AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ

India tables final trade proposal to US: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ ತಾರ್ಕಿಕ ಅಂತ್ಯ ಕಾಣಬಹುದು. ಭಾರತ ತನ್ನ ಅಂತಿಮ ಪ್ರಸ್ತಾಪವನ್ನು ಮುಂದಿಟ್ಟಿದೆ. ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಬೇಕು, ಕೃಷಿ ಕ್ಷೇತ್ರವನ್ನು ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಮಾಡಿರುವ ಎರಡು ಪ್ರಮುಖ ಬೇಡಿಕೆಗಳು. ಅಮೆರಿಕವೇನಾದರೂ ಸಕಾರಾತ್ಮಕವಾಗಿ ಸ್ಪಂದಿಸಿದರೆ ಮುಂದಿನ ವರ್ಷವೇ ಒಪ್ಪಂದಕ್ಕೆ ಸಹಿಬೀಳುವ ನಿರೀಕ್ಷೆ ಇದೆ.

ಅಮೆರಿಕದೊಂದಿಗೆ ಟ್ರೇಡ್ ಡೀಲ್; ಅಂತಿಮ ಪ್ರಸ್ತಾಪ ಸಲ್ಲಿಸಿದ ಭಾರತ; ಕೃಷಿ ತಂಟೆ ಬೇಡ, ಟ್ಯಾರಿಫ್ ನಿಲ್ಲಿಸಿ ಎಂಬುದು ಭಾರತದ ಬೇಡಿಕೆ
ಭಾರತ ಅಮೆರಿಕ ವ್ಯಾಪಾರ ಒಪ್ಪಂದ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 26, 2025 | 6:18 PM

Share

ನವದೆಹಲಿ, ಡಿಸೆಂಬರ್ 26: ಭಾರತ ಹಾಗೂ ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕಾಗಿ (India US trade deal) ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನಗಳು ಫಲಪ್ರದವಾಗುವಂತೆ ಕಾಣುತ್ತಿವೆ. ಸರ್ವಸಮ್ಮತವಾದ ಮತ್ತು ನ್ಯಾಯಯುತವಾದ ಒಪ್ಪಂದದತ್ತ ಸಾಗುತ್ತಿದ್ದೇವೆ ಎಂದು ಸಂಧಾನದ ನೇತೃತ್ವದ ವಹಿಸಿರುವ ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಹೇಳಿದ್ದಾರೆ. ಭಾರವು ತನ್ನ ಒಪ್ಪಂದ ಅಂತಿಮ ಪ್ರಸ್ತಾಪವನ್ನು ಅಮೆರಿಕದ ಮುಂದಿಟ್ಟಿದೆಯಂತೆ. ಟ್ಯಾರಿಫ್ ಕಡಿತಗೊಳಿಸಬೇಕು, ಕೃಷಿ ಸಂಬಂಧಿತ ಉತ್ಪನ್ನಗಳನ್ನು ಈ ಒಪ್ಪಂದದಿಂದ ಹೊರಗಿಡಬೇಕು ಎಂಬುದು ಭಾರತ ಸಲ್ಲಿಸಿರುವ ಪ್ರಸ್ತಾವದಲ್ಲಿರುವ ಪ್ರಮುಖ ಅಂಶ.

ಶೇ. 50ರಷ್ಟಿರುವ ಟ್ಯಾರಿಫ್ ಅನ್ನು ಶೇ. 15ಕ್ಕೆ ಇಳಿಸಿ

ರಷ್ಯನ್ ತೈಲವನ್ನು ಖರೀದಿಸುತ್ತಿರುವುದಕ್ಕೆ ಶಿಕ್ಷೆಯಾಗಿ ಭಾರತದ ಮೇಲೆ ಅಮೆರಿಕ ಶೇ. 25ರಷ್ಟು ಹೆಚ್ಚು ಸುಂಕ ಹಾಕುತ್ತಿದೆ. ಇದನ್ನು ತೆಗೆದುಹಾಕುವಂತೆ ಭಾರತವು ತನ್ನ ಟ್ರೇಡ್ ಡೀಲ್ ಪ್ರಸ್ತಾಪದಲ್ಲಿ ಕೋರಿಕೊಂಡಿದೆ. ದಂಡ ರೂಪದ ಶೇ. 25 ಸುಂಕವೂ ಸೇರಿದಂತೆ ಒಟ್ಟು ಶೇ. 50ರಷ್ಟು ಸುಂಕವನ್ನು ಅಮೆರಿಕ ಹಾಕುತ್ತಿದೆ. ಇದನ್ನು ಶೇ. 15ಕ್ಕೆ ಇಳಿಸಬೇಕೆಂದು ಭಾರತ ಡಿಮ್ಯಾಂಡ್ ಮಾಡಿರುವುದು ತಿಳಿದುಬಂದಿದೆ. ಅಮೆರಿಕ ಸಕಾರಾತ್ಮಕವಾಗಿ ಸ್ಪಂದಿಸಿದರೆ 2026ರಲ್ಲಿ ಒಪ್ಪಂದಕ್ಕೆ ಅಂತಿಮ ಮುದ್ರೆ ಬೀಳಬಹುದು.

ಇದನ್ನೂ ಓದಿ: ಈ ವರ್ಷ 1 ಟ್ರಿಲಿಯನ್ ಡಾಲರ್ ರಫ್ತು ಗುರಿ ಅಸಾಧ್ಯ; ಭಾರತಕ್ಕಿರುವ ಪ್ರಮುಖ ತೊಡಕುಗಳಿವು…

ಅಮೆರಿಕದ ಡೈರಿ ಮತ್ತು ಕುಲಾಂತರಿ ಬೆಳೆಗಳು ಭಾರತಕ್ಕೆ ಬೇಡ

ಅಮೆರಿಕದೊಂದಿಗಿನ ಟ್ರೇಡ್ ಡೀಲ್​ಗೆ ಭಾರತ ಸಲ್ಲಿಸಿದ ಪ್ರಸ್ತಾಪದಲ್ಲಿ ಮತ್ತೊಂದು ಪ್ರಮುಖ ಅಂಶ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ್ದು. ಅಮೆರಿಕದ ಡೈರಿ ಉತ್ಪನ್ನಗಳು ಹಾಗೂ ಕುಲಾಂತರಿ ಬೆಳೆ ಉತ್ಪನ್ನಗಳು (GM crops- Genetically modified crops) ಭಾರತಕ್ಕೆ ಬೇಡ ಎಂಬುದು ಭಾರತದ ಗಟ್ಟಿ ನಿಲುವು. ಕೋಟ್ಯಂತರ ಭಾರತೀಯ ರೈತರನ್ನು ರಕ್ಷಿಸುವ ದೃಷ್ಟಿಯಿಂದ ಸರ್ಕಾರ ಈ ನಿಲುವು ತೆಗೆದುಕೊಂಡಿದೆ.

ಭಾರತದ ಈ ಪ್ರಸ್ತಾಪಕ್ಕೆ ಅಮೆರಿಕದಿಂದ ಇನ್ನೂ ಪ್ರತಿಕ್ರಿಯೆ ಸಿಕ್ಕಿಲ್ಲ. ಎರಡೂ ದೇಶಗಳ ನಡುವೆ ಸುದೀರ್ಘ ಕಾಲದಿಂದ ಒಪ್ಪಂದಕ್ಕಾಗಿ ಮಾತುಕತೆಗಳು ನಡೆಯುತ್ತಿವೆಯಾದರೂ ಕೃಷಿ ಉತ್ಪನ್ನಗಳ ವಿಚಾರವು ಪ್ರಮುಖ ತೊಡಕಾಗಿದೆ. ಭಾರತ ಈಗ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅಮೆರಿಕದ ಮುಂದಿನ ನಡೆ ಏನು ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಎಫ್ ಅಂಡ್ ಒ ಕರ್ಮಕಾಂಡ; ಭಾರತದಿಂದ ಅಮೆರಿಕಕ್ಕೆ ಹರಿದುಹೋಗುತ್ತಿದೆಯಾ ವರ್ಷಕ್ಕೆ ಲಕ್ಷ ಕೋಟಿ ರೂ?

ಭಾರತ ಈ ಒಂದೇ ವರ್ಷದಲ್ಲಿ ಮೂರು ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಕಳೆದ ಕೆಲ ವರ್ಷಗಳಲ್ಲಿ ಏಳು ಎಫ್​ಟಿಎಗಳು ಕೈಗೂಡಿವೆ. ಈ ಒಪ್ಪಂದಗಳು ಭಾರತದ ರಫ್ತಿಗೆ ಹೆಚ್ಚಿನ ವೈವಿಧ್ಯತೆ ಮತ್ತು ಆಯ್ಕೆಗಳನ್ನು ನೀಡುತ್ತವೆ. ಭಾರತಕ್ಕೆ ಅಮೆರಿಕ ಅತಿದೊಡ್ಡ ಮಾರುಕಟ್ಟೆಯಾಗಿರುವುದರಿಂದ ಆ ದೇಶದೊಂದಿಗೆ ಎಫ್​ಟಿಎ ಆಗಿಬಿಟ್ಟರೆ ರಫ್ತಿಗೆ ಮತ್ತಷ್ಟು ಉತ್ತೇಜನ ಸಿಕ್ಕಂತಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ