AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ

ಭಾರತದ ಜಿಡಿಪಿ ಎರಡು ವರ್ಷಗಳಲ್ಲಿ ಅತ್ಯಂತ ಕಡಿಮೆಯಿದ್ದರೂ, ಆರ್ಥಿಕತೆಯೂ ವೇಗಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇತ್ತೀಚೆಗಷ್ಟೇ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತು ಅಕ್ಟೋಬರ್‌ ಬಳಿಕ ಸತತ ಎರಡು ತಿಂಗಳುಗಳ ಕಾಲ ಏರಿಕೆಯಾಗಿವೆ. ಹೀಗಾಗಿ ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆಯಾಗಿದ್ದು, 34.3 ಬಿಲಿಯನ್‌ಗೆ ತಲುಪಿದೆ ಎನ್ನಲಾಗಿದೆ.

ಅಕ್ಟೋಬರ್‌ನಲ್ಲಿ ಶೇಕಡಾ 22.3 ರಷ್ಟು ಹೆಚ್ಚಳ ಕಂಡ ದೇಶದ ಸೇವಾ ರಫ್ತು, ವರದಿಯಲ್ಲಿ ಬಹಿರಂಗ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Nov 30, 2024 | 7:22 PM

Share

ಕಳೆದ ಎರಡು ವರ್ಷಗಳಲ್ಲಿ ದೇಶದ ಜಿಡಿಪಿಯೂ ಕುಸಿತ ಕಂಡಿದ್ದು, ಆದರೆ ದೇಶದ ಆರ್ಥಿಕತೆಯೂ ಬೆಳವಣಿಗೆಯತ್ತ ಸಾಗುತ್ತಿದೆ. ಇತ್ತ ರಿಸರ್ವ್ ಬ್ಯಾಂಕ್ ಅಂಕಿಅಂಶಗಳ ಪ್ರಕಾರ, ದೇಶದ ಸೇವಾ ರಫ್ತುಗಳು ಅಕ್ಟೋಬರ್‌ ನಿಂದ ಏರಿಕೆ ಕಂಡಿದೆ. ಅಕ್ಟೋಬರ್‌ನಲ್ಲಿ, ದೇಶದ ಸೇವಾ ರಫ್ತು ವಾರ್ಷಿಕ ಆಧಾರದ ಮೇಲೆ 22.3 ಪ್ರತಿಶತದಷ್ಟು ಏರಿಕೆ ಕಂಡಿದ್ದು, 34.3 ಬಿಲಿಯನ್‌ಗೆ ತಲುಪಿದೆ. ಇದಕ್ಕೂ ಮುನ್ನ ಆಗಸ್ಟ್‌ನಲ್ಲಿ ದೇಶದ ಸೇವಾ ರಫ್ತು ಜುಲೈನಲ್ಲಿ 30.58 ಶತಕೋಟಿ ಡಾಲರ್‌ಗಳಿಂದ 30.34 ಶತಕೋಟಿ ಡಾಲರ್‌ಗೆ ಇಳಿದಿತ್ತು. ಆದಾದ ಬಳಿಕ ಸೆಪ್ಟೆಂಬರ್‌ ತಿಂಗಳಿನಲ್ಲಿ ಮತ್ತೆ 32.57 ಶತಕೋಟಿಗೆ ಏರಿತು.

ಆದರೆ ಇದೀಗ ಜಿಟಿಆರ್ ಐ ವರದಿಯಲ್ಲಿ ದೇಶದ ಸೇವಾ ರಫ್ತು 618.21 ಶತಕೋಟಿಗೆ ತಲುಪುತ್ತದೆ ಎಂದು ಉಲ್ಲೇಖಿಸಲಾಗಿದೆ. 2030 ರ ವೇಳೆಗೆ ಸೇವಾ ರಫ್ತು 613.04 ಶತಕೋಟಿಯಷ್ಟು ಸರಕು ರಫ್ತುಗಳಿಗಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. 2019 ರ ಹಣಕಾಸು ವರ್ಷ ಮತ್ತು 2024 ರ ಹಣಕಾಸು ವರ್ಷದ ನಡುವೆ, ಸೇವಾ ರಫ್ತುಗಳು ಐದು ವರ್ಷಗಳಲ್ಲಿ 10.5 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ (CAGR) ಏರಿಕೆಯನ್ನು ಕಂಡಿದೆ.

ಇದನ್ನೂ ಓದಿ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ವಿಮೆ! ಯೋಜನೆ ಕುರಿತಾದ ಮಾಹಿತಿ ಇಲ್ಲಿದೆ

ಇದು ಸರಕು ರಫ್ತಿನ 5.8 ಶೇಕಡಾ ಸಂಯುಕ್ತ ವಾರ್ಷಿಕ ಬೆಳವಣಿಗೆ ದರದಲ್ಲಿ ಗಿಂತ ಎರಡು ಪಟ್ಟು ಹೆಚ್ಚಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅದಲ್ಲದೇ,’ಟೆಲಿಕಾಂ, ಕಂಪ್ಯೂಟರ್ ಮತ್ತು ಮಾಹಿತಿ ಸೇವೆಗಳ’ ಅಡಿಯಲ್ಲಿ ಸಾಫ್ಟ್‌ವೇರ್ ಮತ್ತು ಐಟಿ ಸೇವೆಗಳು 2024 ರಲ್ಲಿ ಭಾರತದ ಒಟ್ಟು ಸೇವಾ ರಫ್ತಿಗೆ 190.7 ಶತಕೋಟಿ ಕೊಡುಗೆ ನೀಡಿದೆ ಎಂದು ಮಾಹಿತಿ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್