AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತಮ ರಾಜಕೀಯ ಸುಪರ್ದಿಯಲ್ಲಿ ಆರ್ಥಿಕತೆ; ಮಾರುಕಟ್ಟೆಯೂ ಕೂಡ ಚೇತರಿಕೆ ಹಾದಿಯಲ್ಲಿ: ವರದಿ

Axis Securities CIO memo: ಭಾರತದಲ್ಲಿ ಸ್ಥಿರವಾದ ರಾಜಕೀಯ ಆಡಳಿತ ಇದ್ದು, ಈ ಸುರಕ್ಷಿತ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಭದ್ರವಾಗಿದೆ ಎಂದು ಎಕ್ಸಿಸ್ ಸೆಕ್ಯುರಿಟೀಸ್​ನ ವರದಿಯೊಂದರಲ್ಲಿ ಅಭಿಪ್ರಾಯಪಡಲಾಗಿದೆ. ಸರ್ಕಾರದಿಂದ ಹೆಚ್ಚಾಗುತ್ತಿರುವ ಬಂಡವಾಳ ವೆಚ್ಚ, ಖಾಸಗಿ ವಲಯದಿಂದಲೂ ಹೆಚ್ಚಲಿರುವ ವೆಚ್ಚ, ಕಾರ್ಪೊರೇಟ್ ಕಂಪನಿಗಳ ಉತ್ತಮ ಕ್ವಾರ್ಟರ್ಲಿ ರಿಸಲ್ಟ್ ಇತ್ಯಾದಿ ಕಾರಣದಿಂದ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ ಎಂದಿದೆ ಈ ವರದಿ.

ಉತ್ತಮ ರಾಜಕೀಯ ಸುಪರ್ದಿಯಲ್ಲಿ ಆರ್ಥಿಕತೆ; ಮಾರುಕಟ್ಟೆಯೂ ಕೂಡ ಚೇತರಿಕೆ ಹಾದಿಯಲ್ಲಿ: ವರದಿ
ಭಾರತೀಯ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 17, 2025 | 11:58 AM

Share

ನವದೆಹಲಿ, ಫೆಬ್ರುವರಿ 17: ಇತ್ತೀಚಿನ ವಿಧಾನಸಭಾ ಚುನಾವಣೆಗಳಲ್ಲಿನ ಪೂರಕ ಫಲಿತಾಂಶದಿಂದ ರಾಜಕೀಯ ಪರಿಸ್ಥಿತಿ ಸ್ಥಿರವಾಗಿದೆ. ಉತ್ತಮ ಬಜೆಟ್ ಕೂಡ ಮಂಡನೆ ಆಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಆರ್ಥಿಕತೆಯು ಸುರಕ್ಷಿತ ವಾತಾವರಣದಲ್ಲಿದೆ ಎಂದು ವರದಿಯೊಂದರಲ್ಲಿ ವಿಶ್ಲೇಷಿಸಲಾಗಿದೆ. ಸರ್ಕಾರದ ಬಂಡವಾಳ ವೆಚ್ಚ ಹೆಚ್ಚಲಿದ್ದು, ಕಾರ್ಪೊರೇಟ್ ಕಂಪನಿಗಳ ತ್ರೈಮಾಸಿಕ ಆದಾಯಗಳು ಉತ್ತಮಗೊಳ್ಳುವ ನಿರೀಕ್ಷೆ ಇದೆ. ಖಾಸಗಿ ವಲಯದಿಂದಲೂ ಬಂಡವಾಳ ವೆಚ್ಚ ಹೆಚ್ಚಾಗುವ ಸಾಧ್ಯತೆ ಕಾಣುತ್ತಿದೆ ಎಂದು ಎಕ್ಸಿಸ್ ಸೆಕ್ಯೂರಿಟೀಸ್​ನ ಫೆಬ್ರುವರಿ ತಿಂಗಳ ಸಿಐಒ ಮೆಮೋ ವರದಿಯಲ್ಲಿ ಅಭಿಪ್ರಾಯಪಡಲಾಗಿದೆ.

ಮಾರುಕಟ್ಟೆ ಚೇತರಿಕೆ ಕಾಣುವ ಹಾದಿಯಲ್ಲಿ….

ಮಾರುಕಟ್ಟೆ ಸಾಕಷ್ಟು ಮಾರಾಟ ಕಂಡಿದೆ. ದೇಶೀಯ ಸಾಂಸ್ಥಿಕ ಹೂಡಿಕೆದಾರರಿಂದ ಜನವರಿಯಲ್ಲಿ ಮಾರುಕಟ್ಟೆಗೆ ಒಳ ಹರಿವು ಉತ್ತಮ ರೀತಿಯಲ್ಲಿ ಮುಂದುವರಿದಿದೆ. ಮಾರುಕಟ್ಟೆ ಯಾವ ಕ್ಷಣದಲ್ಲಾದರೂ ಸಕಾರಾತ್ಮಕ ಸ್ಥಿತಿಗೆ ಬರಬಹುದು. ಈ ವರ್ಷಾಂತ್ಯದೊಳಗೆ ಷೇರು ಮಾರುಕಟ್ಟೆ ಹೊಸ ಎತ್ತರ ತಲುಪಬಹುದು ಎಂದು ಸಿಐಒ ಮೆಮೋದಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಇಂದಿನಿಂದ ಫಾಸ್ಟ್​ಟ್ಯಾಗ್ ಹೊಸ ನಿಯಮ: ಏನು ಬದಲಾಗಿದೆ?, ಯಾವುದಕ್ಕೆ ದಂಡ?, ಇಲ್ಲಿದೆ ಸಂಪೂರ್ಣ ಮಾಹಿತಿ

ಒಟ್ಟಾರೆ ಆರ್ಥಿಕತೆಯ ರಚನೆ ಭದ್ರವಾಗಿದೆ. ಮಾರುಕಟ್ಟೆಯ ಈಗಿನ ಸ್ಥಿತಿ ಗಮನಿಸಿದರೆ ಹೂಡಿಕೆಗೆ ಒಳ್ಳೆಯ ಅವಕಾಶ ಸಿಕ್ಕಿದೆ. ಈಕ್ವಿಟಿಗಳಿಂದ ಒಳ್ಳೆಯ ರಿಟರ್ನ್ಸ್ ನಿರೀಕ್ಷಿಸಬಹುದು ಎಂದು ಎಕ್ಸಿಸ್ ಸೆಕ್ಯೂರಿಟೀಸ್ ಸಂಸ್ಥೆಯ ಈ ವರದಿಯಲ್ಲಿ ತಿಳಿಸಲಾಗಿದೆ.

ಸದ್ಯದ ಜಾಗತಿಕ ಸ್ಥೂಲ ಆರ್ಥಿಕ ವಾತಾವರಣವು ಡೊನಾಲ್ಡ್ ಟ್ರಂಪ್ ಅವರಿಂದ ಪ್ರಭಾವಿತವಾಗದ್ದಂತಿದೆ. ಸದ್ಯೋಭವಿಷ್ಯದಲ್ಲಿ ಟ್ಯಾರಿಫ್ ಪರಿಣಾಮವಾಗಿ ಮಾರುಕಟ್ಟೆಯ ಅಲುವಾಟು ಮುಂದುವರಿಯಲಿದೆ. ಆದರೆ ಮಧ್ಯಮಾವಧಿಯಿಂದ ದೀರ್ಘಾವಧಿಯವರೆಗೆ ಈಕ್ವಿಟಿಗಳು ಚೇತರಿಕೆ ಪಡೆಯಲಿವೆ ಎಂದಿದೆ.

ಇದನ್ನೂ ಓದಿ: ಬೆಂಗಳೂರಿನ ಹೈಪ್ರಿಕ್ಸ್; ಭಾರತದಲ್ಲಿ ಸೂಪರ್​ಸೋನಿಕ್ ರಾಮ್​ಜೆಟ್ ಎಂಜಿನ್ ನಿರ್ಮಿಸಿದ ಮೊದಲ ಖಾಸಗಿ ಕಂಪನಿ

ಈಗಾಗಲೇ ಸಾಕಷ್ಟು ಮಾರ್ಕೆಟ್ ಕರೆಕ್ಷನ್ ಆಗಿದೆ. ನಮ್ಮ ಹೆಚ್ಚಿನ ಷೇರುಗಳಲ್ಲಿ ಉತ್ತಮ ಮೌಲ್ಯ ಕಾಣುತ್ತಿದೆ. ಈ ಕಂಪನಿಗಳೂ ಕೂಡ ಉತ್ತಮ ಆದಾಯ ತೋರಿಸಿವೆ ಎಂದು ಎಕ್ಸಿಸ್ ಸೆಕ್ಯೂರಿಟೀಸ್ ಸಂಸ್ಥೆಯ ವರದಿಯು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ