AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2025-26ರಲ್ಲಿ ಭಾರತವೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆ: ಆರ್​ಬಿಐ ಬುಲೆಟಿನ್ ಅಂದಾಜು

RBI monthly bulletin: 2025-26ರಲ್ಲೂ ಭಾರತವೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆಯಾಗಿರಲಿದೆ. ಜಾಗತಿಕ ಸವಾಲುಗಳ ನಡುವೆಯೂ ಭಾರತ ಉತ್ತಮ ಬೆಳವಣಿಗೆ ಕಾಣಬಹುದು ಎಂದು ಆರ್​ಬಿಐ ಬುಲೆಟ್​ನಲ್ಲಿ ಅಂದಾಜು ಮಾಡಲಾಗಿದೆ. 2024-25ರಲ್ಲಿ ಮೊದಲಾರ್ಧಕ್ಕೆ ಹೋಲಿಸಿದರೆ ಎರಡನೇ ಭಾಗದಲ್ಲಿ ಆರ್ಥಿಕ ಚಟುವಟಿಕೆ ಚುರುಕುಗೊಂಡಿದೆ ಎಂದು ಹೇಳಿರುವ ಆರ್​ಬಿಐ, ಈ ನಿಟ್ಟಿನಲ್ಲಿ ಪುಷ್ಟೀಕರಿಸುವ ವಿವಿಧ ಸೂಚಕಗಳ ದತ್ತಾಂಶವನ್ನು ಉಲ್ಲೇಖಿಸಿದೆ.

2025-26ರಲ್ಲಿ ಭಾರತವೇ ಅತಿವೇಗವಾಗಿ ಬೆಳೆಯುವ ಆರ್ಥಿಕತೆ: ಆರ್​ಬಿಐ ಬುಲೆಟಿನ್ ಅಂದಾಜು
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 21, 2025 | 4:32 PM

Share

ಮುಂಬೈ, ಫೆಬ್ರುವರಿ 21: ಪ್ರಸಕ್ತ ಹಣಕಾಸು ವರ್ಷದ (2024-25) ದ್ವಿತೀಯಾರ್ಧದಲ್ಲಿ ಭಾರತದ ಆರ್ಥಿಕ ಚಟುವಟಿಕೆ ಮತ್ತೆ ಹುರುಪು ಪಡೆದಿದೆ. ಇದರ ಕಿಡಿಯಿಂದ ಬೆಳವಣಿಗೆಯ ಹಾದಿ ಮತ್ತಷ್ಟು ದೂರ ಸಾಗಬಹುದು ಎಂದು ಆರ್​​ಬಿಐನ ಮಾಸಿಕ ಬುಲೆಟ್​ನಲ್ಲಿ ತಿಳಿಸಲಾಗಿದೆ. ಜಾಗತಿಕ ಸವಾಲಿನ ವಾತಾರಣದ ಮಧ್ಯೆಯೂ 2025-26ರಲ್ಲಿ ಭಾರತದ ಆರ್ಥಿಕತೆ ಅತಿವೇಗದ ಬೆಳವಣಿಗೆ ಹೊಂದಬಹುದು ಎಂದು ಎಂದು ಐಎಂಎಫ್ ಮತ್ತು ವಿಶ್ವಬ್ಯಾಂಕ್ ಮಾಡಿರುವ ಅಂದಾಜನ್ನು ಆರ್​ಬಿಐ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಈ ಬಾರಿಯ ಬಜೆಟ್​ನಲ್ಲಿ ತೆಗೆದುಕೊಳ್ಳಲಾಗಿರುವ ಕೆಲ ನಿರ್ಧಾರಗಳನ್ನು ಆರ್​ಬಿಐ ಶ್ಲಾಘಿಸಿದೆ. ಹಣಕಾಸು ಶಿಸ್ತು ಮತ್ತು ಪ್ರಗತಿಯ ಗುರಿ ಎರಡೂ ಉದ್ದೇಶಗಳನ್ನು ಬಜೆಟ್​ನಲ್ಲಿ ಸಮತೋಲಿತವಾಗಿ ಒಳಗೊಳ್ಳಲಾಗಿದೆ. ಗೃಹ ಆದಾಯ ಮತ್ತು ಅನುಭೋಗ ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗಿದೆ. ಪ್ರಗತಿ ಹೆಚ್ಚಿಸಲು ಬಂಡವಾಳ ವೆಚ್ಚದತ್ತಲೂ ಗಮನ ಕೊಡಲಾಗಿದೆ ಎಂದು ಆರ್​ಬಿಐನ ಮಾಸಿಕ ಬುಲೆಟ್​ನಲ್ಲಿ ವಿಶ್ಲೇಷಿಸಲಾಗಿದೆ.

ರೀಟೇಲ್ ಹಣದುಬ್ಬರ ಜನವರಿಯಲ್ಲಿ ಶೇ. 4.3ರಕ್ಕೆ ಇಳಿದಿದೆ. ಇದು ಐದು ತಿಂಗಳಲ್ಲೇ ಅತಿಕಡಿಮೆ ಹಣದುಬ್ಬರ ಸ್ಥಿತಿಯಾಗಿದೆ. ಮುಂಗಾರು ಫಸಲು ಉತ್ತಮವಾಗಿ ಬಂದು ಆಹಾರವಸ್ತುಗಳು ಮಾರುಕಟ್ಟೆಗೆ ಬಂದಿದ್ದರಿಂದ ತರಕಾರಿ ಬೆಲೆ ಸಾಕಷ್ಟು ಕಡಿಮೆ ಆಗಿದೆ. ಇದರಿಂದಾಗಿ ಹಣದುಬ್ಬರ ದರ ಇಳಿಯಲು ಸಾಧ್ಯವಾಯಿತು ಎಂಬುದನ್ನು ಆರ್​ಬಿಐ ವರದಿಯಲ್ಲಿ ಗಮನಿಸಲಾಗಿದೆ.

ಇದನ್ನೂ ಓದಿ: ಓಪನ್ ಅಕ್ಸೆಸ್ ಮೂಲಕ ವಿದ್ಯುತ್ ಖರೀದಿ; ಸೆಂಟ್ರಲ್ ರೈಲ್ವೆಗೆ ಆರು ಸಾವಿರ ಕೋಟಿ ರೂ ಉಳಿತಾಯ

ಹಿಂದಿನ ಕ್ವಾರ್ಟರ್​ಗೆ ಹೋಲಿಸಿದರೆ ಮೂರನೇ ಕ್ವಾರ್ಟರ್​ನಲ್ಲಿ (ಅಕ್ಟೋಬರ್​ನಿಂದ ಡಿಸೆಂಬರ್) ಔದ್ಯಮಿಕ ಚಟುವಟಿಕೆ ಉತ್ತಮಗೊಂಡಿದೆ. ಜನವರಿಯಲ್ಲಿನ ಪರ್ಚೇಸಿಂಗ್ ಮ್ಯಾನೇಜರ್ಸ್ ಇಂಡೆಕ್ಸ್​ನ ದತ್ತಾಂಶವು ಇದನ್ನು ದೃಢಪಡಿಸುತ್ತದೆ.

ಟ್ರಾಕ್ಟರ್​ಗಳ ಮಾರಾಟ, ಇಂಧನ ಬಳಕೆ ಹೆಚ್ಚಳ, ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ, ಇತ್ಯಾದಿ ಅಂಶಗಳು ಒಟ್ಟಾರೆ ಆರ್ಥಿಕತೆ ಚುರುಕುಗೊಂಡಿರುವುದರ ಸಂಕೇತವಾಗಿವೆ ಎಂಬುದನ್ನು ಈ ಬುಲೆಟ್​ನಲ್ಲಿ ಎತ್ತಿ ತೋರಿಸಲಾಗಿದೆ.

ಮೂರನೇ ಕ್ವಾರ್ಟರ್​ನಲ್ಲಿ ಆರ್​ಬಿಐ ನಿರೀಕ್ಷೆಗಿಂತ ಹೆಚ್ಚು ಆರ್ಥಿಕ ವೃದ್ಧಿ?

ಭಾರತದ ಆರ್ಥಿಕತೆ ಡಿಸೆಂಬರ್ ಅಂತ್ಯದ ಕ್ವಾರ್ಟರ್​ನಲ್ಲಿ ನಿರೀಕ್ಷೆಗಿಂತ ತುಸು ಹೆಚ್ಚೇ ಬೆಳವಣಿಗೆ ಕಾಣಬಹುದು ಎಂಬುದು ಆರ್ಥಿಕ ತಜ್ಞರ ಸಮೀಕ್ಷೆಯಿಂದ ವ್ಯಕ್ತವಾಗಿದೆ. ಎಕನಾಮಿಕ್ ಟೈಮ್ಸ್ ನಡೆಸಿದ ಪೋಲಿಂಗ್​ನಲ್ಲಿ, ಭಾರತದ ಜಿಡಿಪಿ ದರ ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಕ್ವಾರ್ಟರ್​ನಲ್ಲಿ ಶೇ. 6.3ರಷ್ಟಿರಬಹುದು ಎನ್ನುವ ಸರಾಸರಿ ಅಂದಾಜು ಸಿಕ್ಕಿದೆ. ಪೋಲಿಂಗ್​ನಲ್ಲಿ ಪಾಲ್ಗೊಂಡಿದ್ದ ವಿವಿಧ ಆರ್ಥಿಕ ತಜ್ಞರು ಜಿಡಿಪಿ ದರ ಶೇ. 5.8ರಿಂದ ಶೇ. 6.5ರ ಶ್ರೇಣಿಯಲ್ಲಿ ಅಂದಾಜು ಮಾಡಿದ್ದರು. ಸರಾಸರಿಯಾಗಿ ಅದು ಶೇ. 6.3ರಷ್ಟಾಗುತ್ತದೆ.

ಇದನ್ನೂ ಓದಿ: ಪಿಎಂ ಇಂಟರ್ನ್​ಶಿಪ್ ಸ್ಕೀಮ್; 2ನೇ ಸುತ್ತಿನಲ್ಲಿ 1 ಲಕ್ಷ ಇಂಟರ್ನಿಗಳಿಗೆ ಅವಕಾಶ

ಆರ್​ಬಿಐನ ಎಂಪಿಸಿ ಸಭೆಯಲ್ಲಿ ಮಾಡಲಾಗಿದ್ದ ಅಂದಾಜು ಪ್ರಕಾರ ಡಿಸೆಂಬರ್ ಕ್ವಾರ್ಟರ್​ನಲ್ಲಿ ಆರ್ಥಿಕತೆ ಶೇ. 6.2ರಷ್ಟು ಬೆಳೆಯಬಹುದು ಎನ್ನಲಾಗಿತ್ತು. ಈಗ ಬೇರೆ ಬೇರೆ ಆರ್ಥಿಕ ತಜ್ಞರು ಬೆಳವಣಿಗೆ ವಿಚಾರದಲ್ಲಿ ಹೆಚ್ಚು ಆಶಾದಾಯಕವಾಗಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ