AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಕೃಷಿ ತಂತ್ರಜ್ಞಾನ ಕ್ಷೇತ್ರಕ್ಕೆ ಪುಷ್ಟಿ ನೀಡುತ್ತಿರುವ ನಮೋ ಡ್ರೋನ್ ದೀದಿ, ಕಿಸಾನ್ ಡ್ರೋನ್ ಮತ್ತಿತರ ಸ್ಕೀಮ್​ಗಳು…

Govt empowering rural women through drone and other schemes: ಸರ್ಕಾರ ಜಾರಿಗೆ ತಂದಿರುವ ನಮೋ ಡ್ರೋನ್ ದೀದಿ ಯೋಜನೆ, ಕಿಸಾನ್ ಡ್ರೋನ್ ಯೋಜನೆಗಳು ಕೃಷಿ ಕ್ಷೇತ್ರವನ್ನು ಬಲಪಡಿಸುತ್ತಿವೆ ಎನ್ನಲಾಗಿದೆ. ಮಹಿಳಾ ನೇತೃತ್ವದ 15,000 ಸ್ವಸಹಾಯ ಸಂಘಗಳನ್ನು ಬಲಪಡಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ನಮೋ ಡ್ರೋನ್ ದೀದಿ ಯೋಜನೆಯಲ್ಲಿ ಮಹಿಳೆಯರಿಗೆ ಡ್ರೋನ್ ಖರೀದಿಸಲು ಶೇ. 80ರಷ್ಟು ಸಬ್ಸಿಡಿ ನೀಡಲಾಗುತ್ತಿದೆ.

ಭಾರತದ ಕೃಷಿ ತಂತ್ರಜ್ಞಾನ ಕ್ಷೇತ್ರಕ್ಕೆ ಪುಷ್ಟಿ ನೀಡುತ್ತಿರುವ ನಮೋ ಡ್ರೋನ್ ದೀದಿ, ಕಿಸಾನ್ ಡ್ರೋನ್ ಮತ್ತಿತರ ಸ್ಕೀಮ್​ಗಳು...
ನಮೋ ಡ್ರೋನ್ ದೀದಿ ಯೋಜನೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 21, 2025 | 5:38 PM

Share

ನವದೆಹಲಿ, ಫೆಬ್ರುವರಿ 21: ಭಾರತದ ಕೃಷಿ ವಲಯದಲ್ಲಿ ತಂತ್ರಜ್ಞಾನ ಅಳವಡಿಕೆ ಗಮನಾರ್ಹ ರೀತಿಯಲ್ಲಿ ಹೆಚ್ಚುತ್ತಿದೆ. ಡ್ರೋನ್ ದೀದಿ ಯೋಜನೆ, ಕಿಸಾನ್ ಡ್ರೋನ್ ಇತ್ಯಾದಿ ವಿನೂತನ ಸ್ಕೀಮ್​ಗಳು ಕೃಷಿ ತಂತ್ರಜ್ಞಾನದ ಬಳಕೆ ಹೆಚ್ಚುವಂತೆ ಮಾಡಿವೆ. ನಮೋ ಡ್ರೋನ್ ದೀದಿ ಯೋಜನೆಯಲ್ಲಿ ಮಹಿಳೆಯರ ನೇತೃತ್ವದ 15,000 ಸ್ವಸಹಾಯ ಗುಂಪುಗಳನ್ನು (self-help groups) ಸಬಲೀಕರಣಗೊಳಿಸುವ ಗುರಿ ಇದೆ. ಬೆಳೆ ಪರಿಶೀಲನೆ, ಗೊಬ್ಬರ ಸಿಂಪಡಿಸುವಿಕೆ ಇತ್ಯಾದಿ ಕೃಷಿ ಕಾರ್ಯಗಳಿಗೆ ಬಳಸಲು ಡ್ರೋನ್​ಗಳನ್ನು ಈ ಮಹಿಳೆಯರಿಗೆ ನೀಡಲಾಗುತ್ತದೆ.

ಡ್ರೋನ್ ಬೆಲೆಯ ಶೇ. 80 ಭಾಗದಷ್ಟು ಸಬ್ಸಿಡಿ ನೀಡಲಾಗುತ್ತದೆ. ಇದು ಹೆಚ್ಚೂ ಕಡಿಮೆ ಒಂದು ಡ್ರೋನ್​ಗೆ 8 ಲಕ್ಷ ರೂವರೆಗೆ ಸಬ್ಸಿಡಿಯೆ ಸಿಗುತ್ತದೆ. ಉಳಿದ ಹಣಕ್ಕೆ ವರ್ಷಕ್ಕೆ ಕೇವಲ 3 ಪ್ರತಿಶತದ ಬಡ್ಡಿಗೆ ಸಾಲದ ವ್ಯವಸ್ಥೆ ಇರುತ್ತದೆ. ಈ ಡ್ರೋನ್​ಗಳಿಂದ ಮಹಿಳೆಯರು ಒಂದು ವರ್ಷದಲ್ಲಿ ಕನಿಷ್ಠವೆಂದರೂ ಒಂದು ಲಕ್ಷ ರೂ ಆದಾಯ ಗಳಿಸಬಹುದು ಎನ್ನುವ ಲೆಕ್ಕಾಚಾರ ಇದೆ. ಇದರಿಂದ ಮಹಿಳೆಯರ ಆರ್ಥಿಕ ಸಬಲೀಕರಣ ಮತ್ತು ಉತ್ತಮ ಬದುಕು ಸಾಧ್ಯವಾಗುತ್ತದೆ.

ಸರ್ಕಾರವು ಈ ನಮೋ ಡ್ರೋನ್ ದೀದಿ ಯೋಜನೆ ಮೂಲಕ ಮುಂದಿನ ಮೂರು ವರ್ಷದಲ್ಲಿ ಮೂರು ಕೋಟಿ ಲಖಪತಿ ದೀದಿಯರನ್ನು ಸೃಷ್ಟಿಸುವ ಗುರಿ ಇಟ್ಟಿದೆ. ಅಂದರೆ, ಮೂರು ಕೋಟಿ ಮಹಿಳೆಯರಿಗೆ ಈ ಯೋಜನೆ ಮೂಲಕ ಉತ್ತಮ ಆದಾಯ ಮಾರ್ಗ ನೀಡುವ ಉದ್ದೇಶ ಸರ್ಕಾರದ್ದಾಗಿದೆ.

ಇದನ್ನೂ ಓದಿ: 2025-26ರಲ್ಲಿ ಭಾರತವೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆ: ಆರ್​ಬಿಐ ಬುಲೆಟಿನ್ ಅಂದಾಜು

ನಮೋ ಡ್ರೋನ್ ದೀದಿ ಯೋಜನೆಯಿಂದ ಕೃಷಿ ಕಾರ್ಯಗಳ ವೆಚ್ಚ ಕಡಿಮೆ ಆಗುತ್ತದೆ. ಸುಲಭವಾಗಿ ಕೆಲಸಗಳು ಆಗುತ್ತವೆ. ಗ್ರಾಮೀಣ ಭಾಗದ ಮಹಿಳೆಯರ ಬದುಕು ಉತ್ತಮಗೊಳ್ಳಲು ಕಾರಣವಾಗುತ್ತದೆ.

ಇನ್ನು, ಕಿಸಾನ್ ಡ್ರೋನ್ ಸ್ಕೀಮ್​ನಲ್ಲಿ ರೈತರು ಸಬ್ಸಿಡಿ ದರದಲ್ಲಿ ಡ್ರೋನ್​ಗಳನ್ನು ಖರೀದಿಸಬಹುದು. ಕೃಷಿಯಲ್ಲಿ ಡ್ರೋನ್​ಗಳ ಬಳಕೆಯಿಂದ ಹಲವು ಉಪಯೋಗಗಳಿವೆ. ಕೃಷಿ ಉತ್ಪಾದನೆ ಹೆಚ್ಚಿಸಲು ಇದು ಸಹಾಯಕವಾಗಬಲ್ಲುದು.

ಈ ಡ್ರೋನ್ ಯೋಜನೆಗಳು ದೇಶದಲ್ಲಿ ಡ್ರೋನ್​ಗೆ ಉತ್ತಮ ಮಾರುಕಟ್ಟೆ ಸೃಷ್ಟಿಸಬಲ್ಲುವು. ಭಾರತವನ್ನು ಜಾಗತಿಕ ಡ್ರೋನ್ ಮ್ಯಾನುಫ್ಯಾಕ್ಚರಿಂಗ್ ಹಬ್ ಆಗಿ ಮಾಡಲು ಸಹಾಯವಾಗುತ್ತದೆ. ಸದ್ಯ ದೇಶದ ಡ್ರೋನ್ ಮಾರುಕಟ್ಟೆ ಮೌಲ್ಯ 4.2 ಬಿಲಿಯನ್ ಡಾಲರ್ ಇದೆ. 2030ರೊಳಗೆ ಇದು 23 ಬಿಲಿಯನ್ ಡಾಲರ್ ಗಾತ್ರದ್ದಾಗಿ ಬೆಳೆಯಬಹುದು ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ಓಪನ್ ಅಕ್ಸೆಸ್ ಮೂಲಕ ವಿದ್ಯುತ್ ಖರೀದಿ; ಸೆಂಟ್ರಲ್ ರೈಲ್ವೆಗೆ ಆರು ಸಾವಿರ ಕೋಟಿ ರೂ ಉಳಿತಾಯ

ಗ್ರಾಂಟ್ ಥಾರ್ನ್​ಟನ್ ಭಾರತ್ ಮತ್ತು ಎಚ್​ಡಿಎಫ್​ಸಿ ಬ್ಯಾಂಕ್ ಪರಿವರ್ತನ್ ಸಂಯೋಗದಲ್ಲಿ ನಡೆಸಲಾಗುತ್ತಿರುವ ಸ್ತ್ರೀ ಕಾರ್ಯಕ್ರಮದಿಂದಲೂ ಕೃಷಿಗಾರಿಕೆಯಲ್ಲಿ ಮಹಿಳೆಯರನ್ನು ಸನ್ನದ್ದಗೊಳಿಸಲಾಗುತ್ತಿದೆ. 1.8 ಲಕ್ಷ ಮಹಿಳೆಯರಿಗೆ ಆಧುನಿಕ ಕೃಷಿಗಾರಿಕೆ ಬಗ್ಗೆ ತರಬೇತಿ ನೀಡಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ