Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian CEOs: ನಿರ್ವಹಣಾ ವೆಚ್ಚ ಕಡಿತ ಮಾಡೋಣ, ಉದ್ಯೋಗಿಗಳ ವಜಾ ಬೇಡ; ಭಾರತೀಯ ಸಿಇಒಗಳ ಅಭಿಪ್ರಾಯ

ಭಾರತದ ಶೇ 93ರಷ್ಟು ಸಿಇಒಗಳು ಉದ್ಯೋಗಿಗಳ ವಜಾ ನಿರ್ಧಾರ ಕೈಗೊಳ್ಳುವ ಬದಲು ಕಾರ್ಯನಿರ್ವಹಣೆ ವೆಚ್ಚ ಕಡಿತಗೊಳಿಸುವುದಕ್ಕೇ ಆದ್ಯತೆ ನೀಡುವುದಾಗಿ ಹೇಳಿದ್ದಾರೆ.

Indian CEOs: ನಿರ್ವಹಣಾ ವೆಚ್ಚ ಕಡಿತ ಮಾಡೋಣ, ಉದ್ಯೋಗಿಗಳ ವಜಾ ಬೇಡ; ಭಾರತೀಯ ಸಿಇಒಗಳ ಅಭಿಪ್ರಾಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Jan 17, 2023 | 2:01 PM

ದಾವೋಸ್: ಉದ್ಯೋಗಿಗಳ ವಜಾ ನಿರ್ಧಾರ ಕೈಗೊಳ್ಳುವ ಬದಲು ಕಾರ್ಯನಿರ್ವಹಣೆ ವೆಚ್ಚ ಕಡಿತ ಮಾಡುವ ಬಗ್ಗೆ ಭಾರತದ ಕಂಪನಿಗಳ ಹೆಚ್ಚಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು (CEOs) ಒಲವು ವ್ಯಕ್ತಪಡಿಸಿದ್ದಾರೆ. ಜಾಗತಿಕ ಆರ್ಥಿಕ ಅನಿಶ್ಚಿತತೆ ಹೆಚ್ಚುತ್ತಿರುವ ಮಧ್ಯೆಯೇ ನಡೆಸಲಾಗಿರುವ ಸಮೀಕ್ಷೆಯೊಂದರಿಂದ ಈ ವಿಚಾರ ತಿಳಿದುಬಂದಿದೆ. ಜಾಗತಿಕ ಸಲಹಾ ಸಂಸ್ಥೆ ಪಿಡಬ್ಲ್ಯುಸಿ (PwC) ಸಿಇಒಗಳ ವಾರ್ಷಿಕ ಸಮೀಕ್ಷೆ ನಡೆಸಿದ್ದು, ಇದರ ವರದಿಯನ್ನು ಸ್ವಿಜರ್ಲೆಂಡ್​​ನ (Switzerland) ದಾವೋಸ್​​ನಲ್ಲಿ (Davos) ನಡೆಯುತ್ತಿರುವ ವಿಶ್ವ ಆರ್ಥಿಕ ಸಭೆಯಲ್ಲಿ (World Economic Forum) ಮಂಡಿಸಿದೆ.

ಸಮೀಕ್ಷೆಗೆ ಒಳಗಾದ ಪ್ರತಿ 10 ಮಂದಿ ಸಿಇಒಗಳ ಪೈಕಿ ನಾಲ್ವರು (ಶೇ 40ರಷ್ಟು ಜಾಗತಿಕ ಮತ್ತು ಶೇ 41ರಷ್ಟು ಭಾರತೀಯ ಸಿಇಒಗಳು) ತಮ್ಮ ಕಂಪನಿಗಳು ಈಗಿನ ಹಾದಿಯಲ್ಲೇ ಮುಂದುವರಿದರೆ ಮುಂದಿನ 10 ವರ್ಷಗಳಲ್ಲಿ ಆರ್ಥಿಕವಾಗಿ ಸ್ಥಿರವಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಭಾರತದ ಶೇ 78ರಷ್ಟು ಸಿಇಒಗಳು, ಜಾಗತಿಕವಾಗಿ ಶೇ 73ರಷ್ಟು ಸಿಇಒಗಳು, ಏಷ್ಯಾ ಪೆಸಿಫಿಕ್​ನ ಶೇ 69ರಷ್ಟು ಸಿಇಒಗಳು ಮುಂದಿನ 12 ತಿಂಗಳುಗಳಲ್ಲಿ ತಮ್ಮ ಕಂಪನಿಯ ಬೆಳವಣಿಗೆ ಕುಂಠಿತವಾಗಬಹುದು ಎಂದು ಅಂದಾಜಿಸಿದ್ದಾರೆ. ಒಟ್ಟಾರೆ ಜಾಗತಿಕ ಪರಿಸ್ಥಿತಿ ಜತೆ ಹೋಲಿಸಿದರೆ ಭಾರತದ ಆರ್ಥಿಕತೆ ಮುಂದಿನ 12 ತಿಂಗಳುಗಳಲ್ಲಿ ಚೇತರಿಕೆ ಕಾಣುವ ಭರವಸೆ ಇದೆ ಎಂದು ಶೇ 57ರಷ್ಟು ಸಿಇಒಗಳು ಅಭಿಪ್ರಾಯಪಟ್ಟಿದ್ದಾರೆ.

ಏಷ್ಯಾ ಪೆಸಿಫಿಕ್​ನ ಶೇ 37ರಷ್ಟು ಸಿಇಒಗಳು ಮತ್ತು ಜಾಗತಿಕವಾಗಿ ಶೇ 29ರಷ್ಟು ಸಿಇಒಗಳು ಮುಂದಿನ 12 ತಿಂಗಳುಗಳಲ್ಲಿ ಆರ್ಥಿಕ ಬೆಳವಣಿಗೆ ಸುಧಾರಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನು ಓದಿ: Dunzo Layoffs: ಬೆಂಗಳೂರು ಮೂಲದ ಡುಂಜೋದಲ್ಲಿ ಶೇ 3ರಷ್ಟು ಉದ್ಯೋಗಿಗಳ ವಜಾ

ಭಾರತದ ಶೇ 93ರಷ್ಟು ಸಿಇಒಗಳು ಕಾರ್ಯನಿರ್ವಹಣೆ ವೆಚ್ಚ ಕಡಿತಗೊಳಿಸುವುದಕ್ಕೇ ಆದ್ಯತೆ ನೀಡುವುದಾಗಿ ಹೇಳಿದ್ದಾರೆ. ಸಮೀಕ್ಷೆಯಲ್ಲಿ ಒಟ್ಟಾರೆಯಾಗಿ 105 ದೇಶಗಳ 4,410 ಸಿಇಒಗಳು ಭಾಗಿಯಾಗಿದ್ದರು. ಈ ಪೈಕಿ 68 ಮಂದಿ ಭಾರತೀಯ ಕಂಪನಿಗಳ ಸಿಇಒಗಳಾಗಿದ್ದಾರೆ. 2022ರ ಅಕ್ಟೋಬರ್, ನವೆಂಬರ್ ಅವಧಿಯಲ್ಲಿ ಸಮೀಕ್ಷೆ ನಡೆಸಲಾಗಿತ್ತು.

ವಿಶ್ವಬ್ಯಾಂಕ್ ಪ್ರಕಾರ ಭಾರತದ ಆರ್ಥಿಕತೆಯು 2021-22ಕ್ಕೆ ಹೋಲಿಸಿದರೆ 2022-23ರಲ್ಲಿ ತುಸು ಮಂದಗತಿಯ ಬೆಳವಣಿಗೆ ಕಾಣಲಿದೆ ಎಂದು ಹೇಳಲಾಗಿದೆ. ದೇಶೀಯ ಬೇಡಿಕೆಯ ಕಾರಣದಿಂದ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ಆರ್ಥಿಕತೆಯಾಇ ಭಾರತ ಗುರುತಿಸಿಕೊಳ್ಳಲಿದೆ ಎಂದೂ ವಿಶ್ವಬ್ಯಾಂಕ್ ಹೇಳಿದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಹಾರಿ ಬಿದ್ದ ಯುವಕ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಸತೀಶ್ ಜಾರಕಿಹೊಳಿಗೆ ವಯಸ್ಸು 62 ಆದರೂ ಕ್ರೀಡಾಪಟುವಿನಂಥ ಪರ್ಸನಾಲಿಟಿ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!