AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರವ್ ಮೋದಿ, ಮಲ್ಯರಂಥ ಸಾಲಗಾರರ ಆಸ್ತಿ ಮಾರಾಟದಿಂದ ಭಾರತದ ಬ್ಯಾಂಕ್​ಗಳಿಂದ ರೂ. 13,109 ಕೋಟಿ ವಸೂಲಿ

ವಿಜಯ್ ಮಲ್ಯ, ನೀರವ್ ಮೋದಿ ಸೇರಿದಂತೆ ಇತರರಿಂದ ಭಾರತದ ಬ್ಯಾಂಕ್​ಗಳಿಂದ 13,109 ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ನೀರವ್ ಮೋದಿ, ಮಲ್ಯರಂಥ ಸಾಲಗಾರರ ಆಸ್ತಿ ಮಾರಾಟದಿಂದ ಭಾರತದ ಬ್ಯಾಂಕ್​ಗಳಿಂದ ರೂ. 13,109 ಕೋಟಿ ವಸೂಲಿ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 20, 2021 | 4:51 PM

Share

ನೀರವ್ ಮೋದಿ, ವಿಜಯ ಮಲ್ಯ ಅವರಂತಹ ಸಾಲಗಾರರ ಆಸ್ತಿ ಮಾರಾಟದಿಂದ ಭಾರತೀಯ ಬ್ಯಾಂಕ್‌ಗಳು ಸುಮಾರು ರೂ. 13,109 ಕೋಟಿ ವಸೂಲಿ ಮಾಡಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ಲೋಕಸಭೆಗೆ ತಿಳಿಸಿದರು. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಕೇಂದ್ರ ಸಂಸ್ಥೆಗಳು ಈ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿವೆ. ಬ್ರಿಟನ್​ನ ನ್ಯಾಯಾಲಯವೊಂದು ವಿಜಯ್ ಮಲ್ಯ ಅವರನ್ನು ದಿವಾಳಿ ಎಂದು ಘೋಷಿಸಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇತೃತ್ವದ ಭಾರತೀಯ ಬ್ಯಾಂಕ್‌ಗಳ ಒಕ್ಕೂಟವು ಈಗ ಕಾರ್ಯಾಚರಣೆ ನಿಲ್ಲಿಸಿರುವ ಕಿಂಗ್‌ಫಿಷರ್ ಏರ್‌ಲೈನ್ಸ್‌ನಿಂದ ನೀಡಬೇಕಾದ ಸಾಲವನ್ನು ಮರುಪಾವತಿಸಲು ವಿಶ್ವಾದ್ಯಂತ ಸ್ಥಗಿತ ಆದೇಶವನ್ನು ಅನುಸರಿಸಲು ದಾರಿ ಮಾಡಿಕೊಟ್ಟಿದೆ.

65 ವರ್ಷದ ಉದ್ಯಮಿ ವಿಜಯ್ ಮಲ್ಯ ಈ ಮಧ್ಯೆ ಯುನೈಟೆಡ್​ ಕಿಂಗ್​ಡಮ್​ನಲ್ಲಿ ಜಾಮೀನಿನ ಮೇಲೆ ಉಳಿದುಕೊಂಡಿದ್ದಾರೆ. ಆದರೆ ಅವರ ಆಶ್ರಯ ಅರ್ಜಿಗೆ ಸಂಬಂಧಿಸಿದ್ದು ಎಂದು ನಂಬಲಾದ “ಗೋಪ್ಯ” ಕಾನೂನು ವಿಷಯವು ಸಂಬಂಧ ಇರದ ಹಸ್ತಾಂತರ ಪ್ರಕ್ರಿಯೆಗಳಿಗೆ ಪರಿಷ್ಕಾರವಾಗಿದೆ. ಬ್ಯಾಂಕ್‌ಗಳ ಒಕ್ಕೂಟಕ್ಕೆ ಅಸಲು ಮತ್ತು ಬಡ್ಡಿಯಾಗಿ ಮಲ್ಯ 9,000 ಕೋಟಿ ರೂಪಾಯಿ ಸಾಲ ಬಾಕಿ ಉಳಿಸಿಕೊಂಡಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಸಾಲ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳಾದ ವಜ್ರ ವ್ಯಾಪಾರಿ ನೀರವ್ ಮೋದಿ ಮತ್ತು ಚೋಕ್ಸಿ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿಗಳಷ್ಟು ನಷ್ಟ ಉಂಟು ಮಾಡಿದ್ದಾರೆ.

ಅಲ್ಲದೆ, ಕಳೆದ ಏಳು ವರ್ಷಗಳಲ್ಲಿ ಬ್ಯಾಡ್​ ಲೋನ್​ಗಳ ಪರಿಹಾರದ ಮೂಲಕ 5.49 ಲಕ್ಷ ಕೋಟಿ ರೂಪಾಯಿ ವಸೂಲಿ ಮಾಡಲಾಗಿದೆ ಎಂದು ಸೀತಾರಾಮನ್ ಹೇಳಿದರು. ರಾಜ್ಯಗಳು ಗಣನೀಯ ನಗದು ಬ್ಯಾಲೆನ್ಸ್ ಹೊಂದಿವೆ. ಕೇವಲ ಎರಡು ರಾಜ್ಯಗಳು ನೆಗೆಟಿವ್ ನಗದು ಬಾಕಿಯನ್ನು ಹೊಂದಿವೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ಹೂಡಿಕೆದಾರರಿಗೆ ಅವಕಾಶಗಳ ಮಹಾಪೂರ: ನಿರ್ಮಲಾ ಸೀತಾರಾಮನ್

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ