AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ

India to buy fighter jets, missiles and other war items worth over Rs. 3.6 crore: ಮೂರೂವರೆ ಲಕ್ಷ ಕೋಟಿ ರೂಗೂ ಅಧಿಕ ಮೌಲ್ಯದ ವಿವಿಧ ಶಸ್ತ್ರಾಸ್ತ್ರಗಳ ಖರೀದಿಗೆ ಡಿಫೆನ್ಸ್ ಅಕ್ವಿಸಿಶನ್ ಕೌನ್ಸಿಲ್ ಅನುಮೋದನೆ ನೀಡಿದೆ. ಇದರಲ್ಲಿ 288 ಎಸ್-400 ಮಿಸೈಲ್​ಗಳು ಸೇರಿವೆ. 114 ರಫೇಲ್ ಜೆಟ್​ಗಳ ಖರೀದಿಗೂ ಎಒಎನ್ ನೀಡಲಾಗಿದೆ. ಎಸ್-400 ಕ್ಷಿಪಣಿಗಳನ್ನು ತ್ವರಿತ ಪ್ರಕ್ರಿಯೆಯಲ್ಲಿ ಖರೀದಿಸಲಾಗುವುದು.

ಮೂರೂವರೆ ಲಕ್ಷ ಕೋಟಿ ರೂ ಮೌಲ್ಯದ ಕ್ಷಿಪಣಿ, ಯುದ್ಧ ವಿಮಾನಗಳ ಖರೀದಿಗೆ ಅನುಮೋದನೆ
ರಫೇಲ್ ಜೆಟ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 13, 2026 | 1:43 PM

Share

ನವದೆಹಲಿ, ಫೆಬ್ರುವರಿ 13: ರಷ್ಯಾದಿಂದ ಸುಮಾರು 10,000 ಕೋಟಿ ರೂ ಮೌಲ್ಯದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲು ರಕ್ಷಣಾ ಖರೀದಿ ಮಂಡಳಿ (ಡಿಎಸಿ) ಅನುಮೋದನೆ ನೀಡಿದೆ. ಮೊನ್ನೆಯಷ್ಟೇ ಸರ್ಕಾರವು 114 ರಫೇಲ್ ಯುದ್ಧವಿಮಾನಗಳನ್ನು ಖರೀದಿಸುತ್ತಿರುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ ಇದೀಗ 3.6 ಲಕ್ಷ ಕೋಟಿ ರೂ ಮೌಲ್ಯದ ವಿವಿಧ ಯುದ್ಧ ಸಾಮಗ್ರಿಗಳನ್ನು ಭಾರತ ಖರೀದಿಸಲು ಹೊರಟಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಡಿಎಸಿ ನಿನ್ನೆ ಗುರುವಾರ (ಫೆ. 12) ವಿವಿಧ ಖರೀದಿಗಳಿಗೆ ಎಒಎನ್ (ಅವಶ್ಯಕವೆಂದು ಮಾನ್ಯತೆ) ನೀಡಿದೆ.

ರಷ್ಯಾದಿಂದ 288 ಎಸ್-400 ಕ್ಷಿಪಣಿಗಳನ್ನು ಖರೀದಿಸಲಾಗುತ್ತಿದೆ. ಇದರಲ್ಲಿ 120 ಕಿರು ಶ್ರೇಣಿಯ ಕ್ಷಿಪಣಿಗಳು, 168 ದೂರ ಶ್ರೇಣಿಯ ಕ್ಷಿಪಣಿಗಳು ಸೇರಿವೆ. ಇವನ್ನು ವೇಗದ ಪ್ರಕ್ರಿಯೆಯಲ್ಲಿ (ಎಫ್​ಟಿಪಿ) ತ್ವರಿತವಾಗಿ ಖರೀದಿಸಲಾಗುತ್ತದೆ.

ಆ್ಯಂಟಿ ಟ್ಯಾಂಕ್ ಮೈನ್​ಗಳು (ವಿಭವ್, ಟಿ-72 ಟ್ಯಾಂಕ್​ಗಳು, ಇನ್ಫ್ಯಾಂಟ್ರಿ ಕಾಂಬ್ಯಾಟ್ ವೆಹಿಕಲ್​ಗಳು ಮೊದಲಾದವು ಈ ಪಟ್ಟಿಯಲ್ಲಿ ಇವೆ. ನೌಕಾಸೇನೆಗೆ 4 ಎಂಡಬ್ಲ್ಯು ಮರೈನ್ ಗ್ಯಾಸ್ ಟರ್ಬೈನ್ ಆಧಾರಿತ ಎಲೆಕ್ಟ್ರಿಕ್ ಪವರ್ ಜನರೇಟರ್, ಪಿ-8ಐ ಲಾಂಗ್ ರೇಂಜ್ ರೀಕಾನೈಸಾನ್ಸ್ ಏರ್​ಕ್ರಾಫ್ಟ್ ಖರೀದಿ ಮಾಡಲಾಗುತ್ತದೆ.

ಇದನ್ನೂ ಓದಿ: ಭಾರತದಲ್ಲಿ ಹಣದುಬ್ಬರಕ್ಕೆ ಹೊಸ ಸ್ವರೂಪ; ಮೂಲ ವರ್ಷ ಬದಲಾವಣೆ; ಜನವರಿಯಲ್ಲಿ ಶೇ. 2.8 ಇನ್​ಫ್ಲೇಶನ್ ದಾಖಲು

ಕರಾವಳಿ ಕಾವಲು ಪಡೆಗೆ ಅದರ ಡಾರ್ನಿಯರ್ ವಿಮಾನಕ್ಕಾಗಿ ಎಲೆಕ್ಟ್ರೋ ಆಪ್ತಿಕಲ್ ಸಿಸ್ಟಂ, ಇನ್​ಫ್ರಾ ರೆಡ್ ಸಿಸ್ಟಂಗಳನ್ನು ಖರೀದಿಸಲು ಒಪ್ಪಲಾಗಿದೆ. ಇದರಿಂದ ಸಾಗರ ರಕ್ಷಣೆಯ ಕಾರ್ಯಕ್ಕೆ ಹೊಸ ಬಲ ಸಿಗುತ್ತದೆ.

ರಫೇಲ್ ಯುದ್ಧವಿಮಾನಗಳು

ಭಾರತೀಯ ವಾಯುಪಡೆಗೆ ಎಸ್-400 ಕ್ಷಿಪಣಿಗಳ ಜೊತೆಗೆ 114 ರಫೇಲ್ ಯುದ್ಧ ವಿಮಾನಗಳ ಖರೀದಿಗೂ ಅನುಮೋದನೆ ಸಿಕ್ಕಿದೆ. ಈ ಪೈಕಿ 90 ಕ್ಷಿಪಣಿಗಳನ್ನು ಭಾರತದಲ್ಲೇ ತಯಾರಿಸಲಾಗುವುದು. ಈ ರಫೇಲ್ ಜೆಟ್​ಗಳು ಭಾರತದ ವಾಯು ರಕ್ಷಣೆಯನ್ನು ಇನ್ನಷ್ಟು ಬಲಗೊಳಿಸಲಿವೆ.

ಇದನ್ನೂ ಓದಿ: ಹೊಸ ಆದಾಯ ತೆರಿಗೆ ಕಾಯ್ದೆಯಲ್ಲಿ ಪ್ಯಾನ್ ನಿಯಮಗಳ ಬದಲಾವಣೆ ಗಮನಿಸಿ…

ಎಸ್-400 ಮಿಸೈಲ್ ಸಿಸ್ಟಂ

ಆಪರೇಷನ್ ಸಿಂದೂರ್ ವೇಳೆ ಪಾಕಿಸ್ತಾನದ ಡ್ರೋನ್, ಕ್ಷಿಪಣಿಗಳ ದಾಳಿಯನ್ನು ಭಾರತದ ಎಸ್-400 ಟ್ರಯಂಫ್ ಡಿಫೆನ್ಸ್ ಸಿಸ್ಟಂ ಬಲವಾಗಿ ತಡೆದಿತ್ತು. ಈ ರಷ್ಯನ್ ನಿರ್ಮಿತ ಡಿಫೆನ್ಸ್ ಸಿಸ್ಟಂನಲ್ಲಿ ವಿವಿಧ ಶ್ರೇಣಿಯ ಕ್ಷಿಪಣಿಗಳ ಸಂಯೋಜನೆ ಇರುತ್ತದೆ. 40-400 ಕಿಮೀ ಶ್ರೇಣಿಯಲ್ಲಿ ಗುರಿ ಹೊಡೆದುರುಳಿಸಬಲ್ಲ ವಿವಿಧ ಕ್ಷಿಪಣಿಗಳ ವ್ಯವಸ್ಥೆಯಾದ ಇದು ವಿಶ್ವದ ಅತ್ಯಂತ ಪ್ರಬಲ ಏರ್ ಡಿಫೆನ್ಸ್ ಸಿಸ್ಟಂಗಳಲ್ಲಿ ಒಂದೆನಿಸಿದೆ.

ಆಪರೇಷನ್ ಸಿಂದೂರ್ ಸಮಯದಲ್ಲಿ ಸಾಕಷ್ಟು ಕ್ಷಿಪಣಿಗಳ ಬಳಕೆಯಾಗಿ ಹೋಗಿತ್ತು. ಅದನ್ನು ಭರ್ತಿ ಮಾಡಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?