AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan: ಆಮದು, ಬಂದರು, ಅಂಚೆ ನಿರ್ಬಂಧ… ಪಾಕಿಸ್ತಾನ ವಿರುದ್ಧ ಒಂದೇ ದಿನ ಭಾರತದಿಂದ 3 ಕ್ರಮ

India's triple action against Pakistan: ಕಳೆದ ತಿಂಗಳು ಕಾಶ್ಮೀರದ ಪಹಲ್ಗಾಮ್​​ನಲ್ಲಿ ಪಾಕ್ ಬೆಂಬಲಿತವೆನ್ನಲಾದ ಉಗ್ರರು ದಾಳಿ ನಡೆಸಿದ ಘಟನೆಗೆ ಭಾರತ ಪ್ರತೀಕಾರ ಕ್ರಮ ಮುಂದುವರಿಸಿದೆ. ಸಿಂಧೂ ನದಿನೀರು ಒಪ್ಪಂದ ಹಿಂಪಡೆದಿದ್ದ ಭಾರತ ಈ ಒಂದೇ ದಿನ ಮೂರು ಕ್ರಮಗಳನ್ನು ತೆಗೆದುಕೊಂಡಿದೆ. ಪಾಕಿಸ್ತಾನದಿಂದ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆಮದನ್ನು ಪೂರ್ಣವಾಗಿ ನಿರ್ಬಂಧಿಸಿದೆ. ಬಂದರುಗಳನ್ನು ಬಳಸದಂತೆ ನಿಷೇಧಿಸಿದೆ.

Pakistan: ಆಮದು, ಬಂದರು, ಅಂಚೆ ನಿರ್ಬಂಧ... ಪಾಕಿಸ್ತಾನ ವಿರುದ್ಧ ಒಂದೇ ದಿನ ಭಾರತದಿಂದ 3 ಕ್ರಮ
ಪಾಕಿಸ್ತಾನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 04, 2025 | 11:38 AM

Share

ನವದೆಹಲಿ, ಮೇ 4: ಪಹಲ್ಗಾಂ ಉಗ್ರ ದಾಳಿ ಬಳಿಕ ಪಾಕಿಸ್ತಾನ (Pakistan) ವಿರುದ್ಧ ಭಾರತದ ಕಠಿಣ ನಿಲುವು ಮುಂದುವರಿದಿದೆ. ಸಿಂಧೂ ನದಿನೀರು ಒಪ್ಪಂದ ರದ್ದು ಮಾಡಿದ್ದು, ರಾಜತಾಂತ್ರಿಕ ಸಂಬಂಧ ಕಡಿದಿದ್ದು, ಅಟ್ಟಾರಿ ಗಡಿ ಬಂದ್ ಮಾಡಿದ್ದು, ವಾಯು ಪ್ರದೇಶವನ್ನು ನಿರ್ಬಂಧಿಸಿದ್ದು ಹೀಗೆ ಸಾಲ ಸಾಲು ಕ್ರಮಗಳನ್ನು ಭಾರತ ತೆಗೆದುಕೊಂಡಿದೆ. ಇಷ್ಟಕ್ಕೆ ಸುಮ್ಮನಾಗದ ಭಾರತ ಇನ್ನೂ ಮುಂದುವರಿದು ನಿನ್ನೆ ಒಂದೇ ದಿನ ಮೂರು ಕ್ರಮಗಳನ್ನು ಪಾಕಿಸ್ತಾನದ ವಿರುದ್ಧ ಕೈಗೊಂಡಿದೆ.

ಪಾಕಿಸ್ತಾನದಿಂದ ಆಮದು ನಿಷೇಧಿಸಿದ ಭಾರತ

ಪಾಕಿಸ್ತಾನ ಮೂಲಕ ಯಾವುದೇ ಸರಕುಗಳನ್ನು ನೇರವಾಗಿಯಾಗಲೀ ಪರೋಕ್ಷವಾಗಿಯಾಗಲೀ ಆಮದು ಮಾಡಿಕೊಳ್ಳದಂತೆ ಭಾರತವು ನಿಷೇಧ ಹೇರಿದೆ. ಈ ಕ್ರಮ ಕೂಡಲೇ ಜಾರಿಯಾಗಲಿದೆ. ಅಂತಾರಾಷ್ಟ್ರೀಯ ವ್ಯಾಪಾರದ ವೇಳೆ ನಿಷೇಧಗಳಿಂದ ತಪ್ಪಿಸಿಕೊಳ್ಳಲು ಒಂದು ದೇಶದ ಮಾಲನ್ನು ಬೇರೆ ದೇಶಕ್ಕೆ ಸಾಗಿಸಿ, ಆ ಮೂಲಕ ರಫ್ತು ಮಾಡುವ ಒಂದು ಕಳ್ಳತಂತ್ರ ಇದೆ. ಭಾರತ ಇಂಥದ್ದಕ್ಕೂ ಕಡಿವಾಣ ಹಾಕಿ ಪಾಕಿಸ್ತಾನದಿಂದ ಪರೋಕ್ಷ ವ್ಯಾಪಾರವನ್ನೂ ನಿಲ್ಲಿಸಿದೆ.

ಇದನ್ನೂ ಓದಿ: ಅವಧಿಗೂ ಮುನ್ನವೇ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ಐಎಂಎಫ್ ಮಂಡಳಿ ಅವಧಿ ಮೊಟಕುಗೊಳಿಸಿದ ಭಾರತ

ಭಾರತದ ಬಂದರುಗಳನ್ನು ಪಾಕಿಸ್ತಾನದ ಹಡಗುಗಳು ಬಳಸುವಂತಿಲ್ಲ

ಪಾಕಿಸ್ತಾನದ ಯಾವ ಹಡಗುಗಳು ಭಾರತದ ಯಾವುದೇ ಬಂದುಗಳನ್ನು ಪ್ರವೇಶಿಸದಂತೆ ನಿಷೇಧಿಸಲಾಗಿದೆ. ಹಾಗೆಯೇ, ಭಾರತದ ಯಾವ ಹಡಗು ಕೂಡ ಪಾಕಿಸ್ತಾನದ ಬಂದರುಗಳನ್ನು ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.

ಭಾರತದ ಆಸ್ತಿಗಳು ಮತ್ತು ಸೌಕರ್ಯಗಳ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ.

ಪಾಕಿಸ್ತಾನದಿಂದ ಎಲ್ಲಾ ಅಂಚೆ ಸೇವೆ ನಿಲ್ಲಿಸಿದ ಭಾರತ

ಪಾಕಿಸ್ತಾನದಿಂದ ಭಾರತಕ್ಕೆ ಯಾವುದೇ ಪೋಸ್ಟ್ ಬರದಂತೆ ನಿರ್ಬಂಧಿಸಲಾಗಿದೆ. ಪಾಕಿಸ್ತಾನದೊಂದಿಗೆ ಭಾರತ ಪೂರ್ಣವಾಗಿ ಪೋಸ್ಟಲ್ ಸರ್ವಿಸ್ ಲಿಂಕ್ ಅನ್ನು ಕಡಿದುಕೊಂಡಿದೆ. ನೆಲದ ಮೂಲಕವಾಗಲಿ, ಆಕಾಶದಿಂದಲಾಗಲೀ ಪಾಕಿಸ್ತಾನದಿಂದ ಭಾರತಕ್ಕೆ ಯಾವುದೇ ಪತ್ರ ಇತ್ಯಾದಿ ಪಾರ್ಸಲ್ ಬರದಂತೆ, ಅಥವಾ ಇಲ್ಲಿಂದ ಪಾಕಿಸ್ತಾನಕ್ಕೆ ಅವು ಹೋಗದಂತೆ ಭಾರತ ನಿಷೇಧಿಸಿದೆ.

ಇದನ್ನೂ ಓದಿ:

ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್​ರರು ದಾಳಿ ನಡೆಸಿ 28 ಪ್ರವಾಸಿಗರನ್ನು ಬಲಿಪಡೆದ ಘಟನೆ ಬಳಿಕ ಭಾರತ ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಮುಂದುವರಿದ ಭಾಗ ಇದು. ಪುಲ್ವಾಮ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಬಾಲಾಕೋಟ್​ನಲ್ಲಿ ಏರ್​​ಸ್ಟ್ರೈಕ್ ನಡೆಸಿತ್ತು. ಈ ಬಾರಿ ಇನ್ನೂ ದೊಡ್ಡ ಮಟ್ಟದಲ್ಲಿ ಪ್ರತೀಕಾರ ಕ್ರಮ ತೆಗೆದುಕೊಳ್ಳುವುದಾಗಿ ಭಾರತ ಹೇಳಿದೆ. ಆದರೆ, ಯಾವಾಗ ಮತ್ತು ಯಾವ ಕ್ರಮ ಎಂಬುದನ್ನು ಸೇನೆಯೇ ನಿರ್ಧರಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?