AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India: ಇದು ಭಾರತದ ಶತಮಾನ; 2075ರೊಳಗೆ ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ: ಗೋಲ್ಡ್​ಮನ್ ಸ್ಯಾಕ್ಸ್ ಅಂದಾಜು

Goldman Sachs on Indian Economy: ಜನಸಂಖ್ಯೆ, ತಂತ್ರಜ್ಞಾನ ಇತ್ಯಾದಿ ಅಂಶಗಳ ಸಹಾಯದಿಂದ ಭಾರತ ಮುಂದಿನ ದಶಕಗಳಲ್ಲಿ ಅಗಾಧವಾಗಿ ಬೆಳೆಯಲಿದೆ. 2017ರಲ್ಲಿ ಭಾರತದ ಜಿಡಿಪಿ 52.5 ಟ್ರಿಲಿಯನ್ ಡಾಲರ್ ಆಗಲಿದೆ ಎಂದು ಗೋಲ್ಡ್​ಮನ್ ಸ್ಯಾಕ್ಸ್ ಅಭಿಪ್ರಾಯಪಟ್ಟಿದೆ.

India: ಇದು ಭಾರತದ ಶತಮಾನ; 2075ರೊಳಗೆ ಜಪಾನ್, ಜರ್ಮನಿ, ಅಮೆರಿಕವನ್ನೂ ಹಿಂದಿಕ್ಕಲಿದೆ ಭಾರತ: ಗೋಲ್ಡ್​ಮನ್ ಸ್ಯಾಕ್ಸ್ ಅಂದಾಜು
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 11, 2023 | 11:45 AM

Share

ನವದೆಹಲಿ: ಇನ್ನು ಐದು ದಶಕದಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆಯಲಿದೆ ಎಂದು ವಿಶ್ವದ ಪ್ರಮುಖ ಹೂಡಿಕೆ ಬ್ಯಾಂಕ್ ಎನಿಸಿದ ಗೋಲ್ಡ್​ಮನ್ ಸ್ಯಾಕ್ಸ್ (Goldman Sachs) ಅಭಿಪ್ರಾಯಪಟ್ಟಿದೆ. 2075ಕ್ಕೆ ಭಾರತದ ಆರ್ಥಿಕತೆ (Indian economy) 52.5 ಟ್ರಿಲಿಯನ್ ಡಾಲರ್​ನಷ್ಟು ಬೃಹತ್ ಆಗಿ ಬೆಳೆದಿರುತ್ತದೆ ಎಂದು ಗೋಲ್ಡ್​ಮ್ಯಾನ್ ಸ್ಯಾಕ್ಸ್ ಅಂದಾಜು ಮಾಡಿದೆ. ಸದ್ಯ ಭಾರತದ ಆರ್ಥಿಕತೆ 3 ಟ್ರಿಲಿಯನ್ ಡಾಲರ್​ಗಿಂತ ತುಸು ಹೆಚ್ಚು ಇದೆ. ಐವತ್ತು ವರ್ಷದಲ್ಲಿ ಆರ್ಥಿಕತೆ 17 ಪಟ್ಟು ಹೆಚ್ಚು ಬೆಳೆಯುತ್ತದೆ. 52.5 ಟ್ರಿಲಿಯನ್ ಡಾಲರ್ ಎಂದರೆ ಸುಮಾರು 4,325 ಲಕ್ಷ ಕೋಟಿ ರೂಪಾಯಿ ಆಗುತ್ತದೆ.

ಗೋಲ್ಡ್​ಮನ್ ಸ್ಯಾಕ್ಸ್ ಬ್ಯಾಂಕು ಎಲ್ಲಾ ದೇಶಗಳ ಜಿಡಿಪಿಯ ಮುಂದಿನ ಬೆಳವಣಿಗೆಯ ಹಾದಿಯನ್ನು ಅಂದಾಜಿಸಿ ಈ ತೀರ್ಮಾನಕ್ಕೆ ಬಂದಿದೆ. ಅಮೆರಿಕದ ಆರ್ಥಿಕತೆಯನ್ನೂ ಮೀರಿಸಿ ಭಾರತ ಬೆಳೆಯುತ್ತದಂತೆ. ಭಾರತದ ಅಗಾಧ ಜನಸಂಖ್ಯೆ, ಹೆಚ್ಚು ಮಾನವ ಸಂಪನ್ಮೂಲ ಹಾಗೂ ಉತ್ಪನ್ನಶೀಲತೆ, ತಂತ್ರಜ್ಞಾನ, ನಾವೀನ್ಯತೆ, ಬಂಡವಾಳ ಹೂಡಿಕೆ ಇವೆಲ್ಲಾ ಅಂಶಗಳು ಭಾರತದ ಭರ್ಜರಿ ಬೆಳವಣಿಗೆಗೆ ಸಹಕಾರಿ ಆಗುತ್ತದೆ ಎಂಬುದು ಅದರ ಅನಿಸಿಕೆ.

ಇದನ್ನೂ ಓದಿಭಾರತದ ಶ್ರೀಮಂತ ರಾಜ್ಯ ಮಹಾರಾಷ್ಟ್ರ; ಕರ್ನಾಟಕಕ್ಕೆ ಎಷ್ಟನೆ ಸ್ಥಾನ? ಇಲ್ಲಿದೆ 2023ರ ಟಾಪ್ 10 ಶ್ರೀಮಂತ ರಾಜ್ಯಗಳ ಪಟ್ಟಿ

ಮುಂದಿನ ಕೆಲ ದಶಕಗಳ ಬಳಿಕ ಚೀನಾ ನಂಬರ್ ಒನ್ ಆರ್ಥಿಕತೆಯ ದೇಶವಾಗಿ ಬೆಳೆಯಲಿದೆ. ಚೀನಾ ನಂತರದ ಸ್ಥಾನ ಭಾರತದ್ದು ಎಂಬುದು ಹಲವು ತಜ್ಞರ ಅಭಿಮತ. ಚೀನಾದಲ್ಲಿ ಜನಸಂಖ್ಯೆ ಏರಿಕೆ ಆಗುತ್ತಿಲ್ಲ. ಅಲ್ಲಿ ಕೆಲಸ ಮಾಡುವ ವಯಸ್ಸಿನವರ ಸಂಖ್ಯೆ ಕಡಿಮೆ ಆಗುತ್ತದೆ. ಅದೇ ವೇಳೆ ಭಾರತದಲ್ಲಿ ಮುಂದಿನ ಕೆಲ ದಶಕಗಳ ಕಾಲ ಕೆಲಸ ಮಾಡಬಲ್ಲ ವಯೋಮಾನದವರ ಸಂಖ್ಯೆ ಬಹಳ ಹೆಚ್ಚಿನ ಮಟ್ಟದಲ್ಲಿರಲಿದೆ. ಈ ಹಿನ್ನೆಲೆಯಲ್ಲಿ ಭಾರತದ ಆರ್ಥಿಕತೆ ಅಗಾಧವಾಗಿ ಬೆಳೆಯುವ ಸಂಭವ ಇದೆ ಎಂಬುದು ಆರ್ಥಿಕ ತಜ್ಞರುಗಳ ಅಂದಾಜು. ಇದೇ ಕಾರಣಕ್ಕೆ ಚೀನಾವನ್ನೂ ಭಾರತ ಮೀರಿಸಿ ಬೆಳೆಯಬಹುದು ಎಂದು ಕೆಲವರು ಹೇಳುವುದಿದೆ.

ಮೊನ್ನೆ ಇನ್ವೆಸ್ಕೋ ಸಂಸ್ಥೆ ನಡೆಸಿದ ಒಂದು ಅಧ್ಯಯನದ ಪ್ರಕಾರ ಜಗತ್ತಿನ ಹೂಡಿಕೆದಾರರಿಗೆ ಭಾರತವೇ ಆದ್ಯತಾ ದೇಶವಾಗಿದೆ. 85 ಸಾವರೀನ್ ವೆಲ್ತ್ ಫಂಡ್ ಮತ್ತು 57 ಸೆಂಟ್ರಲ್ ಬ್ಯಾಂಕುಗಳು ಇಂಥದ್ದೊಂದು ಅಭಿಪ್ರಾಯ ವ್ಯಕ್ತಪಡಿಸಿದ್ದು, ಹೂಡಿಕೆದಾರರು ಚೀನಾಗಿಂತ ಭಾರತದ ಮೇಲೆ ಹೆಚ್ಚು ಆಸಕ್ತಿ ತೋರುತ್ತಿದ್ದಾರಂತೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ