AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೆಟ್ ಸ್ಲೆಡ್ ಮೂಲಕ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಪರೀಕ್ಷಿಸುವ ಸಾಮರ್ಥ್ಯ ಸಾಬೀತುಪಡಿಸಿದ ಭಾರತ

India among very few nations capable of advance testing of fighter jet escape system: ಫೈಟರ್ ಜೆಟ್​ ಎಸ್ಕೇಪ್ ಸಿಸ್ಟಂ ಅನ್ನು ಹೈಸ್ಪೀಡ್ ರಾಕೆಟ್ ಸ್ಲೆಡ್ ಮೂಲಕ ಭಾರತ ಯಶಸ್ವಿಯಾಗಿ ಪರೀಕ್ಷೆ ನಡೆಸಿದೆ. ಈ ಅಡ್ವಾನ್ಸ್ಡ್ ಸಿಸ್ಟಂ ಅನ್ನು ಅಭಿವೃದ್ಧಿಪಡಿಸಲು ಡಿಆರ್​ಡಿಒ ಜೊತೆಗೆ ಎಡಿಎ ಮತ್ತು ಎಚ್​ಎಎಲ್ ಸಂಸ್ಥೆಗಳೂ ಕೈ ಜೋಡಿಸಿವೆ. ರಾಕೆಟ್ ಪ್ರೊಪಲ್ಷನ್ ಸಹಾಯದಿಂದ ಎರಡು ಹಳಿಗಳ ಮೇಲೆ ಎಸ್ಕೇಪ್ ಸಿಸ್ಟಂ ಅನ್ನು ಗಂಟೆಗೆ 800 ಕಿಮೀ ವೇಗದಲ್ಲಿ ಚಲಾಯಿಸಿ ಪರೀಕ್ಷೆ ಮಾಡಲಾಯಿತು.

ರಾಕೆಟ್ ಸ್ಲೆಡ್ ಮೂಲಕ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಪರೀಕ್ಷಿಸುವ ಸಾಮರ್ಥ್ಯ ಸಾಬೀತುಪಡಿಸಿದ ಭಾರತ
ರಾಕೆಟ್ ಸ್ಲೆಡ್ ಟೆಸ್ಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 03, 2025 | 3:12 PM

Share

ನವದೆಹಲಿ, ಡಿಸೆಂಬರ್ 3: ತುರ್ತು ಸಂದರ್ಭದಲ್ಲಿ ಫೈಟರ್ ಜೆಟ್​ನಿಂದ ಪೈಲಟ್ ಅಥವಾ ಸಿಬ್ಬಂದಿ ಹೊರ ಹಾರಲೆಂದು ವಿಶೇಷವಾದ ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಇರುತ್ತದೆ. ಈ ಎಸ್ಕೇಪ್ ಸಿಸ್ಟಂನ ಪರೀಕ್ಷೆ ಮಾಡುವ ವ್ಯವಸ್ಥೆ ಮತ್ತು ಸಾಮರ್ಥ್ಯ ಕೆಲವೇ ದೇಶಗಳಿಗೆ ಇರುವುದು. ಈ ನಾಲ್ಕೈದು ದೇಶಗಳ ಸಾಲಿಗೆ ಭಾರತವೂ ಸೇರ್ಪಡೆಯಾಗಿದೆ. ಇಂದು ಫೈಟರ್ ಜೆಟ್​ನ ಎಸ್ಕೇಪ್ ಸಿಸ್ಟಂ ಅನ್ನು ಹೈಸ್ಪೀಡ್ ರಾಕೆಟ್ ಸ್ಲೆಡ್ ಮೂಲಕ ಪರೀಕ್ಷೆ ಮಾಡಲಾಯಿತು. ಡಿಆರ್​ಡಿಒ ನಡೆಸಿದ ಈ ಮಹತ್ವದ ಪರೀಕ್ಷೆ ಯಶಸ್ವಿಯಾಗಿದೆ.

ಸಂಪೂರ್ಣ ಸಿಬ್ಬಂದಿ ರಕ್ಷಣೆ ಸೇರಿದಂತೆ ಹಲವು ಸುರಕ್ಷತಾ ಮಾನದಂಡಗಳನ್ನು ಇಟ್ಟುಕೊಂಡು, ರಾಕೆಟ್ ಸ್ಲೆಡ್ ಟೆಸ್ಟ್ ಮೂಲಕ ಎಸ್ಕೇಪ್ ಸಿಸ್ಟಂ ಅನ್ನು ಕಠಿಣ ಪರೀಕ್ಷೆಗೆ ಒಳಪಡಿಸಲಾಯಿತು.

ಡಿಆರ್​ಡಿಒ ದೇಶೀಯವಾಗಿ ಈ ಪರೀಕ್ಷಾ ತಂತ್ರಜ್ಞಾನ ಅಭಿವೃದ್ಧಿಪಡಿಸಿದೆ. ಇವತ್ತು ನಡೆಸಲಾದ ರಾಕೆಟ್ ಸ್ಲೆಡ್ ಟೆಸ್ಟ್​ನಲ್ಲಿ ಏರ್​ಕ್ರಾಫ್ಟ್ ಎಸ್ಕೆಪ್ ಸಿಸ್ಟಂ ಅನ್ನು ರಾಕೆಟ್ ಪ್ರೊಪಲ್ಷನ್ ಸಾಧನಕ್ಕೆ ಜೋಡಿಸಲಾಯಿತು. ನಂತರ ಅದನ್ನು ಎರಡು ಹಳಿಗಳ ಮೇಲೆ ನಿಯಂತ್ರಿತ ವೇಗದಲ್ಲಿ ಓಡಸಲಾಯಿತು. ಆಕಾಶದಲ್ಲಿ ಫೈಟರ್ ಜೆಟ್ ಓಡುವಷ್ಟು ವೇಗವನ್ನು ರಾಕೆಟ್ ಪ್ರೊಪಲ್ಷನ್ ನೆರವಿನಿಂದ ಎಸ್ಕೇಪ್ ಸಿಸ್ಟಂಗೆ ನೀಡಲಾಯಿತು.

ಇದನ್ನೂ ಓದಿ: New Rent Agreement Rules 2025: ಎರಡೇ ತಿಂಗಳು ಅಡ್ವಾನ್ಸ್; ಮುಂಚಿತ ನೋಟೀಸ್; ಗಮನಿಸಿ, ಹೊಸ ಬಾಡಿಗೆ ನಿಯಮಗಳು

ವರದಿಗಳ ಪ್ರಕಾರ, ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಅನ್ನು ಗಂಟೆಗೆ 800 ಕಿಮೀ ವೇಗದಲ್ಲಿ ಹಳಿಗಳ ಮೇಲೆ ಚಲಾಯಿಸುವಂತೆ ನೋಡಿಕೊಳ್ಳಲಾಯಿತು. ಈ ಭಾರೀ ವೇಗ ನಡುವೆ ಏರ್​ಕ್ರಾಫ್ಟ್ ಕ್ಯಾನೋಪಿ ಬೇರ್ಪಡುವುದು, ನಂತರ ಎಜೆಕ್ಟ್ ಮಾಡುವುದು, ಹಾಗೂ ಪ್ಯಾರಚೂಟ್ ಮೂಲಕ ಸಿಬ್ಬಂದಿ ಸುರಕ್ಷಿತವಾಗಿ ಇಳಿಯುವುದು, ಇವೆಲ್ಲ ಕಾರ್ಯಗಳು ಯಶಸ್ವಿಯಾಗಿ ನಡೆದವು.

ಇಲ್ಲಿ ನಿಜವಾದ ಪೈಲಟ್ ಅಥವಾ ಸಿಬ್ಬಂದಿ ಇರಲಿಲ್ಲ. ಡಮ್ಮಿ ಮಾತ್ರ ಇರಿಸಲಾಗಿತ್ತು. ಆದರೆ, ಏರ್​ಕ್ರಾಫ್ಟ್​ನಿಂದ ಇಜೆಕ್ಟ್ ಆಗಿ ಪ್ಯಾರಚೂಟ್ ತೆರೆಯುವುದು ಇತ್ಯಾದಿ ಎಲ್ಲವೂ ನಿಜವಾಗಿಯೇ ನಡೆದವು.

ರಕ್ಷಣಾ ಸಚಿವಾಲಯ ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿದೆ ನೋಡಿ…

ಚಂಡೀಗಡದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ (ಟಿಬಿಆರ್​ಎಲ್) ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ ಘಟಕದಲ್ಲಿ ಈ ಪರೀಕ್ಷೆಯನ್ನು ನಡೆಸಲಾಗಿದೆ. ಡಿಆರ್​ಡಿಒದ ಈ ಪ್ರಯೋಗದಲ್ಲಿ ಎಡಿಎ, ಹೆಚ್​ಎಎಲ್ ಸಂಸ್ಥೆಗಳೂ ಕೂಡ ಕೈಜೋಡಿಸಿವೆ.

ಇದನ್ನೂ ಓದಿ: 22 ವರ್ಷದ ಕನ್ನಡಿಗ ಆದರ್ಶ್ ಹಿರೇಮಠ ವಿಶ್ವದ ಅತೀ ಕಿರಿಯ ವಯಸ್ಸಿನ ಸೆಲ್ಫ್ ಮೇಡ್ ಬಿಲಿಯನೇರ್

ಬ್ರಿಟನ್, ಅಮೆರಿಕ, ಚೀನಾ ಮತ್ತು ರಷ್ಯಾ ದೇಶಗಳು ಮಾತ್ರವೇ ಈ ಅಡ್ವಾನ್ಸ್ಡ್ ಟೆಸ್ಟಿಂಗ್ ಫೆಸಿಲಿಟಿ ಹೊಂದಿರುವುದು. ಈಗ ಭಾರತವೂ ಕೂಡ ಈ ಸಾಲಿಗೆ ಸೇರಿಕೊಂಡಿದೆ. ಭಾರತವು ಫೈಟರ್ ಜೆಟ್​ಗಳ ತಯಾರಿಕೆಯಲ್ಲಿ ಪೂರ್ಣ ಸ್ವಾವಲಂಬನೆ ಸಾಧಿಸಲು ಇದು ಮಹತ್ವದ ಅಂಶ ಎನಿಸಿದೆ. ಏರ್​ಕ್ರಾಫ್ಟ್ ಎಸ್ಕೇಪ್ ಸಿಸ್ಟಂ ಅನ್ನು ಪರೀಕ್ಷಿಸಲು ವಿದೇಶಗಳ ಮೇಲೆ ಅವಲಂಬಿತವಾಗುವ ಅವಶ್ಯಕತೆ ಇರುವುದಿಲ್ಲ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?