AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smartphone Export: ಭಾರತದ ಸ್ಮಾರ್ಟ್​ಫೋನ್ ರಫ್ತು; ಸ್ಯಾಮ್ಸಂಗ್​ ಹಿಂದಿಕ್ಕಲಿದೆ ಆ್ಯಪಲ್

ಏಪ್ರಿಲ್ - ಅಕ್ಟೋಬರ್ ಅವಧಿಯಲ್ಲಿ ಭಾರತವು ಒಟ್ಟು 5 ಶತಕೋಟಿ ಡಾಲರ್​ ಮೌಲ್ಯದ ಸ್ಮಾರ್ಟ್​​ಫೋನ್​ಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಸ್ಮಾರ್ಟ್​​ಫೋನ್​ಗಳ ರಫ್ತು ಪ್ರಮಾಣದಲ್ಲಿ ಶೇಕಡಾ 127ರಷ್ಟು ಹೆಚ್ಚಾಗಿದೆ.

Smartphone Export: ಭಾರತದ ಸ್ಮಾರ್ಟ್​ಫೋನ್ ರಫ್ತು; ಸ್ಯಾಮ್ಸಂಗ್​ ಹಿಂದಿಕ್ಕಲಿದೆ ಆ್ಯಪಲ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 05, 2022 | 6:56 PM

Share

ನವದೆಹಲಿ: ಭಾರತದಿಂದ ಅತಿಹೆಚ್ಚು ಸ್ಮಾರ್ಟ್​ಫೋನ್​ಗಳನ್ನು (Smartphone) ರಫ್ತು (Export) ಮಾಡುವ ಕಂಪನಿಗಳ ಪೈಕಿ ದಕ್ಷಿಣ ಕೊರಿಯಾ ಮೂಲದ ಸ್ಯಾಮ್ಸಂಗ್​ (Samsung) ಅನ್ನು ಆ್ಯಪಲ್ (Apple) ಶೀಘ್ರದಲ್ಲೇ ಹಿಂದಿಕ್ಕುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಪ್ರಸಕ್ತ ಹಣಕಾಸು ವರ್ಷದ ಅಂತ್ಯದ ವೇಳೆಗೆ ಆ್ಯಪಲ್​ ಸ್ಮಾರ್ಟ್​ಫೋನ್​ಗಳ ರಫ್ತು ಹೆಚ್ಚಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಏಪ್ರಿಲ್ – ಅಕ್ಟೋಬರ್ ಅವಧಿಯಲ್ಲಿ 2.2 ಶತಕೋಟಿ ಡಾಲರ್ ಮೌಲ್ಯದ ಸ್ಮಾರ್ಟ್​ಫೋನ್​ಗಳನ್ನು ಆ್ಯಪಲ್​ ರಫ್ತು ಮಾಡಿದ್ದರೆ, ಸ್ಯಾಮ್ಸಂಗ್ 2.8 ಶತಕೋಟಿ ಡಾಲರ್ ಮೌಲ್ಯದ ಸ್ಮಾರ್ಟ್​​ಫೋನ್​ಗಳನ್ನು ರಫ್ತು ಮಾಡಿದೆ ಎಂದು ‘ಫೈನಾನ್ಶಿಯಲ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಏಪ್ರಿಲ್ – ಅಕ್ಟೋಬರ್ ಅವಧಿಯಲ್ಲಿ ಭಾರತವು ಒಟ್ಟು 5 ಶತಕೋಟಿ ಡಾಲರ್​ ಮೌಲ್ಯದ ಸ್ಮಾರ್ಟ್​​ಫೋನ್​ಗಳನ್ನು ರಫ್ತು ಮಾಡಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ವರ್ಷ ಸ್ಮಾರ್ಟ್​​ಫೋನ್​ಗಳ ರಫ್ತು ಪ್ರಮಾಣದಲ್ಲಿ ಶೇಕಡಾ 127ರಷ್ಟು ಹೆಚ್ಚಾಗಿದೆ. ಉತ್ಪಾದನೆ ಸಂಯೋಜಿತ ಭತ್ಯೆ (PLI) ಯೋಜನೆಯಡಿ ಉಭಯ ಕಂಪನಿಗಳು ಭಾರತದಲ್ಲಿ ಸ್ಮಾರ್ಟ್​​ಫೋನ್ ತಯಾರಿಸುತ್ತಿವೆ.

ಫಾಕ್ಸ್​ಕಾನ್, ಪೆಗಾಟ್ರಾನ್ ಹಾಗೂ ವಿಸ್ಟ್ರಾನ್​ ಕಂಪನಿಗಳು ಭಾರತದಲ್ಲಿ ಆ್ಯಪಲ್ ಸ್ಮಾರ್ಟ್​ಫೋನ್ ತಯಾರಿಸುತ್ತಿವೆ. 21ನೇ ಹಣಕಾಸು ವರ್ಷದ ಸ್ಮಾರ್ಟ್​ಫೋನ್ ರಫ್ತಿನಲ್ಲಿ ಆ್ಯಪಲ್ ಪಾಲು ಶೇಕಡಾ 10ರಷ್ಟು ಇದ್ದುದು 22ನೇ ಹಣಕಾಸು ವರ್ಷದಲ್ಲಿ ಶೇಕಡಾ 50ಕ್ಕೆ ತಲುಪಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: Tata Group: ಭಾರತದಲ್ಲಿ ಐಫೋನ್ ತಯಾರಿಸುವ ವಿಸ್ಟ್ರಾನ್ ಬೆಂಗಳೂರು ಘಟಕ ಖರೀದಿಗೆ ಟಾಟಾ ಒಲವು

ದೇಶದ ಎಲೆಕ್ಟ್ರಾನಿಕ್ಸ್ ರಫ್ತು 21ನೇ ಹಣಕಾಸು ವರ್ಷದ ಏಪ್ರಿಲ್ – ಅಕ್ಟೋಬರ್ ಅವಧಿಯಲ್ಲಿ 7.87 ಶತಕೋಟಿ ಡಾಲರ್ ಇದ್ದುದು, 22ನೇ ಹಣಕಾಸು ವರ್ಷದಲ್ಲಿ 12.14 ಶತಕೋಟಿ ಡಾಲರ್​ಗೆ ಹೆಚ್ಚಾಗಿದೆ. ಒಟ್ಟು ರಫ್ತಿನಲ್ಲಿ ಶೇಕಡಾ 30ರಷ್ಟು ಮೊಬೈಲ್ ಫೋನ್​ ಪಾಲಿದೆ.

ಸ್ಮಾರ್ಟ್‌ಫೋನ್ ರಫ್ತು ದ್ವಿಗುಣಗೊಂಡಿರುವುದು ಎಲೆಕ್ಟ್ರಾನಿಕ್ಸ್ ರಫ್ತು ಹೆಚ್ಚಳಕ್ಕೆ ಕಾರಣವಾಗಿದೆ. ಚೀನಾ ಹಾಗೂ ವಿಯೆಟ್ನಾಂ ಜತೆ ಪೈಪೋಟಿಗೂ ಕಾರಣವಾಗಿದೆ. ಪೂರೈಕೆ ಸರಪಳಿ, ಹೂಡಿಕೆ ಭಾವನೆ ಉನ್ನತ ಮಟ್ಟದಲ್ಲಿರುವಂತೆ ನಾವು ನೋಡಿಕೊಳ್ಳಬೇಕಿದೆ ಎಂದು ‘ಇಂಡಿಯಾ ಸೆಲ್ಯುಲರ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್​​ನ (ಐಸಿಇಎ)’ ಅಧ್ಯಕ್ಷ ಪಂಕಜ್ ಮೊಹಿಂದ್ರೂ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ