AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವರ್ಷ ಭಾರತದ ಆರ್ಥಿಕತೆಗೆ ಈ ಮೂರು ವಿದ್ಯಮಾನಗಳಿಂದ ಅಪಾಯ ಸಾಧ್ಯತೆ: ಮಾರ್ಗನ್ ಸ್ಟಾನ್ಲೀ

Morgan Stanley On Indian Economy: ಇದೇ ವೇಗದಲ್ಲಿ ಭಾರತದ ಜಿಡಿಪಿ ಬೆಳೆದರೆ 2027ರಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಆಗುವ ಗುರಿ ಮುಟ್ಟಬಹುದು. ಅನೇಕ ಅಂತಾರಾಷ್ಟ್ರೀಯ ಬ್ರೋಕರೇಜ್ ಸಂಸ್ಥೆಗಳು ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿವೆ. 2024 ಮತ್ತು 2025ರ ಕ್ಯಾಲಂಡರ್ ವರ್ಷಗಳಲ್ಲಿ ಭಾರತದ ಆರ್ಥಿಕತೆ ಶೇ. 6.4 ಮತ್ತು ಶೇ. 6.5ರಷ್ಟು ಬೆಳೆಯಬಹುದು ಎಂದು ಮಾರ್ಗನ್ ಸ್ಟಾನ್ಲೀ ನಿರೀಕ್ಷಿಸಿದೆ.

ಮುಂದಿನ ವರ್ಷ ಭಾರತದ ಆರ್ಥಿಕತೆಗೆ ಈ ಮೂರು ವಿದ್ಯಮಾನಗಳಿಂದ ಅಪಾಯ ಸಾಧ್ಯತೆ: ಮಾರ್ಗನ್ ಸ್ಟಾನ್ಲೀ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2023 | 3:32 PM

Share

ನವದೆಹಲಿ, ನವೆಂಬರ್ 16: ಭಾರತದ ಆರ್ಥಿಕತೆ (Indian economy) ಸದ್ಯಕ್ಕೆ ವ್ಯವಸ್ಥಿತವಾಗಿ ಓಡುತ್ತಿದೆ. ಅತಿವೇಗದಲ್ಲಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಲ್ಲಿ ಭಾರತದ್ದೂ ಒಂದು. ಹೆಚ್ಚಿನ ಬೆಲೆ ಏರಿಕೆ ನಡುವೆಯೂ ಮತ್ತು ಜಾಗತಿಕ ಭೌಗೋಳಿಕ ರಾಜಕೀಯ ಬಿಕ್ಕಟ್ಟುಗಳ ಮಧ್ಯೆಯೂ ಕೆಸರಿನಲ್ಲಿ ಕಮಲ ಅರಳುವಂತೆ ಭಾರತದ ಆರ್ಥಿಕತೆ ಅರಳುತ್ತಿದೆ. ಇದೇ ವೇಗದಲ್ಲಿ ಭಾರತದ ಜಿಡಿಪಿ ಬೆಳೆದರೆ 2027ರಲ್ಲಿ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆ ಆಗುವ ಗುರಿ ಮುಟ್ಟಬಹುದು. ಅನೇಕ ಅಂತಾರಾಷ್ಟ್ರೀಯ ಬ್ರೋಕರೇಜ್ ಸಂಸ್ಥೆಗಳು ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿವೆ. 2024 ಮತ್ತು 2025ರ ಕ್ಯಾಲಂಡರ್ ವರ್ಷಗಳಲ್ಲಿ ಭಾರತದ ಆರ್ಥಿಕತೆ ಶೇ. 6.4 ಮತ್ತು ಶೇ. 6.5ರಷ್ಟು ಬೆಳೆಯಬಹುದು ಎಂದು ಮಾರ್ಗನ್ ಸ್ಟಾನ್ಲೀ ನಿರೀಕ್ಷಿಸಿದೆ.

2024ರಲ್ಲಿ ಇವೆಯಂತೆ ಅಪಾಯಗಳು

ಮುಂದಿನ ವರ್ಷ ಭಾರತದ ಆರ್ಥಿಕತೆಗೆ ತುಸು ಅಪಾಯ ತರಬಲ್ಲ ಕೆಲ ಸಂಗತಿಗಳನ್ನು ಮಾರ್ಗನ್ ಸ್ಟಾನ್ಲೀ ಎತ್ತಿತೋರಿಸಿದೆ.

  1. ಎಣ್ಣೆ ಹಾಗೂ ಇತರ ಸರಕುಗಳ ಬೆಲೆ ಏರಿಕೆಯಿಂದ ಹಣದುಬ್ಬರ ಹೆಚ್ಚಬಹುದು. ಇದರಿಂದ ಆರ್​ಬಿಐ ಬಡ್ಡಿದರ ಇಳಿಸುವುದು ವಿಳಂಬವಾಗಬಹುದು.
  2. ಜಾಗತಿಕ ಹಿಂಜರಿತದಂತಹ ಬಾಹ್ಯ ಕಾರಣಗಳಿಂದ ರುಪಾಯಿ ಕರೆನ್ಸಿಗೆ ಹಿನ್ನಡೆಯಾಗಬಹುದು. ಇದರಿಂದ ಸ್ಥೂಲ ಆರ್ಥಿಕ ಸ್ಥಿತಿಯ ಸಮತೋಲನದಲ್ಲಿ ವ್ಯತ್ಯಯವಾಗಬಹುದು.
  3. ಮುಂದಿನ ಸಾರ್ವತ್ರಿಕ ಚುನಾವಣೆ (ಲೋಕಸಭೆಗೆ) ಇರುವುದು ಮತ್ತೊಂದು ಅಪಾಯ. ಯಾಕೆಂದರೆ, ಸರ್ಕಾರ ಬದಲಾದರೆ ಈಗಿರುವ ಹಾದಿ ಬದಲಾಗುವ ಸಾಧ್ಯತೆ ಇರುತ್ತದೆ.

ಇದನ್ನೂ ಓದಿ: ಆನ್​ಲೈನ್​ನಲ್ಲಿ ಹಂದಿ ಕಡಿಯುವ ಹಗರಣ ಟ್ರೆಂಡಿಂಗ್; ನಿತಿನ್ ಕಾಮತ್ ಉಲ್ಲೇಖಿಸಿದ ಈ ಸ್ಕ್ಯಾಮ್ ಏನು? ಯಾಕೆ ಇದು ಡೆಡ್ಲಿ?

ಮಾರ್ಗನ್ ಸ್ಟಾನ್ಲೀ ಸಂಸ್ಥೆ ಭಾರತಕ್ಕೆ ಈ ಮೇಲಿನ ಮೂರು ಸಮಸ್ಯೆಗಳು ಮುಂದಿನ ವರ್ಷ ಎದುರಾಗಬಹುದು ಎಂದು ಎಚ್ಚರಿಸಿದೆ. ಆದರೆ, ಭಾರತದ ಆರ್ಥಿಕತೆಯ ಮೂಲಭೂತ ಶಕ್ತಿ ಪ್ರಬಲವಾಗಿರುವುದರಿಂದ ಅಡೆತಡೆಗಳನ್ನು ಸುಲಭವಾಗಿ ದಾಟಿ ಹೋಗುತ್ತದೆ.

ಸರ್ಕಾರದಿಂದ ಬಂಡವಾಳ ವೆಚ್ಚ ಹೆಚ್ಚುತ್ತಿರುವುದು, ಆಂತರಿಕವಾಗಿ ಬೇಡಿಕೆ ಮತ್ತು ಅನುಭೋಗ ಪ್ರಮಾಣ ಹೆಚ್ಚುತ್ತಿರುವುದು ಭಾರತದ ಆರ್ಥಿಕತೆಗೆ ಪುಷ್ಟಿ ಕೊಡುತ್ತದೆ ಎಂಬುದು ತಜ್ಞರ ಅಭಿಮತ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ