AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐದಾರು ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸಾವಿರ ಹೊಸ ಸ್ಟಾರ್ಟಪ್​ಗಳ ಆರಂಭ: ಪ್ರಧಾನಿ ಮೋದಿ

PM Narendra Modi at Vadodara: ಕಳೆದ ಹತ್ತು ವರ್ಷದಲ್ಲಿ ಭಾರತದ ಡಿಫೆನ್ಸ್ ಪ್ರೊಡಕ್ಷನ್ ಪ್ರಮಾಣ ಮೂರು ಪಟ್ಟು ಬೆಳೆದಿದೆ. ರಕ್ಷಣಾ ಉತ್ಪನ್ನಗಳ ರಫ್ತು 43,746 ಕೋಟಿ ರೂ ಇದ್ದದ್ದು 10 ವರ್ಷದಲ್ಲಿ 1,27,265 ರೂಗೆ ಏರಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಇಂದು ಗುಜರಾತ್​ನ ವಡೋದರಾದಲ್ಲಿ ಸಿ295 ಮಿಲಿಟರಿ ವಿಮಾನ ಘಟಕಕ್ಕೆ ಚಾಲನೆ ನೀಡಿದ್ದಾರೆ.

ಐದಾರು ವರ್ಷದಲ್ಲಿ ರಕ್ಷಣಾ ಕ್ಷೇತ್ರದಲ್ಲಿ ಸಾವಿರ ಹೊಸ ಸ್ಟಾರ್ಟಪ್​ಗಳ ಆರಂಭ: ಪ್ರಧಾನಿ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 28, 2024 | 12:10 PM

Share

ವಡೋದರಾ, ಅಕ್ಟೋಬರ್ 28: ಕಳೆದ ಒಂದು ದಶಕದಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಪರಿಣಾಮವಾಗಿ ಭಾರತದಲ್ಲಿ ರಕ್ಷಣಾ ಕ್ಷೇತ್ರ ಹುಲುಸಾಗಿ ಬೆಳೆಯುತ್ತಿದೆ. ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಖಾಸಗಿ ವಲಯದ ಭಾಗವಹಿಸುವಿಕೆ ಹೆಚ್ಚುತ್ತಿದೆ. ಕಳೆದ ಐದಾರು ವರ್ಷದಲ್ಲಿ 1,000 ಹೊಸ ಸ್ಟಾರ್ಟಪ್​ಗಳು ಆರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗುಜರಾತ್​ನ ವಡೋದರಾ ನಗರದಲ್ಲಿ ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ನರೇಂದ್ರ ಮೋದಿ, ಸರ್ಕಾರ ತೆಗೆದುಕೊಂಡ ವಿವಿಧ ಕ್ರಮಗಳ ಬಗ್ಗೆ ಮಾಹಿತಿ ನೀಡಿದ್ದಾರೆ.

‘ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್​ನಲ್ಲಿ ಪ್ರೈವೇಟ್ ಸೆಕ್ಟರ್​ನ ಪಾಲ್ಗೊಳ್ಳುವಿಕೆಯನ್ನು ಹೆಚ್ಚಿಸಿದ್ದೇವೆ. ಖಾಸಗಿ ವಲಯ ಹೆಚ್ಚು ಕ್ಷಮತೆ ಹೊಂದಿರುವಂತೆ ನೋಡಿಕೊಳ್ಳಲಾಗಿದೆ. ಆರ್ಡ್ನೆನ್ಸ್ ಫ್ಯಾಕ್ಟರಿಗಳನ್ನು (ದೇಶೀಯವಾಗಿ ಮಿಲಿಟರಿ ಉತ್ಪನ್ನಗಳನ್ನು ತಯಾರಿಸುವ ಘಟಕ) ಏಳು ದೊಡ್ಡ ಕಂಪನಿಗಳಾಗಿ ರೂಪಿಸಲಾಗಿದೆ. ಡಿಆರ್​ಡಿಎ ಮತ್ತು ಎಚ್​ಎಎಲ್​ಗೆ ಹೆಚ್ಚು ಶಕ್ತಿ ತುಂಬಿದ್ದೇವೆ. ಉತ್ತರಪ್ರದೇಶ ಮತ್ತು ತಮಿಳುನಾಡಿನಲ್ಲಿ ಎರಡು ದೊಡ್ಡ ಡಿಫೆನ್ಸ್ ಕಾರಿಡಾರ್​ಗಳನ್ನು ಸ್ಥಾಪಿಸಿದ್ದೇವೆ,’ ಎಂದು ಪ್ರಧಾನಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ವಡೋದರಾದಲ್ಲಿ ಟಾಟಾ ಗ್ರೂಪ್​ನಿಂದ ಮಿಲಿಟರಿ ವಿಮಾನದ ಫ್ಯಾಕ್ಟರಿ; ಸ್ಪೇನ್ ಪ್ರಧಾನಿ ಮತ್ತು ನರೇಂದ್ರ ಮೋದಿಯಿಂದ ಉದ್ಘಾಟನೆ

ಕಳೆದ ಹತ್ತು ವರ್ಷದಲ್ಲಿ ಭಾರತದ ರಕ್ಷಣಾ ಉತ್ಪನ್ನಗಳ ರಫ್ತು 30 ಪಟ್ಟು ಹೆಚ್ಚಿದೆ. ನೂರಕ್ಕೂ ಹೆಚ್ಚು ದೇಶಗಳಿಗೆ ಇವತ್ತು ರಕ್ಷಣಾ ಉಪಕರಣಗಳನ್ನು ಸರಬರಾಜು ಮಾಡುತ್ತಿದ್ದೇವೆ. ದೇಶದಲ್ಲಿ 18,000ಕ್ಕೂ ಹೆಚ್ಚು ವಿಮಾನದ ಬಿಡಿಭಾಗಗಳನ್ನು ತಯಾರಿಸಲಾಗುತ್ತದೆ. ಸಣ್ಣ ಮತ್ತು ಕಿರು ಉದ್ಯಮಗಳು ಈ ತಯಾರಿಕಾ ಕಾರ್ಯವನ್ನು ಮುನ್ನಡೆಸಲಿವೆ ಎಂದು ಮೋದಿ ಹೇಳಿದ್ಧಾರೆ.

ಟಾಟಾ ಏರ್​ಕ್ರಾಫ್ಟ್ ಕಾಂಪ್ಲೆಕ್ಸ್​ನಲ್ಲಿ ಏರ್​ಬಸ್​ನ ಸಿ-295 ಯುದ್ಧವಿಮಾನದ ತಯಾರಿಕೆ ನಡೆಯಲಿದೆ. ಏರ್​ಬಸ್ ಸಹಯೋಗದಲ್ಲಿ ಟಾಟಾ ಸಂಸ್ಥೆ 40 ಮಿಲಿಟರಿ ವಿಮಾನಗಳನ್ನು ಇಲ್ಲಿ ಮ್ಯಾನುಫ್ಯಾಕ್ಚರ್ ಮಾಡಲಿದೆ. ಸ್ಪೇನ್ ಪ್ರಧಾನಿ ಪೆಡ್ರೋ ಸಾಂಚೆಜ್ ಮತ್ತು ನರೇಂದ್ರ ಮೋದಿ ಜಂಟಿಯಾಗಿ ಈ ಘಟಕಕ್ಕೆ ಚಾಲನೆ ನೀಡಿದ್ದಾರೆ.

ಇದನ್ನೂ ಓದಿ: Income Disparity: ಭಾರತದಲ್ಲಿ ಆದಾಯ ಅಸಮಾನತೆ ಅಂತರದಲ್ಲಿ ಗಣನೀಯ ಇಳಿಕೆ: ಎಸ್​ಬಿಐ ಅಧ್ಯಯನ ವರದಿ

ಕಳೆದ ಒಂದು ದಶಕದಲ್ಲಿ ಭಾರತದಲ್ಲಿ ರಕ್ಷಣಾ ಉತ್ಪಾದನೆ 43,746 ಕೋಟಿ ರೂನಿಂದ 1,27,265 ಕೋಟಿ ರೂಗೆ ಹೆಚ್ಚಿದೆ. ಖಾಸಗಿ ವಲಯದ ಪಾಲು ಇದರಲ್ಲಿ ಶೇ. 21ರಷ್ಟಿದೆ. 16,000ಕ್ಕೂ ಹೆಚ್ಚು ಎಂಎಸ್​ಎಂಇಗಳು ಡಿಫೆನ್ಸ್ ಇಕೋಸಿಸ್ಟಂನ ಭಾಗವಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Mon, 28 October 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!