AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಆ್ಯಪಲ್​ನಂತಹ ಮೊಬೈಲ್ ಕಂಪನಿ ಸದ್ಯದಲ್ಲೇ ಶುರುವಾಗುತ್ತಾ? ಡಾವೊಸ್​ನಲ್ಲಿ ಸುಳಿವು ಕೊಟ್ಟ ಸಚಿವರು

India will have its own mobile manufacturing unit in next one year, says Ashwini Vaishnaw: ಚೀನಾ ನಂತರ ಅತಿಹೆಚ್ಚು ಮೊಬೈಲ್ ಫೋನ್​ಗಳು ತಯಾರಾಗುವುದು ಭಾರತದಲ್ಲೇ. ಶೇ. 20ರಷ್ಟು ಐಫೋನ್​ಗಳು ಭಾರತದಲ್ಲಿ ತಯಾರಾಗುತ್ತಿವೆ. ಮೊಬೈಲ್ ಫೋನ್ ತಯಾರಿಕೆಗೆ ಬಿಡಿಭಾಗಗಳಿಂದ ಹಿಡಿದು ಅಸೆಂಬ್ಲಿಂಗ್​ವರೆಗೂ ಪೂರ್ಣ ಇಕೋಸಿಸ್ಟಂ ಭಾರತದಲ್ಲಿ ಸಿದ್ಧವಾಗುತ್ತಿದೆ. ಅಶ್ವಿನಿ ವೈಷ್ಣವ್ ಪ್ರಕಾರ ಇನ್ನೊಂದು ವರ್ಷದಲ್ಲಿ ಭಾರತೀಯ ಕಂಪನಿಯೊಂದು ಮೊಬೈಲ್ ಫೋನ್ ತಯಾರಿಕೆ ಆರಂಭಿಸಬಹುದು.

ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 23, 2026 | 1:25 PM

Share

ಡಾವೊಸ್, ಜನವರಿ 23: ಭಾರತ ಮೊಬೈಲ್ ಫೋನ್ ತಯಾರಿಕೆಯಲ್ಲಿ ಚೀನಾ ನಂತರದ ಸ್ಥಾನ ಪಡೆದಿದೆ. ಅತಿಹೆಚ್ಚು ಮೊಬೈಲ್ ಫೋನ್ ತಯಾರಿಸುವ ದೇಶಗಳಲ್ಲಿ ಭಾರತದ್ದು ಎರಡನೇ ಸ್ಥಾನ. ಆ್ಯಪಲ್ ಕಂಪನಿಯ ಶೇ. 20ರಷ್ಟು ಐಫೋನ್​ಗಳು ಭಾರತದಲ್ಲೇ ತಯಾರಾಗುತ್ತಿವೆ. ಫೋನ್​ಗೆ ಬೇಕಾದ ಹೆಚ್ಚಿನ ಬಿಡಿಭಾಗಗಳೆಲ್ಲವೂ ಭಾರತದಲ್ಲೇ ಲಭ್ಯವಾಗುವಂತೆ ಪ್ರಬಲ ಇಕೋಸಿಸ್ಟಂ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಆ್ಯಪಲ್​ನಂತಹ ಮೊಬೈಲ್ ಫೋನ್ ಕಂಪನಿ ಭಾರತದಲ್ಲಿ ಶುರುವಾಗುತ್ತಾ, ಅಥವಾ ವಿದೇಶೀ ಕಂಪನಿಗಳಿಗೆ ಫೋನ್ ತಯಾರಿಸಿಕೊಡುವ ಕೆಲಸಗಳಿಗೆ ಮಾತ್ರ ಭಾರತ ಸೀಮಿತವಾಗಿರುತ್ತಾ? ಈ ಪ್ರಶ್ನೆಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಉತ್ತರಿಸಿದ್ದಾರೆ.

ಸ್ವಿಟ್ಜರ್​ಲ್ಯಾಂಡ್​ನ ಡಾವೊಸ್ ಸಮಿಟ್​ನಲ್ಲಿ ಪತ್ರಕರ್ತರೊಬ್ಬರ ಪ್ರಶ್ನೆಗೆ ಉತ್ತರಿಸುತ್ತಾ, ಅಶ್ವಿನಿ ವೈಷ್ಣವ್ ಕುತೂಹಲಕಾರಿ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇನ್ನೊಂದು ವರ್ಷದಲ್ಲಿ ಭಾರತೀಯ ಬ್ರ್ಯಾಂಡ್ ಅನ್ನು ನೀವು ನೋಡಬಹುದು ಎಂದು ಎಲೆಕ್ಟ್ರಾನಿಕ್ಸ್ ಸಚಿವರೂ ಆದ ಅವರು ಹೇಳಿದ್ದಾರೆ

ಇದನ್ನೂ ಓದಿ: ಎಐ ಕ್ಷೇತ್ರದಲ್ಲಿ ಭಾರತದ ಹೆಜ್ಜೆಗಳನ್ನು ಶ್ಲಾಘಿಸಿದ ಐಎಂಎಫ್ ಮುಖ್ಯಸ್ಥೆ

ಮೊಬೈಲ್ ಫೋನ್ ತಯಾರಿಕೆಗೆ ಬೇಕಾದ ಹೋಮ್​ವರ್ಕ್ ಮುಗಿಸಿದ್ದೇವೆ. ನಮ್ಮ ದೇಶದಲ್ಲಿ ಉತ್ತಮವಾದ ಎಲೆಕ್ಟ್ರಾನಿಕ್ಸ್ ಇಕೋಸಿಸ್ಟಂ ಅನ್ನು ಹೊಂದಿದ್ದೇವೆ. ನಮ್ಮದೇ ಭಾರತೀಯ ಬ್ರ್ಯಾಂಡ್ ಮತ್ತು ಸಾಧನಗಳನ್ನು ಹೊಂದುವ ಸಮಯ ಬಂದಿದೆ ಎಂದು ಅಶ್ವಿನಿ ವೈಷ್ಣವ್ ವಿವರಿಸಿದ್ದಾರೆ.

‘ಮೊಬೈಲ್ ಫೋನ್​ಗೆ ಬೇಕಾಗಿರುವ ಸಾವಿರಾರು ಸರಕುಗಳನ್ನು ತಯಾರಿಸುವಂತಹ ಇಡೀ ಇಕೋಸಿಸ್ಟಂ ಜೊತೆ ಇವತ್ತು ಮತ್ತು ನಿನ್ನೆ ಮಾತುಕತೆಗಳನ್ನು ನಡೆಸಿದ್ದೇವೆ. ಈ ವಿಚಾರದಲ್ಲಿ ನಡೆಯುತ್ತಿರುವ ಬೆಳವಣಿಗೆ ಆಶಾದಾಯಕವಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ಬ್ರ್ಯಾಂಡ್ ಯಾವಾಗ ನಿರೀಕ್ಷಿಸಬಹುದು ಎನ್ನುವ ಪ್ರಶ್ನೆಗೆ ಉತ್ತರಿಸಿದ ವೈಷ್ಣವ್, ‘ಬಹಳ ಶೀಘ್ರದಲ್ಲೇ, ಇನ್ನೊಂದು ವರ್ಷ ಅಥವಾ 18 ತಿಂಗಳೊಳಗೆ ನಮ್ಮದೇ ಭಾರತೀಯ ಬ್ರ್ಯಾಂಡ್ ಹೊಂದಿರುತ್ತೇವೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಐ ಟೆಕ್ನಾಲಜಿಯಲ್ಲಿ ಅಮೆರಿಕ, ಚೀನಾ ಸಮಕ್ಕೆ ಭಾರತ ಬೆಳೆಯಬಲ್ಲುದೆ? ಡಾವೊಸ್ ಸಮಿಟ್​ನಲ್ಲಿ ಭಾರತದ ಎಐ ಪ್ಲಾನ್ ಬಿಚ್ಚಿಟ್ಟ ಎ ವೈಷ್ಣವ್

ಅಶ್ವಿನಿ ವೈಷ್ಣವ್ ಅವರು ವರ್ಲ್ಡ್ ಎಕನಾಮಿಕ್ ಫೋರಂ ಸಭೆಯಲ್ಲಿ ಭಾರತದ ಎಐ ಮತ್ತು ಆರ್ಥಿಕ ಅಭಿವೃದ್ಧಿ ಹಾಗೂ ಸರ್ಕಾರ ತಂದಿರುವ ಸುಧಾರಣಾ ಕ್ರಮಗಳ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ