AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ.

Nitin Gadkari: 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದ ನಿತಿನ್ ಗಡ್ಕರಿ
ಕೇಂದ್ರ ಸಚಿವ ನಿತಿನ್ ಗಡ್ಕರಿ
TV9 Web
| Edited By: |

Updated on: Jul 09, 2022 | 7:38 PM

Share

ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿ ಪೆಟ್ರೋಲ್ ಬಳಕೆಗೆ ಇರುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಹೇಳಿದ್ದಾರೆ. ಅವರಿಗೆ ಇತ್ತೀಚೆಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿಯನ್ನು ನೀಡಲಾಯಿತು ಮತ್ತು ಈ ಸಮಾರಂಭದಲ್ಲಿ ಕೇಂದ್ರ ಸಚಿವರು ಹೀಗೆ ಹೇಳಿದ್ದಾರೆ. ವರದಿಯೊಂದರ ಪ್ರಕಾರ, ಮುಂದಿನ 5 ವರ್ಷಗಳಲ್ಲಿ ಭಾರತದಲ್ಲಿನ ಎಲ್ಲ ಪೆಟ್ರೋಲ್ ಖಾಲಿಯಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ. ಆ ನಂತರ ದೇಶದಲ್ಲಿ ಫಾಸಿಲ್ ಇಂಧನವನ್ನು ನಿಷೇಧಿಸಲಾಗುವುದು.

ಪೆಟ್ರೋಲ್‌ಗೆ ಪರ್ಯಾಯವಾಗಿ ದೇಶವು ಶೀಘ್ರದಲ್ಲೇ ಹಸಿರು ಇಂಧನಗಳಿಗೆ ಬದಲಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಮತ್ತು ಇದು ಜೈವಿಕ ಇಂಧನವನ್ನು ಸಹ ಒಳಗೊಂಡಿರುತ್ತದೆ ಎಂದು ವರದಿ ಹೇಳಿದೆ. ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ರೈತರಿಂದ ತಯಾರಿಸಲಾಗುತ್ತಿರುವ ಜೈವಿಕ ಎಥೆನಾಲ್‌ನ ಉದಾಹರಣೆಯನ್ನು ನೀಡಿದ ಗಡ್ಕರಿ, ರೈತರು ಕೇವಲ ಆಹಾರ ಪೂರೈಕೆದಾರರಾಗಿರದೆ ಇಂಧನ ಪೂರೈಕೆದಾರರಾಗಿ ಕೊಡುಗೆ ನೀಡಬಹುದು. ಹಸಿರು ಹೈಡ್ರೋಜನ್ ಅನ್ನು ಪರ್ಯಾಯ ಇಂಧನವಾಗಿಯೂ ಬಳಸಬಹುದು. ಮತ್ತು ಆಳವಾದ ಬಾವಿಯ ನೀರಿನಿಂದ ತಯಾರಿಸಿ, ಕೇಜಿಗೆ 70 ರೂ.ನಂತೆ ಮಾರಾಟ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಗಡ್ಕರಿ ಅವರು ವಿದ್ಯುತ್ ವಾಹನಗಳಿಗೆ ವಿದ್ಯುತ್ ಮತ್ತು ಪರ್ಯಾಯ ಇಂಧನಗಳನ್ನು ಬಳಸುವ ಮುಕ್ತ ಬೆಂಬಲಿಗರಾಗಿದ್ದಾರೆ. ಕೇಂದ್ರ ಸಚಿವರು ಇತ್ತೀಚೆಗೆ ಮಾತನಾಡಿ, ಎಲೆಕ್ಟ್ರಿಕ್ ವಾಹನಗಳ ಬೆಲೆಯು ಮುಂದಿನ ಎರಡು ವರ್ಷಗಳಲ್ಲಿ ಪೆಟ್ರೋಲ್ ಬಳೆಯಲ್ಲಿರುವ ಕಾರುಗಳಿಗೆ ಸಮನಾಗಿರುತ್ತದೆ ಎಂದಿದ್ದಾರೆ. ಟೊಯೋಟಾದ ಹೈಡ್ರೋಜನ್ ಫ್ಯುಯೆಲ್ ಸೆಲ್ ಎಲೆಕ್ಟ್ರಿಕ್ ವೆಹಿಕಲ್ (ಎಫ್‌ಸಿಇವಿ), ಮಿರಾಯ್ ಕುರಿತು ಪ್ರಾಯೋಗಿಕ ಅಧ್ಯಯನವನ್ನು ಪ್ರಾರಂಭಿಸಿದ್ದಕ್ಕೆ ಚಾಲನೆ ನೀಡಿದ್ದಾರೆ. ಇವುಗಳಲ್ಲಿ ಎಷ್ಟು ಕ್ಲೇಮ್​ಗಳು ಕಾರ್ಯರೂಪಕ್ಕೆ ಬರುತ್ತವೆ ಎಂಬುದನ್ನು ನೋಡಬೇಕಾಗಿದೆ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ