಗೆ ಅನುಮಿತಸಲಾಗಿದೆ. ಈ ವಸ್ತುಗಳ ಕೋಟಾವನ್ನೂ ಹೆಚ್ಚಿಸಲಾಗಿದೆ. 1981ರಲ್ಲಿ ಚಾಲನೆಗೆ ಬಂದ ದ್ವಿಪಕ್ಷೀಯ ವ್ಯವಸ್ಥೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಅನುಮೋದಿತ ಪ್ರಮಾಣವು ಈವರೆಗಿನ ಗರಿಷ್ಠವೆನಿಸಿದೆ,’ ಎಂದು ರಾಯಭಾರ ಕಚೇರಿ ಅಧಿಕೃತವಾಗಿ ಹೇಳಿಕೆ ನೀಡಿದೆ.

ಇದನ್ನೂ ಓದಿ: 50 ರೂ ಇಟ್ಟುಕೊಂಡು ದೇಶ ಬಿಟ್ಟು, ಬ್ರೂನೇ ಸುಲ್ತಾನರಿಂದ ಶಭಾಷ್​ಗಿರಿ ಪಡೆಯುವ ಮಟ್ಟಕ್ಕೆ ಬೆಳೆದ ರಿಯಲ್ ಎಸ್ಟೇಟ್ ಕಿಂಗ್

ಮಾಲ್ಡೀವ್ಸ್​ನ ಕಟ್ಟಡ ನಿರ್ಮಾಣ ಉದ್ಯಮಕ್ಕೆ ಬೇಕಾದ ಅವಶ್ಯಕ ವಸ್ತುಗಳ ಕೋಟಾವನ್ನು ಹತ್ತು ಲಕ್ಷ ಎಂಟಿಗೆ ಏರಿಸಲಾಗಿದೆ. ನದಿಯ ಮರಳು ಮತ್ತು ಕಲ್ಲುಗಳ ಕೋಟಾವನ್ನು ಶೇ. 25ರಷ್ಟು ಹೆಚ್ಚಿಸಲಾಗಿದೆ ಎಂದು ತಿಳಿಸಲಾಗಿದೆ.

ಪಿಟಿಐ ಮಾಡಿದ ಟ್ವೀಟ್

ಹೇಳಿಕೆ ಪ್ರಕಾರ ಮೊಟ್ಟೆ, ಆಲೂಗಡ್ಡೆ, ಈರುಳ್ಳಿ, ಸಕ್ಕರೆ, ಅಕ್ಕಿ, ಗೋಧಿ ಹಿಟ್ಟು, ಬೇಳೆ ಕಾಳು ಇತ್ಯಾದಿ ಅಗತ್ಯ ಆಹಾರವಸ್ತುಗಳಿಗೂ ಶೇ. 5ರಷ್ಟು ರಫ್ತು ಕೋಟಾ ಹೆಚ್ಚಿಸಲಾಗಿದೆ.

ಭಾರತದಲ್ಲಿ ಆಹಾರವಸ್ತುಗಳ ಬೆಲೆ ಏರಿಕೆಯನ್ನು ತಪ್ಪಿಸಲು ಬಹಳಷ್ಟು ಬೆಳೆಗಳ ರಫ್ತಿಗೆ ನಿರ್ಬಂಧ ಹಾಕಿದೆ. ಆದರೆ, ಮಾಲ್ಡೀವ್ಸ್ ದೇಶಕ್ಕೆ ಭಾರತ ರಿಯಾಯಿತಿ ತೋರುತ್ತಿದ್ದು, ಅಕ್ಕಿ, ಸಕ್ಕರೆ ಮತ್ತು ಈರುಳ್ಳಿ ರಫ್ತನ್ನು 2023ರಿಂದಲೂ ಮುಂದುವರಿಸುತ್ತಿದೆ. ನೆರೆಯ ದೇಶಕ್ಕೆ ಆದ್ಯತೆ ನೀಡುವ ನೀತಿಯ ಭಾಗವಾಗಿ ಮಾಲ್ಡೀವ್ಸ್​ನ ಮಾನವ ಕೇಂದ್ರಿತ ಅಭಿವೃದ್ಧಿಗೆ ಬೆಂಬಲ ನೀಡಲು ಭಾರತ ಬದ್ಧವಾಗಿದೆ ಎಂದು ಇಂಡಿಯನ್ ಹೈಕಮಿಷನ್ ಹೇಳಿದೆ.

ಇದನ್ನೂ ಓದಿ: ವಿಶ್ವ ಶ್ರೀಮಂತರ ಪಟ್ಟಿಯಲ್ಲಿ ಮೊದಲ ಬಾರಿಗೆ ಮೈಸೂರಿನ ಉದ್ಯಮಿ ರಮೇಶ್​ಗೆ ಸ್ಥಾನ; ಚಂದ್ರಯಾನಕ್ಕೆ ಕೊಡುಗೆ ಕೊಟ್ಟಿದ್ದರ ಫಲಶ್ರುತಿ

ಮಾಲ್ಡೀವ್ಸ್ ದೇಶದ ಅಧ್ಯಕ್ಷರೂ ಸೇರಿದಂತೆ ಅಲ್ಲಿನ ಸಚಿವರು, ಸಂಸದರು ಭಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಚೀನಾದೊಂದಿಗೆ ಆಪ್ತವಾಗುತ್ತಿರುವ ಮಾಲ್ಡೀವ್ಸ್ ತನ್ನ ದೇಶದಿಂದ ಕಾಲ್ತೆಗೆಯುವಂತೆ ಭಾರತೀಯ ಸೈನಿಕರಿಗೆ ಡೆಡ್​ಲೈನ್ ಕೊಟ್ಟಿದೆ. ಇಂಥ ವೈರತ್ವ ತೋರುತ್ತಿರುವ ಮಾಲ್ಡೀವ್ಸ್ ದೇಶದ ಬಗ್ಗೆ ಭಾರತ ಮಾನವೀಯತೆಯ ಕಾರಣಕ್ಕೆ ಅನುಕಂಪ ತೋರುವುದನ್ನು ಮುಂದುವರಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು