AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Economy: ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷವೂ ಇತರ ದೇಶಗಳಿಗಿಂತ ಮುಂದು: 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ವಿಶ್ವಸಂಸ್ಥೆ ಅಂದಾಜು

UN WESP 2024 Report: ಭಾರತದ ಆರ್ಥಿಕತೆ 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆಯ ಡಬ್ಲ್ಯುಇಎಸ್​ಪಿ 2024 ವರದಿಯಲ್ಲಿ ತಿಳಿಸಲಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಭಾರತದ ಜಿಡಿಪಿ ಶೇ. 6ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿದ್ದು, ಮುಂದಿನ ಕೆಲ ವರ್ಷವೂ ಇದು ಮುಂದುವರಿಯಬಹುದು. ಭಾರತದಲ್ಲಿ ಸಾರ್ವಜನಿಕ ಹೂಡಿಕೆ, ಖಾಸಗಿ ಅನುಭೋಗದಲ್ಲಿ ಹೆಚ್ಚಳವಾಗಿದೆ ಹಾಗೂ ಮ್ಯಾನುಫ್ಯಾಕ್ಚರಿಂಗ್ ಮತ್ತು ಸರ್ವಿಸ್ ಸೆಕ್ಟರ್ ಪ್ರಬಲವಾಗಿದೆ.

Economy: ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷವೂ ಇತರ ದೇಶಗಳಿಗಿಂತ ಮುಂದು: 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ವಿಶ್ವಸಂಸ್ಥೆ ಅಂದಾಜು
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 05, 2024 | 3:04 PM

Share

ನವದೆಹಲಿ, ಜನವರಿ 5: ಹಿಂದಿನ ಕೆಲ ವರ್ಷಗಳಲ್ಲಿಯಂತೆ ಈ ವರ್ಷವೂ (2024ರ ಕ್ಯಾಲಂಡರ್ ವರ್ಷ) ಆರ್ಥಿಕ ಬೆಳವಣಿಗೆಯಲ್ಲಿ (India GDP Growth) ಭಾರತ ಬೇರೆ ದೇಶಗಳಿಗಿಂತ ಮುಂದಿರುತ್ತದೆ ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ಅದರ ಪ್ರಕಾರ 2024ರಲ್ಲಿ ಭಾರತದ ಜಿಡಿಪಿ ಶೇ. 6.2ರಷ್ಟು ಹೆಚ್ಚುವ ನಿರೀಕ್ಷೆ ಇದೆ. ಸರ್ವಿಸ್ ಸೆಕ್ಟರ್ ಜೊತೆಗೆ ತಯಾರಿಕಾ ಕ್ಷೇತ್ರವೂ ಪ್ರಬಲವಾಗಿ ಬೆಳೆಯಲಿದೆ. ಇದು ಭಾರತದ ಆರ್ಥಿಕತೆಗೆ ಈ ವರ್ಷ ಹೆಚ್ಚು ಪುಷ್ಟಿ ಕೊಡಬಹುದು ಎನ್ನುವುದು ವಿಶ್ವಸಂಸ್ಥೆಯ ವೆಸ್ಪ್ 2024 (UN WESP- World Economic Situation and Prospects) ವರದಿಯಲ್ಲಿ ವ್ಯಕ್ತವಾಗಿರುವ ಅನಿಸಿಕೆ.

ಜನವರಿ 4ರಂದು ವಿಶ್ವಸಂಸ್ಥೆ ಈ ಡಬ್ಲ್ಯುಇಎಸ್​ಪಿ ವರದಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಏಷ್ಯಾದ ಒಟ್ಟಾರೆ ಆರ್ಥಿಕತೆ ಶೇ. 5.2ರಷ್ಟು ಬೆಳೆಯಬಹುದು. ಭಾರತದ ಪ್ರಬಲ ಆರ್ಥಿಕ ಬೆಳವಣಿಗೆಯು ದಕ್ಷಿಣ ಏಷ್ಯಾದ ಪ್ರಗತಿಗೆ ಪ್ರಮುಖ ಕಾರಣವಾಗಿರುತ್ತದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Rich List: ಅಂಬಾನಿಯನ್ನೂ ಮೀರಿಸಿದ ಗೌತಮ್ ಅದಾನಿ ಈಗ ಏಷ್ಯಾದ ನಂಬರ್ ಒನ್ ಶ್ರೀಮಂತ; ಬ್ಲೂಮ್​ಬರ್ಗ್ ಪಟ್ಟಿಯಲ್ಲಿ ಹಲವು ಸ್ಥಾನ ಮೇಲೇರಿದ ಅದಾನಿ

ವಿಶ್ವಸಂಸ್ಥೆ ವರದಿ ಪ್ರಕಾರ, ಭಾರತದ ಆರ್ಥಿಕ ಬೆಳವಣಿಗೆ 2023ರಲ್ಲಿ ಶೇ. 6.3; 2024ರಲ್ಲಿ ಶೇ. 6.2; 2025ರಲ್ಲಿ ಶೇ. 6.6ರಷ್ಟು ಇರಬಹುದು ಎನ್ನಲಾಗಿದೆ.

ಈ ವರ್ಷ (2024ರಲ್ಲಿ) ಭಾರತದ ಆರ್ಥಿಕ ಬೆಳವಣಿಗೆ ಶೇ. 6.2ರಷ್ಟು ಇರಬಹುದು. ಸಾರ್ವಜನಿಕ ಹೂಡಿಕೆ ಮತ್ತು ಖಾಸಗಿ ಅನುಭೋಗ ಹೆಚ್ಚಿರುವುದು ಈ ಪ್ರಬಲ ಬೆಳವಣಿಗೆಗೆ ಕಾರಣವಾಗಬಹುದು. ಮ್ಯಾನುಫ್ಯಾಕ್ಚರಿಂಗ್ ಮತ್ತು ಸರ್ವಿಸ್ ಸೆಕ್ಟರ್​ಗಳಿಂದಲೂ ಪೂರಕ ಬೆಂಬಲ ಸಿಗುತ್ತದೆ ಎಂದು ಹೇಳಲಾಗಿದೆ.

ಹಾಗೆಯೇ, ಅತಿವೃಷ್ಟಿ, ಅನಾವೃಷ್ಟಿಗಳಿಂದ ಕೃಷಿ ಉತ್ಪಾದನೆಗೆ ಹಿನ್ನಡೆ ಆದರೂ ಆಗಬಹುದು ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್