AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India’s Chipsets: ಭಾರತದಲ್ಲಿ ಸ್ವಂತವಾಗಿ 25 ಚಿಪ್​​ಸೆಟ್​​ಗಳ ತಯಾರಿಕೆ; ಸರ್ವಿಸ್​​ನಿಂದ ಪ್ರಾಡಕ್ಟ್ ದೇಶವಾಗಿ ಬದಲಾಗುತ್ತಿರುವ ಭಾರತ

India developing 25 chipsets with indigenous IP: ಭಾರತದಲ್ಲಿ ದೇಶೀಯವಾಗಿ ರೂಪಿಸಲಾದ ಇಂಟೆಲೆಕ್ಚುವಲ್ ಪ್ರಾಪರ್ಟಿ ಹೊಂದಿರುವ ಚಿಪ್​​ಸೆಟ್​​ಗಳ ಅಭಿವೃದ್ಧಿ ನಡೆಯುತ್ತಿದೆ. ಇಂಥ 25 ಚಿಪ್​​​ಸೆಟ್​​ಗಳನ್ನು ಭಾರತದಲ್ಲಿ ನಿರ್ಮಿಸಲಾಗುತ್ತಿದೆ. ಸೆಮಿಕಂಡಕ್ಟರ್ ಫ್ಯಾಬ್ ಘಟಕಗಳಲ್ಲಿ ಈ ಚಿಪ್​​ಸೆಟ್​​ಗಳನ್ನು ಸದ್ಯದಲ್ಲೇ ತಯಾರಿಸಲಾಗುತ್ತದೆ ಎನ್ನುವ ಮಾಹಿತಿಯನ್ನು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ನೀಡಿದ್ದಾರೆ.

India's Chipsets: ಭಾರತದಲ್ಲಿ ಸ್ವಂತವಾಗಿ 25 ಚಿಪ್​​ಸೆಟ್​​ಗಳ ತಯಾರಿಕೆ; ಸರ್ವಿಸ್​​ನಿಂದ ಪ್ರಾಡಕ್ಟ್ ದೇಶವಾಗಿ ಬದಲಾಗುತ್ತಿರುವ ಭಾರತ
ಅಶ್ವಿನಿ ವೈಷ್ಣವ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 13, 2025 | 2:06 PM

ನವದೆಹಲಿ, ಏಪ್ರಿಲ್ 13: ಭಾರತ ಸೆಮಿಕಂಡಕ್ಟರ್ ಚಿಪ್ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬನೆಯತ್ತ (Atma Nirbhar Bharat) ಬಲವಾದ ಪುಟ್ಟ ಹೆಜ್ಜೆಗಳನ್ನು ಇರಿಸುತ್ತಿದೆ. ಭಾರತದಲ್ಲಿ ದೇಶೀಯವಾಗಿ ಅಭಿವೃದ್ಧಿಯಾದ ತಂತ್ರಜ್ಞಾನಗಳ (Indigenous Intellectual Property) ಸಹಾಯದಿಂದ 25 ಚಿಪ್​ಸೆಟ್​​ಗಳನ್ನು (Chipsets) ಅಭಿವೃದ್ಧಿಪಡಿಸಲಾಗುತ್ತಿದೆ. ಕೇಂದ್ರ ಎಲೆಕ್ಟ್ರಾನಿಕ್ ಸಚಿವ ಡಾ. ಅಶ್ವಿನಿ ವೈಷ್ಣವ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಡಿಸೈನ್ ಲಿಂಕ್ಡ್ ಇನ್ಸೆಂಟಿವ್ (ಡಿಎಲ್​​ಐ) ಸ್ಕೀಮ್ ಅಡಿಯಲ್ಲಿ ಸ್ವಂತವಾಗಿ ಚಿಪ್​​ಸೆಟ್​​ಗಳ ತಯಾರಿಕೆ ಮಾಡಲಾಗುತ್ತಿರುವುದನ್ನು ತಿಳಿಸಿದ್ದಾರೆ.

ಇಲ್ಲಿ ದೇಶೀಯ ತಂತ್ರಜ್ಞಾನ ಅಭಿವೃದ್ಧಿ ಎಂದರೆ ಬೌದ್ಧಿಕ ಆಸ್ತಿಯನ್ನು ಉಲ್ಲೇಖಿಸುತ್ತದೆ. ಅಂದರೆ, ಚಿಪ್​​ಗಳ ತಯಾರಿಕೆಗೆ ಅಗತ್ಯವಾದ ಡಿಸೈನ್, ಆರ್ಕಿಟೆಕ್ಚರ್ ಮತ್ತು ಕೋರ್ ಲಾಜಿಕ್ ಅನ್ನು ಭಾರತೀಯ ಸಂಸ್ಥೆಗಳೇ ಮಾಡಿರುತ್ತವೆ. ಅಂದರೆ, ವಿದೇಶಗಳಲ್ಲಿ ತಯಾರಾಗುವ ಚಿಪ್​​ಗಳಿಗೆ ಬಳಕೆಯಾಗುವ ಅಲ್ಗಾರಿದಂಗಿಂತ ಭಿನ್ನವಾದ ಅಲ್ಗಾರಿದಂ, ಲಾಜಿಕ್ ಬ್ಲಾಕ್ ಮತ್ತು ಸಾಫ್ಟ್​​​ವೇರ್ ಅನ್ನು ದೇಶೀವಾಗಿ ತಯಾರಿಸಲಾಗುತ್ತದೆ. ಇವು ವಿದೇಶಗಳ ಪೇಟೆಂಟ್ ಮತ್ತು ಲೈಸೆನ್ಸ್ ವ್ಯಾಪ್ತಿಯಿಂದ ಹೊರಗಿರುತ್ತವೆ. ಇಂಥ ಚಿಪ್​​ಸೆಟ್​​ಗಳಿಗೆ ಭಾರತೀಯ ಸಂಸ್ಥೆಗಳು ಪೇಟೆಂಟ್ ಹೊಂದಿರುತ್ತವೆ. ಇಂಥ 25 ಚಿಪ್​​ಸೆಟ್​​ಗಳ ಅಭಿವೃದ್ಧಿಯನ್ನು ಭಾರತದಲ್ಲಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಡಿಜಿಟಲ್ ಸೌಕರ್ಯ; ಭಾರತದ ಮುಂದೆ ಸಿಲಿಕಾನ್ ವ್ಯಾಲಿ ಏನೂ ಇಲ್ಲ: ವಿವೇಕ್ ವಾಧವಾ

ಇದನ್ನೂ ಓದಿ
Image
ಶೇ. 15ರ ವೇಗದಲ್ಲಿ ಬೆಳೆಯುತ್ತಿರುವ ಸೆಮಿಕಂಡಕ್ಟರ್ ಮಾರುಕಟ್ಟೆ
Image
ಹಣಕಾಸು ಭದ್ರತೆಗೆ 1% ತಂತ್ರ: ನಿತಿನ್ ಕಾಮತ್
Image
ಭಾರತೀಯರು ತಂತ್ರಜ್ಞಾನ ಕೀಳರಿಮೆ ಬಿಡಬೇಕು: ವಾಧವಾ
Image
2024-25ರಲ್ಲಿ 820 ಬಿಲಿಯನ್ ಡಾಲರ್ ದಾಟಿದ ಭಾರತದ ರಫ್ತು

ಬ್ಯುಸಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಶ್ವಿನಿ ವೈಷ್ಣವ್ ಅವರು, ಬೆಂಗಳೂರಿನ ಸಿಡಾಕ್​​ನಿಂದ 13 ಪ್ರಾಜೆಕ್ಟ್​​​ಗಳು ನಡೆಯುತ್ತಿರುವುದನ್ನು ತಿಳಿಸಿದ್ದಾರೆ ಹಾಗೆಯೇ, ಚಿಪ್​​ಸೆಟ್​​ಗಳ ತಯಾರಿಕೆಯಲ್ಲಿ ಬೌದ್ಧಿಕ ಆಸ್ತಿಯ ಮಹತ್ವದ ಬಗ್ಗೆ ತಿಳಿಸಿದ ಅವರು, ಇವು ಭಾರತವನ್ನು ಸರ್ವಿಸ್ ದೇಶದಿಂದ ಪ್ರಾಡಕ್ಟ್ ದೇಶವಾಗಿ ಪರಿವರ್ತಿಸಬಲ್ಲುದು ಎಂದಿದ್ದಾರೆ.

ಸೆಮಿಕಂಡಕ್ಟರ್ ಫ್ಯಾಬ್ರಿಕೇಶನ್ ಘಟಕಗಳಿಂದ ದೇಶೀಯ ಚಿಪ್​​ಗಳ ತಯಾರಿಕೆ

ಭಾರತದಲ್ಲಿ ಸೆಮಿಕಂಡಕ್ಟರ್ ಫ್ಯಾಬ್ ಘಟಕಗಳು ನಿರ್ಮಾಣ ಆಗುತ್ತಿವೆ. ಈ ದೇಶೀಯ ಇಂಟೆಲೆಕ್ಚುವಲ್ ಪ್ರಾಪರ್ಟಿಯಾದ ಚಿಪ್​​ಸೆಟ್​​ಗಳನ್ನು ಈ ಫ್ಯಾಬ್ ಯೂನಿಟ್​​ಗಳಲ್ಲಿ ತಯಾರಿಸಲಾಗುತ್ತದಂತೆ. ದೇಶದ 240 ಶಿಕ್ಷಣ ಸಂಸ್ಥೆಗಳಿಗೆ ಸರ್ಕಾರವು ವಿಶ್ವದರ್ಜೆ ಚಿಪ್ ಡಿಸೈನ್ ಟೂಲ್​​ಗಳನ್ನು ಒದಗಿಸಿದೆ. ಇದರಿಂದ ಪ್ರತಿಭೆಗಳನ್ನು ಹೊರತರುವುದು ಸುಲಭವಾಗುತ್ತದೆ. ವಿದ್ಯಾರ್ಥಿಗಳಿಂದ ಅಭಿವೃದ್ಧಿಯಾದ 20 ಚಿಪ್​​ಗಳನ್ನು ಮೊಹಾಲಿಯಲ್ಲಿರುವ ಸೆಮಿಕಂಡಕ್ಟರ್ ಲ್ಯಾಬ್​​ನಲ್ಲಿ ಸದ್ಯದಲ್ಲೇ ತಯಾರಿಸಲಾಗುವುದು.

ಇದನ್ನೂ ಓದಿ: ಭಾರತದಲ್ಲಿ 3ನೇ ಅತಿದೊಡ್ಡ ಹೋಟೆಲ್ ಜಾಲ ನಿರ್ಮಿಸಲಿರುವ ಅಕ್ಕೋರ್, ಇಂಟರ್​​​ಗ್ಲೋಬ್, ಟ್ರೀಬೋ

ಇದೇ ವೇಳೆ, ಅಶ್ವಿನಿ ವೈಷ್ಣವ್ ಅವರು ಎಲೆಕ್ಟ್ರಾನಿಕ್ ಕಾಂಪೊನೆಂಟ್​​ಗಳಿಗೆ ರೂಪಿಸಲಾದ ಪಿಎಲ್​​ಐ ಸ್ಕೀಮ್ ನಿರೀಕ್ಷಿತ ಪರಿಣಾಮ ಬೀರಿರುವುದನ್ನು ಎತ್ತಿ ತೋರಿಸಿದ್ಧಾರೆ. ಕಳೆದ ಒಂದು ದಶಕದಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪಾದನೆ ಐದು ಪಟ್ಟು ಹೆಚ್ಚಾಗಿದೆ. ರಫ್ತು ಆರು ಪಟ್ಟು ಹೆಚ್ಚಾಗಿದೆ. ಎಲೆಕ್ಟ್ರಾನಿಕ್ಸ್ ಆಮದು ಮಾಡಿಕೊಳ್ಳುತ್ತಿದ್ದ ಕಾಲದಿಂದ ಈಗ ರಫ್ತು ಮಾಡುವ ಮಟ್ಟಕ್ಕೆ ಬೆಳವಣಿಗೆ ಹೊಂದಿದ್ದೇವೆ ಎನ್ನುವ ಅಂಶವನ್ನು ಸಚಿವರು ಹೈಲೈಟ್ ಮಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು