AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್ ಮೋದಿ, ಮಲ್ಯರಂಥ ಸಾಲಗಾರರ ಆಸ್ತಿ ಮಾರಾಟದಿಂದ ಭಾರತದ ಬ್ಯಾಂಕ್​ಗಳಿಂದ ರೂ. 13,109 ಕೋಟಿ ವಸೂಲಿ

ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಇತರರಿಂದ ಭಾರತದ ಬ್ಯಾಂಕ್​ಗಳಿಂದ 13,109 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನೀರವ್ ಮೋದಿ, ಮಲ್ಯರಂಥ ಸಾಲಗಾರರ ಆಸ್ತಿ ಮಾರಾಟದಿಂದ ಭಾರತದ ಬ್ಯಾಂಕ್​ಗಳಿಂದ ರೂ. 13,109 ಕೋಟಿ ವಸೂಲಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 20, 2021 | 4:51 PM

Share

ನೀರವ್ ಮೋದಿ, ವಿಜಯ ಮಲ್ಯ ಅವರಂತಹ ಸಾಲಗಾರರ ಆಸ್ತಿ ಮಾರಾಟದಿಂದ ಭಾರತೀಯ ಬ್ಯಾಂಕ್‌ಗಳು ಸುಮಾರು ರೂ. 13,109 ಕೋಟಿ ವಸೂಲಿ ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಗೆ ತಿಳಿಸಿದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರ ಸಂಸ್ಥೆಗಳು ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿವೆ. ಬ್ರಿಟನ್​ನ ನ್ಯಾಯಾಲಯವೊಂದು ವಿಜಯ್ ಮಲ್ಯ ಅವರನ್ನು ದಿವಾಳಿ ಎಂದು ಘೋಷಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇತೃತ್ವದ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಈಗ ಕಾರ್ಯಾಚರಣೆ ನಿಲ್ಲಿಸಿರುವ ಕಿಂಗ್‌ಫಿಷರ್ ಏರ್‌ಲೈನ್ಸ್‌ನಿಂದ ನೀಡಬೇಕಾದ ಸಾಲವನ್ನು ಮರುಪಾವತಿಸಲು ವಿಶ್ವಾದ್ಯಂತ ಸ್ಥಗಿತ ಆದೇಶವನ್ನು ಅನುಸರಿಸಲು ದಾರಿ ಮಾಡಿಕೊಟ್ಟಿದೆ.

65 ವರ್ಷದ ಉದ್ಯಮಿ ವಿಜಯ್ ಮಲ್ಯ ಈ ಮಧ್ಯೆ ಯುನೈಟೆಡ್​ ಕಿಂಗ್​ಡಮ್​ನಲ್ಲಿ ಜಾಮೀನಿನ ಮೇಲೆ ಉಳಿದುಕೊಂಡಿದ್ದಾರೆ. ಆದರೆ ಅವರ ಆಶ್ರಯ ಅರ್ಜಿಗೆ ಸಂಬಂಧಿಸಿದ್ದು ಎಂದು ನಂಬಲಾದ “ಗೋಪ್ಯ” ಕಾನೂನು ವಿಷಯವು ಸಂಬಂಧ ಇರದ ಹಸ್ತಾಂತರ ಪ್ರಕ್ರಿಯೆಗಳಿಗೆ ಪರಿಷ್ಕಾರವಾಗಿದೆ. ಬ್ಯಾಂಕ್‌ಗಳ ಒಕ್ಕೂಟಕ್ಕೆ ಅಸಲು ಮತ್ತು ಬಡ್ಡಿಯಾಗಿ ಮಲ್ಯ 9,000 ಕೋಟಿ ರೂಪಾಯಿ ಸಾಲ ಬಾಕಿ ಉಳಿಸಿಕೊಂಡಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳಾದ ವಜ್ರ ವ್ಯಾಪಾರಿ ನೀರವ್ ಮೋದಿ ಮತ್ತು ಚೋಕ್ಸಿ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿಗಳಷ್ಟು ನಷ್ಟ ಉಂಟು ಮಾಡಿದ್ದಾರೆ.

ಅಲ್ಲದೆ, ಕಳೆದ ಏಳು ವರ್ಷಗಳಲ್ಲಿ ಬ್ಯಾಡ್​ ಲೋನ್​ಗಳ ಪರಿಹಾರದ ಮೂಲಕ 5.49 ಲಕ್ಷ ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಸೀತಾರಾಮನ್ ಹೇಳಿದರು. ರಾಜ್ಯಗಳು ಗಣನೀಯ ನಗದು ಬ್ಯಾಲೆನ್ಸ್ ಹೊಂದಿವೆ. ಕೇವಲ ಎರಡು ರಾಜ್ಯಗಳು ನೆಗೆಟಿವ್ ನಗದು ಬಾಕಿಯನ್ನು ಹೊಂದಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಹೂಡಿಕೆದಾರರಿಗೆ ಅವಕಾಶಗಳ ಮಹಾಪೂರ: ನಿರ್ಮಲಾ ಸೀತಾರಾಮನ್

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ