AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 9ರೊಳಗೆ ಅಂತಿಮಗೊಳ್ಳಲಿದೆಯಾ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ? ಟ್ಯಾರಿಫ್ ಕಂಟಕ ತಪ್ಪುತ್ತದಾ?

India US trade deal: ಅಮೆರಿಕ ಸರ್ಕಾರವು ವಿವಿಧ ದೇಶಗಳ ಮೇಲೆ ಪೂರ್ಣ ಟ್ಯಾರಿಫ್ ಹೇರಿಕೆಯಿಂದ ವಿನಾಯಿತಿ ಕೊಡಲಾಗಿದ್ದ 90 ದಿನಗಳ ಅವಧಿ ಜುಲೈ 9ಕ್ಕೆ ಮುಗಿಯುತ್ತದೆ. ಅಷ್ಟರೊಳಗೆ ಅಮೆರಿಕದೊಂದಿಗೆ ಭಾರತ ವ್ಯಾಪಾರ ಒಪ್ಪಂದ ಅಂತಿಮಗೊಳಿಸಲು ಪ್​ರಯತ್ನಿಸುತ್ತಿದೆ. ಕೇಂದ್ರ ವಾಣಿಜ್ಯ ಇಲಾಖೆ ಕಾರ್ಯದರ್ಶಿ ನೇತೃತ್ವದ ಭಾರತೀಯ ತಂಡವೊಂದು ಅಮೆರಿಕದಲ್ಲಿ ಮಾತುಕತೆ ಕುದುರಿಸುತ್ತಿದೆ.

ಜುಲೈ 9ರೊಳಗೆ ಅಂತಿಮಗೊಳ್ಳಲಿದೆಯಾ ಭಾರತ-ಅಮೆರಿಕ ವ್ಯಾಪಾರ ಒಪ್ಪಂದ? ಟ್ಯಾರಿಫ್ ಕಂಟಕ ತಪ್ಪುತ್ತದಾ?
ನರೇಂದ್ರ ಮೋದಿ, ಡೊನಾಲ್ಡ್ ಟ್ರಂಪ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 30, 2025 | 12:28 PM

Share

ನವದೆಹಲಿ, ಜೂನ್ 30: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದ (India US trade deal) ಏರ್ಪಡಲು ನಡೆಯುತ್ತಿರುವ ಮಾತುಕತೆ ಮತ್ತು ಸಂಧಾನ ಸದ್ಯದಲ್ಲೇ ತಾರ್ಕಿಕ ಅಂತ್ಯ ಮುಟ್ಟಬಹುದು. ವರದಿಗಳ ಪ್ರಕಾರ, ಜುಲೈ 9ರೊಳಗೆ ಒಪ್ಪಂದ ಅಂತಿಮಗೊಳ್ಳುವ ಸಾಧ್ಯತೆ ಇದೆ. ಜುಲೈ 9ರೊಳಗೆ ಈ ಡೀಲ್ ಮುಗಿಸಲು ಭಾರತ ಆತುರಪಡಲು ಡೊನಾಲ್ಡ್ ಟ್ರಂಪ್ ಅವರ ಟ್ಯಾರಿಫ್ ಡೆಡ್​​ಲೈನ್ (Tariff Pause) ಕೂಡ ಒಂದು ಕಾರಣ. ತೆರಿಗೆ ಹೇರಿಕೆಯಿಂದ ವಿನಾಯಿತಿ ನೀಡಲಾಗಿದ್ದ 90 ದಿನಗಳ ಕಾಲಾವಕಾಶವು ಜುಲೈ 9ಕ್ಕೆ ಮುಗಿಯುತ್ತದೆ. ಈ ವಿನಾಯಿತಿಯನ್ನು ಮುಂದುವರಿಸುವುದಿಲ್ಲ ಎಂದು ಟ್ರಂಪ್ ಸ್ಪಷ್ಟಪಡಿಸಿದ್ದರು. ಹೀಗಾಗಿ, ಅಷ್ಟರೊಳಗೆ ಅಮೆರಿಕದೊಂದಿಗೆ ಒಪ್ಪಂದ ಅಂತಿಮಗೊಳಿಸುವ ಗುರಿ ಭಾರತದ್ದಾಗಿದೆ.

ಅಮೆರಿಕದೊಂದಿಗೆ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸಲು ಭಾರತದ ವಾಣಿಜ್ಯ ಇಲಾಖೆ ವಿಶೇಷ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ನೇತೃತ್ವದ ಭಾರತೀಯ ತಂಡವೊಂದು ಅಮೆರಿಕದಲ್ಲಿದೆ. ಅಮೆರಿಕದಲ್ಲಿ ಈ ಕುರಿತು ಮಾತನಾಡಿರುವ ರಾಜೇಶ್ ಅಗರ್ವಾಲ್, ಈ ಒಪ್ಪಂದದಲ್ಲಿ ಭಾರತದ ಕೃಷಿ ವಲಯವನ್ನು ರಕ್ಷಿಸಲಾಗುವುದು ಎಂದಿದ್ದಾರೆ. ಕೆಲ ಸೆಕ್ಟರ್​ಗಳನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಸರಕುಗಳಿಗೂ ಟ್ಯಾರಿಫ್ ತಡೆಯನ್ನು ನಿವಾರಿಸುವ ಅಥವಾ ಕಡಿಮೆ ಮಾಡುವ ಸಾಧ್ಯತೆಯ ಸುಳಿವು ಇದೆ.

ಇದನ್ನೂ ಓದಿ: Adani Green: ಭಾರತದ ಇತಿಹಾಸದಲ್ಲೇ ಅತಿಹೆಚ್ಚು ನವೀಕರಣ ಇಂಧನ ಉತ್ಪಾದನೆ: ಅದಾನಿ ಕಂಪನಿ ದಾಖಲೆ

ಭಾರತದ ಪ್ರಮುಖ ರಫ್ತು ಮಾರುಕಟ್ಟೆಗಳಲ್ಲಿ ಅಮೆರಿಕವೂ ಒಂದು. ಹೀಗಾಗಿ, ಭಾರತ ಟ್ಯಾರಿಫ್ ಹೇರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡುವುದು ಬಹುತೇಕ ಅನಿವಾರ್ಯವಾಗಿದೆ.

ಟ್ಯಾರಿಫ್ ವಿಷಯದಲ್ಲಿ ಟ್ರಂಪ್ ಹಠಮಾರಿತನ

ವಿವಿಧ ದೇಶಗಳು ಅಮೆರಿಕದ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳಬೇಕು ಎನ್ನುವುದು ಡೊನಾಲ್ಡ್ ಟ್ರಂಪ್ ನಿರೀಕ್ಷೆಯಾಗಿದೆ. ಏಪ್ರಿಲ್​​ನಲ್ಲಿ ಅವರು ಭಾರತವನ್ನೂ ಒಳಗೊಂಡಂತೆ ಬಹುತೇಕ ಎಲ್ಲಾ ದೇಶಗಳ ಮೇಲೂ ದೊಡ್ಡ ಮಟ್ಟದಲ್ಲಿ ಆಮದು ಸುಂಕ ವಿಧಿಸಿದ್ದರು. ಕೆಲ ದಿನಗಳ ಬಳಿಕ ಅವರು 90 ದಿನಗಳ ವಿರಾಮ ಪ್ರಕಟಿಸಿದ್ದರು. ಈ ಗಡುವು ಜುಲೈ 9ಕ್ಕೆ ಮುಗಿಯುತ್ತದೆ. ಗಡುವನ್ನು ವಿಸ್ತರಿಸುವುದಿಲ್ಲ ಎಂದು ಟ್ರಂಪ್ ಬಾರಿ ಬಾರಿ ಹೇಳುತ್ತಿದ್ದಾರೆ.

ಇದನ್ನೂ ಓದಿ: ಶೇ. 5 ಅಲ್ಲ, ಶೇ. 3.5 ಅಲ್ಲ, ಶೇ. 1ಕ್ಕೆ ಇಳಿಯಲಿದೆ ರೆಮಿಟೆನ್ಸ್ ಟ್ಯಾಕ್ಸ್; ಅಮೆರಿಕದ ಎನ್​ಆರ್​​ಐಗಳಿಗೆ ಖುಷಿ ಸುದ್ದಿ

‘ಒಂದು ದೇಶವು ನಮ್ಮನ್ನು ಹೇಗೆ ನಡೆಸಿಕೊಳ್ಳುತ್ತದೆ, ಅವರು ಒಳ್ಳೆಯವರಾ, ಅಲ್ಲವಾ ಎಂದು ನೋಡುತ್ತೇವೆ. ಕೆಲ ದೇಶಗಳ ಮೇಲೆ ನಮಗ್ಯಾವ ಕಾಳಜಿಯೂ ಇರುವುದಿಲ್ಲ. ಅಧಿಕ ಸಂಖ್ಯೆ (ಟ್ಯಾರಿಫ್) ಕಳುಹಿಸುತ್ತೇವೆ’ ಎಂದು ಫಾಕ್ಸ್ ನ್ಯೂಸ್ ವಾಹಿನಿ ಜೊತೆ ಟ್ರಂಪ್ ತಿಳಿಸಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ