AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ?

What is Pax Silica, that India has signed in to join: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಭಾರತವು ಪ್ಯಾಕ್ಸ್ ಸಿಲಿಕಾಗೆ ಸೇರ್ಪಡೆಯಾಗಲು ಡಿಕ್ಲರೇಶನ್​ಗೆ ಸಹಿ ಹಾಕಿದೆ. ಪ್ಯಾಕ್ಸ್ ಸಿಲಿಕಾ ಎಂಬುದು ಅಮೆರಿಕ ನೇತೃತ್ವದಲ್ಲಿ ರಚನೆಯಾಗಿರುವ ಅಂತಾರಾಷ್ಟ್ರೀಯ ಸಹಕಾರ ಗುಂಪು. ಸೆಮಿಕಂಡಕ್ಟರ್ ಚಿಪ್ ತಂತ್ರಜ್ಞಾನ ಅಭಿವೃದ್ಧಿಪಡಿಸಲು ಮತ್ತು ಪೂರೈಕೆ ಸರಪಳಿ ಬಲಪಡಿಸಲು ಇದನ್ನು ರಚಿಸಲಾಗಿದೆ.

ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆ; ಅಮೆರಿಕ ಸಂತಸ; ಏನಿದು ಹೊಸ ಒಪ್ಪಂದ?
ಸೆಮಿಕಂಡಕ್ಟರ್ ಚಿಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 20, 2026 | 12:08 PM

Share

ನವದೆಹಲಿ, ಫೆಬ್ರುವರಿ 20: ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ (Pax Silica) ಮೈತ್ರಿಕೂಟಕ್ಕೆ ಭಾರತ ಸೇರ್ಪಡೆಯಾಗುತ್ತಿದೆ. ಈ ಸಂಬಂಧ ಘೋಷಣೆಗೆ ಭಾರತ ಸಹಿ ಹಾಕಿದೆ. ದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಇಂಡಿಯಾ ಎಐ ಇಂಪ್ಯಾಕ್ಟ್ ಸಮಿಟ್ (India AI Impact Summit) ವೇಳೆ ಈ ಡಿಕ್ಲರೇಶನ್​ಗೆ ಭಾರತ ಸಹಿ ಹಾಕಿದೆ. ಭಾರತ ಮತ್ತು ಅಮೆರಿಕ ನಡುವೆ ಮುಕ್ತ ವ್ಯಾಪಾರ ಒಪ್ಪಂದ ಏರ್ಪಡುತ್ತಿರುವುದು, ಹಲವು ಇತರ ಉಪಕ್ರಮಗಳು ಜಾರಿಗೆ ಬರುತ್ತಿರುವುದರ ಮಧ್ಯೆ ಪ್ಯಾಕ್ಸ್ ಸಿಲಿಕಾಗೆ ಭಾರತ ಸೇರ್ಪಡೆಯಾಗುತ್ತಿರುವ ಬೆಳವಣಿಗೆ ನಡೆದಿದೆ. ಈ ಬೆಳವಣಿಗೆಯನ್ನು ಅಮೆರಿಕ ಸ್ವಾಗತಿಸಿದೆ. ಪ್ಯಾಕ್ಸ್ ಸಿಲಿಕಾಗೆ ಭಾರತ ಪ್ರವೇಶ ಮಾಡಿರುವುದು ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಲ್ಲಿ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮನ್ವಯತೆ ಸಾಧಿಸಲು ಸುಲಭವಾಗುತ್ತದೆ ಎಂದು ಅಮೆರಿಕದ ರಾಯಭಾರಿ ಸೆರ್ಗಿಯೋ ಗೋರ್ ಅಭಿಪ್ರಾಯಪಟ್ಟಿದ್ದಾರೆ.

ಏನಿದು ಪ್ಯಾಕ್ಸ್ ಸಿಲಿಕಾ?

ಪ್ಯಾಕ್ಸ್ ಎಂದರೆ ಲ್ಯಾಟಿನ್ ಭಾಷೆಯಲ್ಲಿ ಶಾಂತಿ ಎಂದರ್ಥ. ಸಿಲಿಕಾ ಎಂಬುದು ಸಿಲಿಕಾನ್ ಚಿಪ್. ಪ್ಯಾಕ್ಸ್ ಸಿಲಿಕಾ ಎಂಬುದು ಅಮೆರಿಕ ಸರ್ಕಾರದಿಂದಲೇ ಆರಂಭಿಸಲಾಗಿರುವ ಒಂದು ಅಂತಾರಾಷ್ಟ್ರೀಯ ಮೈತ್ರಿಗುಂಪು. ಕೃತಕ ಬುದ್ಧಿಮತ್ತೆ ಮತ್ತು ಪೂರೈಕೆ ಸರಪಳಿ ಭದ್ರತೆಯನ್ನು ಪ್ರಬಲಗೊಳಿಸುವುದು ಇದರ ಗುರಿ. ಮುಂದಿನ ತಲೆಮಾರಿನ ಕೈಗಾರಿಕೆಗಳಿಗೆ ಬೇಕಾದ ಪ್ರಮುಖ ಸಂಪನ್ಮೂಲಗಳ ಲಭ್ಯತೆಯನ್ನು ಖಚಿತಪಡಿಸಲು ಅಂತಾರಾಷ್ಟ್ರೀಯ ಮಟ್ಟದ ವ್ಯವಸ್ಥೆ ಇದು. ಹಾಗೆಯೇ, ಪರಸ್ಪರ ತಂತ್ರಜ್ಞಾನ ಸಹಕಾರ ಹೆಚ್ಚಿಸುವುದು ಇದರ ಗುರಿ.

ಇದನ್ನೂ ಓದಿ: ಬೆಂಗಳೂರಿನ ‘ಪರಮ್’ ಗೆ ಪ್ರಧಾನಿ ಮೋದಿ ಫಿದಾ! ಇದು ಭಾರತದ ಅತ್ಯಂತ ಶಕ್ತಿಶಾಲಿ ರೋಬೋಟ್ ನಾಯಿ

ಪ್ಯಾಕ್ಸ್ ಸಿಲಿಕಾದಲ್ಲಿ ಯಾವ್ಯಾವ ದೇಶಗಳಿವೆ…?

ಅಮೆರಿಕ ನೇತೃತ್ವದ ಪ್ಯಾಕ್ಸ್ ಸಿಲಿಕಾ ಗುಂಪಿನಲ್ಲಿ ಆಸ್ಟ್ರೇಲಿಯಾ, ಗ್ರೀಸ್, ಇಸ್ರೇಲ್, ಜಪಾನ್, ಕತಾರ್, ಸೌತ್ ಕೊರಿಯಾ, ಸಿಂಗಾಪುರ್, ಯುಎಇ ಮತ್ತು ಬ್ರಿಟನ್ (ಯುಕೆ) ದೇಶಗಳಿವೆ. ಈ ಗುಂಪಿನಲ್ಲಿ ಭಾರತವೂ ಒಂದು ಭಾಗವಾಗಿರುತ್ತದೆ.

ಪ್ಯಾಕ್ಸ್ ಸಿಲಿಕಾದಿಂದ ಭಾರತಕ್ಕೆ ಏನು ಉಪಯೋಗ?

ಎಐ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಸಾಧಿಸಲು ಅಗತ್ಯವಾದ ಕಚ್ಚಾ ವಸ್ತುಗಳ ಪೂರೈಕೆಯನ್ನು ಭಾರತ ಖಚಿತಪಡಿಸಿಕೊಳ್ಳಲು ಪ್ಯಾಕ್ಸ್ ಸಿಲಿಕಾ ಒಪ್ಪಂದ ಸಹಕಾರಿಯಾಗಬಹುದು. ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ಉದ್ಯಮದ ಬೆಳವಣಿಗೆಗೆ ಇದು ಅನುಕೂಲ ಮಾಡಿಕೊಡುತ್ತದೆ. ಚೀನಾ ಪ್ರಾಬಲ್ಯ ಹೊಂದಿರುವ ಕ್ರಿಟಿಕಲ್ ಮಿನರಲ್​ಗಳಿಗೆ ಪರ್ಯಾಯ ಪೂರೈಕೆ ಜಾಲ ಸ್ಥಾಪಿಸಲು ಅಮೆರಿಕ ಪ್ರಯತ್ನಿಸುತ್ತಿದ್ದು, ಪ್ಯಾಕ್ಸ್ ಸಿಲಿಕಾ ಈ ನಿಟ್ಟಿನಲ್ಲಿ ಒಂದು ಪ್ರಮುಖ ಉಪಕ್ರಮವಾಗಿದೆ. ಇದರ ಲಾಭ ಭಾರತಕ್ಕೂ ಸಿಗುತ್ತದೆ.

ಇದನ್ನೂ ಓದಿ: Sarvam AI: ಗೂಗಲ್ ಜೆಮಿನಿ, ಚಾಟ್‌ಜಿಪಿಟಿ ಹಿಂದಿಕ್ಕಿದ ಬೆಂಗಳೂರಿನ ‘ಸರ್ವಂ AI’ನ ಸಹ ಸಂಸ್ಥಾಪಕ ಪ್ರತ್ಯೂಷ್ ಕುಮಾರ್ ಯಾರು?

ಭಾರತದಲ್ಲಿ ಈಗಾಗಲೇ 10 ಸೆಮಿಕಂಡಕ್ಟರ್ ಘಟಕಗಳು ಸ್ಥಾಪನೆಯಾಗಿವೆ ಮತ್ತು ಸ್ಥಾಪನೆಯಾಗುವ ಹಂತದಲ್ಲಿವೆ. ಮೊದಲ ಸೆಮಿಕಂಡಕ್ಟರ್ ಘಟಕದಲ್ಲಿ ಸದ್ಯದಲ್ಲೇ ಕಮರ್ಷಿಯಲ್ ಉತ್ಪಾದನೆ ಆರಂಭವಾಗಲಿದೆ. ಮುಂದಿನ ಕೆಲ ವರ್ಷಗಳಲ್ಲಿ ಅನೇಕ ಘಟಕಗಳಲ್ಲಿ ಚಿಪ್​ಗಳನ್ನು ಕಮರ್ಷಿಯಲ್ ಆಗಿ ತಯಾರಿಸುವ ಕಾರ್ಯ ನಡೆಯಲಿದೆ. ಬಹಳ ಸಂಕೀರ್ಣವಾದ 2-ನ್ಯಾನೋಮೀಟರ್ ಚಿಪ್​ಗಳನ್ನು ಭಾರತದಲ್ಲಿ ವಿನ್ಯಾಸ ಮಾಡಲಾಗುತ್ತಿದೆ. ಪ್ಯಾಕ್ಸ್ ಸಿಲಿಕಾ ಮೈತ್ರಿಕೂಟಕ್ಕೆ ಸೇರ್ಪಡೆಯಾಗಿರುವುದರಿಂದ ಇಂಥ ಹೆಜ್ಜೆಗಳು ಸಲೀಸಾಗಿ ನಡೆದು ಹೋಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
ತನಗೆ ಮಂತ್ರಿಗಿರಿಯೇ ಬೇಡವೆಂದ ಕೆ.ಎನ್​​. ರಾಜಣ್ಣ!
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
SIR ಬಗ್ಗೆ ಭಯ ಬೇಡ: ಧೈರ್ಯ ಹೇಳಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಎಲ್ಲರೂ ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವಂತೆ ನೋಡಿಕೊಳ್ಳಿ ಎಂದ ಡಿಕೆಶಿ!
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಬೆಂಗಳೂರಿನಲ್ಲಿ ಫುಟ್​ಪಾತ್ ಅತಿಕ್ರಮಣ ತೆರವಿಗೆ ಇಂದೇ ಗಡುವು
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ಮತದಾರರ ಪಟ್ಟಿ ಪರಿಷ್ಕರಣೆ: ಸಿಎಂ ಮನೆಯಿಂದಲೇ ಎಸ್​ಐಆರ್​ಗೆ ಚಾಲನೆ!
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸ: ಕಮಿಷನರ್​​ ಏನಂದ್ರು?
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ ಭಾರಿ ಅಗ್ನಿ ಅವಘಡ
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ನೋಡಿ, ಎಂಥಾ ಅದ್ಭುತ ದೃಶ್ಯ! ಒಂದೇ ಮರದ ಮೇಲೆ ಕುಳಿತ ಎರಡು ಚಿರತೆಗಳು
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ
ಅಡ್ಡಮತದಾನ ಮಾಡಿಲ್ಲ: ಬೇಲೂರು ಬಿಜೆಪಿ ಶಾಸಕ ಸುರೇಶ್ ಆಣೆ-ಪ್ರಮಾಣ