AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ

ಭಾರತದ ಜಿಡಿಪಿ ಎರಡು ವರ್ಷಗಳಲ್ಲಿ ಅತ್ಯಂತ ಕಡಿಮೆಯಿದ್ದರೂ, ಆರ್ಥಿಕತೆಯೂ ವೇಗಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇತ್ತೀಚೆಗಷ್ಟೇ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತು ಅಕ್ಟೋಬರ್‌ ಬಳಿಕ ಸತತ ಎರಡು ತಿಂಗಳುಗಳ ಕಾಲ ಏರಿಕೆಯಾಗಿವೆ. ಹೀಗಾಗಿ ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆಯಾಗಿದ್ದು, 34.3 ಬಿಲಿಯನ್‌ಗೆ ತಲುಪಿದೆ ಎನ್ನಲಾಗಿದೆ.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 30, 2024 | 7:22 PM

Share

ಕಳೆದ ಎರಡು ವರ್ಷಗಳಲ್ಲಿ ದೇಶದ ಜಿಡಿಪಿಯೂ ಕುಸಿತ ಕಂಡಿದ್ದು, ಆದರೆ ದೇಶದ ಆರ್ಥಿಕತೆಯೂ ಬೆಳವಣಿಗೆಯತ್ತ ಸಾಗುತ್ತಿದೆ. ಇತ್ತ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತುಗಳು ಅಕ್ಟೋಬರ್‌ ನಿಂದ ಏರಿಕೆ ಕಂಡಿದೆ. ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆ ಕಂಡಿದ್ದು, 34.3 ಬಿಲಿಯನ್‌ಗೆ ತಲುಪಿದೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ದೇಶದ ಸೇವಾ ರಫ್ತು ಜುಲೈನಲ್ಲಿ 30.58 ಶತಕೋಟಿ ಡಾಲರ್‌ಗಳಿಂದ 30.34 ಶತಕೋಟಿ ಡಾಲರ್‌ಗೆ ಇಳಿದಿತ್ತು. ಆದಾದ ಬಳಿಕ ಸೆಪ್ಟೆಂಬರ್‌ ತಿಂಗಳಿನಲ್ಲಿ ಮತ್ತೆ 32.57 ಶತಕೋಟಿಗೆ ಏರಿತು.

ಆದರೆ ಇದೀಗ ಜಿಟಿಆರ್ ಐ ವರದಿಯಲ್ಲಿ ದೇಶದ ಸೇವಾ ರಫ್ತು 618.21 ಶತಕೋಟಿಗೆ ತಲುಪುತ್ತದೆ ಎಂದು ಉಲ್ಲೇಖಿಸಲಾಗಿದೆ. 2030 ರ ವೇಳೆಗೆ ಸೇವಾ ರಫ್ತು 613.04 ಶತಕೋಟಿಯಷ್ಟು ಸರಕು ರಫ್ತುಗಳಿಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. 2019 ರ ಹಣಕಾಸು ವರ್ಷ ಮತ್ತು 2024 ರ ಹಣಕಾಸು ವರ್ಷದ ನಡುವೆ, ಸೇವಾ ರಫ್ತುಗಳು ಐದು ವರ್ಷಗಳಲ್ಲಿ 10.5 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ (CAGR) ಏರಿಕೆಯನ್ನು ಕಂಡಿದೆ.

ಇದನ್ನೂ ಓದಿ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ವಿಮೆ! ಯೋಜನೆ ಕುರಿತಾದ ಮಾಹಿತಿ ಇಲ್ಲಿದೆ

ಇದು ಸರಕು ರಫ್ತಿನ 5.8 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ ಗಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೇ,’ಟೆಲಿಕಾಂ, ಕಂಪ್ಯೂಟರ್ ಮತ್ತು ಮಾಹಿತಿ ಸೇವೆಗಳ’ ಅಡಿಯಲ್ಲಿ ಸಾಫ್ಟ್‌ವೇರ್ ಮತ್ತು ಐಟಿ ಸೇವೆಗಳು 2024 ರಲ್ಲಿ ಭಾರತದ ಒಟ್ಟು ಸೇವಾ ರಫ್ತಿಗೆ 190.7 ಶತಕೋಟಿ ಕೊಡುಗೆ ನೀಡಿದೆ ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್