AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
TV9 Web
| Edited By: |

Updated on: Jul 09, 2022 | 7:38 PM

Share

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ. ಅವರಿಗೆ ಇತ್ತೀಚೆಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿಯನ್ನು ನೀಡಲಾಯಿತು ಮತ್ತು ಈ ಸಮಾರಂಭದಲ್ಲಿ ಕೇಂದ್ರ ಸಚಿವರು ಹೀಗೆ ಹೇಳಿದ್ದಾರೆ. ವರದಿಯೊಂದರ ಪ್ರಕಾರ, ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿನ ಎಲ್ಲ ಪೆಟ್ರೋಲ್ ಖಾಲಿಯಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ. ಆ ನಂತರ ದೇಶದಲ್ಲಿ ಫಾಸಿಲ್ ಇಂಧನವನ್ನು ನಿಷೇಧಿಸಲಾಗುವುದು.

ಪೆಟ್ರೋಲ್‌ಗೆ ಪರ್ಯಾಯವಾಗಿ ದೇಶವು ಶೀಘ್ರದಲ್ಲೇ ಹಸಿರು ಇಂಧನಗಳಿಗೆ ಬದಲಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಮತ್ತು ಇದು ಜೈವಿಕ ಇಂಧನವನ್ನು ಸಹ ಒಳಗೊಂಡಿರುತ್ತದೆ ಎಂದು ವರದಿ ಹೇಳಿದೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ರೈತರಿಂದ ತಯಾರಿಸಲಾಗುತ್ತಿರುವ ಜೈವಿಕ ಎಥೆನಾಲ್‌ನ ಉದಾಹರಣೆಯನ್ನು ನೀಡಿದ ಗಡ್ಕರಿ, ರೈತರು ಕೇವಲ ಆಹಾರ ಪೂರೈಕೆದಾರರಾಗಿರದೆ ಇಂಧನ ಪೂರೈಕೆದಾರರಾಗಿ ಕೊಡುಗೆ ನೀಡಬಹುದು. ಹಸಿರು ಹೈಡ್ರೋಜನ್ ಅನ್ನು ಪರ್ಯಾಯ ಇಂಧನವಾಗಿಯೂ ಬಳಸಬಹುದು. ಮತ್ತು ಆಳವಾದ ಬಾವಿಯ ನೀರಿನಿಂದ ತಯಾರಿಸಿ, ಕೇಜಿಗೆ 70 ರೂ.ನಂತೆ ಮಾರಾಟ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಗಡ್ಕರಿ ಅವರು ವಿದ್ಯುತ್ ವಾಹನಗಳಿಗೆ ವಿದ್ಯುತ್ ಮತ್ತು ಪರ್ಯಾಯ ಇಂಧನಗಳನ್ನು ಬಳಸುವ ಮುಕ್ತ ಬೆಂಬಲಿಗರಾಗಿದ್ದಾರೆ. ಕೇಂದ್ರ ಸಚಿವರು ಇತ್ತೀಚೆಗೆ ಮಾತನಾಡಿ, ಎಲೆಕ್ಟ್ರಿಕ್ ವಾಹನಗಳ ಬೆಲೆಯು ಮುಂದಿನ ಎರಡು ವರ್ಷಗಳಲ್ಲಿ ಪೆಟ್ರೋಲ್ ಬಳೆಯಲ್ಲಿರುವ ಕಾರುಗಳಿಗೆ ಸಮನಾಗಿರುತ್ತದೆ ಎಂದಿದ್ದಾರೆ. ಟೊಯೋಟಾದ ಹೈಡ್ರೋಜನ್ ಫ್ಯುಯೆಲ್ ಸೆಲ್ ಎಲೆಕ್ಟ್ರಿಕ್ ವೆಹಿಕಲ್ (ಎಫ್‌ಸಿಇವಿ), ಮಿರಾಯ್ ಕುರಿತು ಪ್ರಾಯೋಗಿಕ ಅಧ್ಯಯನವನ್ನು ಪ್ರಾರಂಭಿಸಿದ್ದಕ್ಕೆ ಚಾಲನೆ ನೀಡಿದ್ದಾರೆ. ಇವುಗಳಲ್ಲಿ ಎಷ್ಟು ಕ್ಲೇಮ್​ಗಳು ಕಾರ್ಯರೂಪಕ್ಕೆ ಬರುತ್ತವೆ ಎಂಬುದನ್ನು ನೋಡಬೇಕಾಗಿದೆ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ