AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6ಜಿಯಲ್ಲಿ ಭಾರತ ಪ್ರಾಬಲ್ಯ; ಶಕ್ತಿಶಾಲಿ ಭಾರತದ ನಿರ್ಮಾಣಕ್ಕೆ ನಾವೂ ಜೊತೆ: ಜಿಯೋ, ಏರ್ಟೆಲ್ ಮುಖ್ಯಸ್ಥರ ಮಾತು

ITU World telecommunication standardization Assembly, India mobile congress 2024: ರಾಷ್ಟ್ರ ರಾಜಧಾನಿ ನಗರಿಯಲ್ಲಿ ನಿನ್ನೆ ಇಂಡಿಯಾ ಮೊಬೈಲ್ ಕಾಂಗ್ರೆಸ್ ಸಮ್ಮೇಳನ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದರು. ತಂತ್ರಜ್ಞಾನ, ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದ ಬಗ್ಗ ಪ್ರಧಾನಿಗಳಿಗಿರುವ ಧೋರಣೆಯನ್ನು ಏರ್ಟೆಲ್ ಮುಖ್ಯಸ್ಥ ಸುನೀಲ್ ಭಾರ್ತಿ ಮಿಟ್ಟಲ್ ಪ್ರಶಂಸಿಸಿದರು. ರಿಲಾಯನ್ಸ್ ಜಿಯೋ ಮುಖ್ಯಸ್ಥ ಆಕಾಶ್ ಅಂಬಾನಿ ಮಾತನಾಡಿ, ಭಾರತ 6ಜಿಯಲ್ಲಿ ಪ್ರಾಬಲ್ಯ ತೋರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

6ಜಿಯಲ್ಲಿ ಭಾರತ ಪ್ರಾಬಲ್ಯ; ಶಕ್ತಿಶಾಲಿ ಭಾರತದ ನಿರ್ಮಾಣಕ್ಕೆ ನಾವೂ ಜೊತೆ: ಜಿಯೋ, ಏರ್ಟೆಲ್ ಮುಖ್ಯಸ್ಥರ ಮಾತು
ಇಂಡಿಯಾ ಮೊಬೈಲ್ ಸಮ್ಮೇಳನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2024 | 12:58 PM

ನವದೆಹಲಿ, ಅಕ್ಟೋಬರ್ 16: ತಂತ್ರಜ್ಞಾನ ಮತ್ತು ತಯಾರಿಕಾ ಕ್ಷೇತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೊಂದಿರುವ ನಿಲುವನ್ನು ಭಾರ್ತಿ ಏರ್ಟೆಲ್ ಮುಖ್ಯಸ್ಥ ಸುನೀಲ್ ಮಿಟ್ಟಲ್ ಶ್ಲಾಘಿಸಿದರು. ನಿನ್ನೆ ಮಂಗಳವಾರ ಇಲ್ಲಿ ನಡೆದ ಐಟಿಯು ವರ್ಲ್ಡ್ ಟೆಲಿಕಮ್ಯೂನಿಕೇಶನ್ ಸ್ಟಾಂಡರ್ಡೈಸೇಶನ್ ಸಭೆಯಲ್ಲಿ ಮಾತನಾಡಿದ ಸುನೀಲ್ ಭಾರ್ತಿ ಮಿಟ್ಟಲ್, ಶಕ್ತಿಶಾಲಿ ಭಾರತದ ನಿರ್ಮಾಣದಲ್ಲಿ ತಮ್ಮ ಸಂಸ್ಥೆಯ ಪಾತ್ರವೂ ಇರುತ್ತದೆ ಎಂದು ಭರವಸೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಹಲವು ಉದ್ಯಮಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಭಾರತದ ದೂರಸಂಪರ್ಕ ಕ್ರಾಂತಿಯಲ್ಲಿ ಏರ್ಟೆಲ್ ಮುಂಚೂಣಿಯಲ್ಲಿದೆ. ಭಾರತದ ಮೊದಲ ಸ್ಪ್ಯಾಮ್ ವಿರೋಧಿ ನೆಟ್ವರ್ಕ್ ಅನ್ನು ಏರ್ಟೆಲ್ ಆರಂಭಿಸಿದೆ. ಟೆಲಿಕಾಂ ಉದ್ಯಮ, ಟೆಲಿಕಾಂ ಇಲಾಖೆ ಜೊತೆಗೂಡಿ ನಾವು ಜನರಿಗೆ ಸುರಕ್ಷಿತ ಸೇವೆ ಒದಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಸುನೀಲ್ ಮಿಟ್ಟಲ್ ಹೇಳಿದರು.

6ಜಿಯಲ್ಲಿ ಭಾರತದ್ದೇ ಪ್ರಾಬಲ್ಯ: ಆಕಾಶ್ ಅಂಬಾನಿ

ಇದೇ ಸಭೆಯಲ್ಲಿ ಮಾತನಾಡಿದ ರಿಲಾಯನ್ಸ್ ಜಿಯೋ ಛೇರ್ಮನ್ ಆಕಾಶ್ ಅಂಬಾನಿ, ಮುಂಬರಲಿರುವ 6ಜಿ ನೆಟ್ವರ್ಕ್​ನ ಅಳವಡಿಕೆಯಲ್ಲಿ ಭಾರತ ಪ್ರಾಬಲ್ಯ ತೋರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರುನಾಡ ಹೆಮ್ಮೆ; ಭಾರತದ ಮೊದಲ ಬುಲೆಟ್ ಟ್ರೈನು ನಿರ್ಮಾಣ ಬೆಂಗಳೂರಿನಲ್ಲಿ; ಬೆಮೆಲ್ ಸಂಸ್ಥೆಗೆ ಗುತ್ತಿಗೆ

ಎಂಟು ವರ್ಷದ ಹಿಂದೆ 2ಜಿ ವೇಗದಲ್ಲಿ ತೆವಳುತ್ತಿದ್ದ ಭಾರತ ಈಗ 5ಜಿ ಹೆದ್ದಾರಿಯಲ್ಲಿ ಡಿಜಿಟಲ್ ಸೂಪರ್​ಪವರ್ ಆಗುತ್ತಿದೆ. 6ಜಿಯಲ್ಲಿ ಭಾರತದ ಸಾಧನೆ ಇನ್ನೂ ಅಮೋಘವಾಗಿರಲಿದೆ ಎಂದು ಪ್ರಧಾನಿಗಳಿಗೆ ಭರವಸೆ ನೀಡುತ್ತೇನೆ ಎಂದು ಮುಕೇಶ್ ಅಂಬಾನಿ ಅವರ ಹಿರಿಯ ಮಗನಾದ ಆಕಾಶ್ ಅಂಬಾನಿ ಹೇಳಿದರು.

ಮೊಬೈಲ್ ಡಾಟಾ ದರ ಬಹಳ ಅಗ್ಗ

ಬೇರೆ ದೊಡ್ಡ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಮೊಬೈಲ್ ಡಾಟಾ ದರಗಳು ಬಹಳ ಕಡಿಮೆ ಇದೆ. ಹಾಗೆಯೇ ಬಹಳ ಅಧಿಕ ಇಂಟರ್ನೆಟ್ ಸ್ಪೀಡ್ ಇರುವ ನೆಟ್ವರ್ಕ್ ನಮ್ಮದು. ತಲಾವಾರು ಡಾಟಾ ಬಳಕೆ 30ಜಿಬಿಗೂ ಅಧಿಕ ಇದೆ. ಇದು ಜಾಗತಿಕವಾಗಿ ಅತ್ಯಧಿಕ ಡಾಟಾ ಬಳಕೆಗಳಲ್ಲಿ ಒಂದು. ಇಲ್ಲಿರುವುದು ಅರ್ಧ ಚಿತ್ರಣ ಮಾತ್ರ. ಭಾರತದ ಡಿಜಿಟಲ್ ಪರಿವರ್ತನೆಯ ಕಥೆ ಮತ್ತೊಂದು ಮಗ್ಗುಲನ್ನು ತೆರೆದಿಡುತ್ತದೆ ಎಂದು ಜಿಯೋ ಮುಖ್ಯಸ್ಥರು ಹೇಳಿದರು.

ಇದನ್ನೂ ಓದಿ: ಐದು ವರ್ಷದಲ್ಲಿ 5,00,000 ಉದ್ಯೋಗ ಸೃಷ್ಟಿಸಲಿದ್ದೇವೆ: ಟಾಟಾ ಗ್ರೂಪ್ ಮುಖ್ಯಸ್ಥ ಚಂದ್ರಶೇಖರನ್

ರಾಷ್ಟ್ರ ರಾಜಧಾನಿಯ ಭಾರತ್ ಮಂಡಪಂನಲ್ಲಿ ನಡೆಯುತ್ತಿರುವ ಇಂಡಿಯಾ ಮೊಬೈಲ್ ಸಮ್ಮೇಳನದಲ್ಲಿ 190ಕ್ಕೂ ಹೆಚ್ಚು ದೇಶಗಳಿಂದ ತಜ್ಞರು, ನೀತಿ ರೂಪಕರು, ಉದ್ಯಮ ಮುಖಂಡರು ಪಾಲ್ಗೊಂಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ಸ್ಕೂಲ್ ವ್ಯಾನ್ ಡಿಕ್ಕಿ: ಬೈಕ್ ಸವಾರ ಜಸ್ಟ್ ಬಚಾವಾಗಿದ್ಹೇಗೆ ನೋಡಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್