2024-26ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ. 7ರಿಂದ 8; ಡಲಾಯ್ಟ್, ಐಎಂಎಫ್, ಆರ್​ಬಿಐ ಅಂದಾಜು

Indian economic growth projection: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 7-7.2ರಷ್ಟು ಬೆಳೆಯಬಹುದು ಎಂದು ಡಲಾಯ್ಟ್ ಇಂಡಿಯಾ ಸಂಸ್ಥೆ ಅಂದಾಜು ಮಾಡಿದೆ. ಐಎಂಎಫ್ ಪ್ರಕಾರ ಜಿಡಿಪಿ ಶೇ. 7ರಷ್ಟು ಹೆಚ್ಚಬಹುದು. ಆರ್​ಬಿಐ ಮತ್ತು ವಿಶ್ವಬ್ಯಾಂಕ್ ಕೂಡ ಬಹುತೇಕ ಇದೇ ದರದ ಬೆಳವಣಿಗೆಯನ್ನು ನಿರೀಕ್ಷಿಸಿವೆ.

2024-26ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಶೇ. 7ರಿಂದ 8; ಡಲಾಯ್ಟ್, ಐಎಂಎಫ್, ಆರ್​ಬಿಐ ಅಂದಾಜು
ಭಾರತದ ಜಿಡಿಪಿ
Follow us
|

Updated on: Oct 23, 2024 | 12:01 PM

ನವದೆಹಲಿ, ಅಕ್ಟೋಬರ್ 23: ಪ್ರಸಕ್ತ ಹಣಕಾಸು ವರ್ಷದಲ್ಲಿ (2024-25) ಭಾರತದ ಆರ್ಥಿಕತೆ ಶೇ. 7ರಿಂದ 7.20ರಷ್ಟು ಬೆಳವಣಿಗೆ ಹೊಂದಬಹುದು ಎಂದು ಡಲಾಯ್ಟ್ ಇಂಡಿಯಾ ಸಂಸ್ಥೆ ಅಂದಾಜು ಮಾಡಿದೆ. ಸರ್ಕಾರದಿಂದ ಆಗುತ್ತಿರುವ ಬಂಡವಾಳ ವೆಚ್ಚ ಮತ್ತು ಉತ್ಪಾದನಾ ಕ್ಷೇತ್ರಕ್ಕೆ ಆಗುತ್ತಿರುವ ಅಧಿಕ ಹೂಡಿಕೆಗಳಿಂದಾಗಿ ಜಿಡಿಪಿ ಹೆಚ್ಚಳ ಉತ್ತಮವಾಗಿರಬಹುದು ಎಂದು ಅದು ಹೇಳಿದೆ. ಆದರೆ, ಜಾಗತಿಕ ಆರ್ಥಿಕತೆ ಮಂದವಾಗಿರುವದರಿಂದ ಮುಂದಿನ ಹಣಕಾಸು ವರ್ಷದಲ್ಲಿ (2025-26) ಭಾರತದ ಬೆಳವಣಿಗೆಯೂ ತುಸು ಮಂದಗೊಳ್ಳಬಹುದು ಎಂದು ಡಲಾಯ್ಟ್ ನಿರೀಕ್ಷಿಸಿದೆ. ಅದರ ಪ್ರಕಾರ ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಶೇ. 6.5ರಿಂದ ಶೇ. 6.8ರ ಶ್ರೇಣಿಯಲ್ಲಿ ಇರಬಹುದು.

ಆರ್​ಬಿಐ ಡೆಪ್ಯುಟಿ ಗವರ್ನರ್ ಹೆಚ್ಚು ಆಶಾದಾಯಕ

2025-26ರಲ್ಲಿ ಭಾರತದ ಆರ್ಥಿಕ ಬೆಳವಣಿಗೆ ಬಗ್ಗೆ ಆರ್​ಬಿಐ ಉಪ ಗವರ್ನರ್ ದೇಬಬ್ರತಾ ಪಾತ್ರ ಹೆಚ್ಚು ಆಶಾದಾಯಕವಾಗದ್ದಾರೆ. ಅಮೆರಿಕದ ನ್ಯೂಯಾರ್ಕ್​ನಲ್ಲಿ ಮೊನ್ನೆ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಪಾತ್ರ, 2025-26ರ ಬಳಿಕ ಭಾರತದ ಆರ್ಥಿಕತೆ ಶೇ. 8ಕ್ಕಿಂತಲೂ ಹೆಚ್ಚಿನ ದರದಲ್ಲಿ ಬೆಳೆಯಬಹುದು ಎಂದಿದ್ದಾರೆ.

ಇದನ್ನೂ ಓದಿ: ಎಲೆಕ್ಟ್ರಿಕ್ ಬಸ್, ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್… ಹೇಗಿದೆ ನೋಡಿ ಕೇಂದ್ರದ ಅರ್ಬನ್ ಮೊಬಿಲಿಟಿ ಮಿಷನ್

ಆದರೆ, 2024-25ರ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿ ಶೇ. 7.2, ಮತ್ತು 2025-26ರಲ್ಲಿ ಶೇ. 7ರಷ್ಟು ಬೆಳೆಯಬಹುದು ಎಂಬುದು ಆರ್​ಬಿಐ ಡೆಪ್ಯುಟಿ ಗವರ್ನರ್ ಅನಿಸಿಕೆ.

ಈ ವರ್ಷ ಭಾರತದ ಜಿಡಿಪಿ ಹೆಚ್ಚಳ ಶೇ. 7: ಐಎಂಎಫ್ ಅಂದಾಜು

ಈ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಶೇ. 7ರಷ್ಟು ಇರಲಿದೆ ಎಂದು ಐಎಂಎಫ್ ಜುಲೈನಲ್ಲಿ ಮಾಡಿದ್ದ ತನ್ನ ಅಂದಾಜನ್ನು ಈಗಲೂ ಪುನರುಚ್ಚರಿಸಿದೆ. ಆದರೆ, 2025-26ರ ಹಣಕಾಸು ವರ್ಷಕ್ಕೆ ಅದು ಶೇ. 6.5ರಷ್ಟು ಬೆಳವಣಿಗೆಯನ್ನು ಮಾತ್ರ ನಿರೀಕ್ಷಿಸಿದೆ.

ಇದನ್ನೂ ಓದಿ: ದೇಶಾದ್ಯಂತ ಜನೌಷಧ ಕೇಂದ್ರಗಳಲ್ಲಿ ಆದ ಒಟ್ಟು ಬಿಸಿನೆಸ್ ಈ ವರ್ಷ 1,000 ಕೋಟಿ ರೂಗಿಂತಲೂ ಹೆಚ್ಚು

ಆರ್​ಬಿಐನ ಅಧಿಕೃತ ಅಂದಾಜಿನ ಪ್ರಕಾರ 2024-25ರಲ್ಲಿ ಭಾರತದ ಜಿಡಿಪಿ ಶೇ. 7.2ರಷ್ಟು ಬೆಳೆಯಬಹುದು. ಇನ್ನು, ವಿಶ್ವಬ್ಯಾಂಕ್ ಶೇ. 7ರ ದರವನ್ನು ಅಂದಾಜು ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಯೋಗೇಶ್ವರ್ ಮನವೊಲಿಸಿದ ಸುರೇಶ್ ಬೆಳಗ್ಗೆಯೇ ಅಣ್ಣನ ಮನೆಯಲ್ಲಿ ಹಾಜರ್!
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
ಕೊಹ್ಲಿ ಆರ್ಭಟಕ್ಕೆ 2 ವರ್ಷ: ಪಂದ್ಯ ಗೆದ್ದ ಬಳಿಕ ನಡೆದಿದ್ದೇನು?
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
‘ಬಿಗ್ ಬಾಸ್’ ಮನೆಯಲ್ಲಿ ಓಪನ್ ಆಗಿ ಶುರುವಾಯ್ತು ರಾಜಕೀಯ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
ಧೈರ್ಯ ಸಾಹಸೇ ಲಕ್ಷ್ಮಿ ದೇವಿ ಮಂತ್ರದ ಹಿಂದಿನ ರಹಸ್ಯ ತಿಳಿಯಿರಿ
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
Nithya Bhavishya: ಈ ರಾಶಿಯ ವ್ಯಾಪಾರಿಗಳು ಇಂದು ಶುಭ ಸುದ್ದಿ ಕೇಳುವರು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಸಹಿಸಲಾಗದ ನೋವಿನಿಂದ ಆಸ್ಪತ್ರೆಗೆ ಬಂದ ದರ್ಶನ್; ಮುಗಿಬಿದ್ದ ಅಭಿಮಾನಿಗಳು
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ