Sign In

By signing in or creating an account, you agree with Associated Broadcasting Company's Terms & Conditions and Privacy Policy.

Economy: ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷವೂ ಇತರ ದೇಶಗಳಿಗಿಂತ ಮುಂದು: 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ವಿಶ್ವಸಂಸ್ಥೆ ಅಂದಾಜು

UN WESP 2024 Report: ಭಾರತದ ಆರ್ಥಿಕತೆ 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ಇದೆ ಎಂದು ವಿಶ್ವ ಸಂಸ್ಥೆಯ ಡಬ್ಲ್ಯುಇಎಸ್​ಪಿ 2024 ವರದಿಯಲ್ಲಿ ತಿಳಿಸಲಾಗಿದೆ. ಕಳೆದ ಕೆಲ ವರ್ಷಗಳಲ್ಲಿ ಭಾರತದ ಜಿಡಿಪಿ ಶೇ. 6ಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿದ್ದು, ಮುಂದಿನ ಕೆಲ ವರ್ಷವೂ ಇದು ಮುಂದುವರಿಯಬಹುದು. ಭಾರತದಲ್ಲಿ ಸಾರ್ವಜನಿಕ ಹೂಡಿಕೆ, ಖಾಸಗಿ ಅನುಭೋಗದಲ್ಲಿ ಹೆಚ್ಚಳವಾಗಿದೆ ಹಾಗೂ ಮ್ಯಾನುಫ್ಯಾಕ್ಚರಿಂಗ್ ಮತ್ತು ಸರ್ವಿಸ್ ಸೆಕ್ಟರ್ ಪ್ರಬಲವಾಗಿದೆ.

Economy: ಭಾರತದ ಆರ್ಥಿಕ ಬೆಳವಣಿಗೆ ಈ ವರ್ಷವೂ ಇತರ ದೇಶಗಳಿಗಿಂತ ಮುಂದು: 2024ರಲ್ಲಿ ಶೇ. 6.2ರಷ್ಟು ಬೆಳೆಯುವ ಸಾಧ್ಯತೆ ವಿಶ್ವಸಂಸ್ಥೆ ಅಂದಾಜು
ಭಾರತದ ಆರ್ಥಿಕತೆ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 05, 2024 | 3:04 PM

ನವದೆಹಲಿ, ಜನವರಿ 5: ಹಿಂದಿನ ಕೆಲ ವರ್ಷಗಳಲ್ಲಿಯಂತೆ ಈ ವರ್ಷವೂ (2024ರ ಕ್ಯಾಲಂಡರ್ ವರ್ಷ) ಆರ್ಥಿಕ ಬೆಳವಣಿಗೆಯಲ್ಲಿ (India GDP Growth) ಭಾರತ ಬೇರೆ ದೇಶಗಳಿಗಿಂತ ಮುಂದಿರುತ್ತದೆ ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ಅದರ ಪ್ರಕಾರ 2024ರಲ್ಲಿ ಭಾರತದ ಜಿಡಿಪಿ ಶೇ. 6.2ರಷ್ಟು ಹೆಚ್ಚುವ ನಿರೀಕ್ಷೆ ಇದೆ. ಸರ್ವಿಸ್ ಸೆಕ್ಟರ್ ಜೊತೆಗೆ ತಯಾರಿಕಾ ಕ್ಷೇತ್ರವೂ ಪ್ರಬಲವಾಗಿ ಬೆಳೆಯಲಿದೆ. ಇದು ಭಾರತದ ಆರ್ಥಿಕತೆಗೆ ಈ ವರ್ಷ ಹೆಚ್ಚು ಪುಷ್ಟಿ ಕೊಡಬಹುದು ಎನ್ನುವುದು ವಿಶ್ವಸಂಸ್ಥೆಯ ವೆಸ್ಪ್ 2024 (UN WESP- World Economic Situation and Prospects) ವರದಿಯಲ್ಲಿ ವ್ಯಕ್ತವಾಗಿರುವ ಅನಿಸಿಕೆ.

ಜನವರಿ 4ರಂದು ವಿಶ್ವಸಂಸ್ಥೆ ಈ ಡಬ್ಲ್ಯುಇಎಸ್​ಪಿ ವರದಿಯನ್ನು ಬಿಡುಗಡೆ ಮಾಡಿದೆ. ದಕ್ಷಿಣ ಏಷ್ಯಾದ ಒಟ್ಟಾರೆ ಆರ್ಥಿಕತೆ ಶೇ. 5.2ರಷ್ಟು ಬೆಳೆಯಬಹುದು. ಭಾರತದ ಪ್ರಬಲ ಆರ್ಥಿಕ ಬೆಳವಣಿಗೆಯು ದಕ್ಷಿಣ ಏಷ್ಯಾದ ಪ್ರಗತಿಗೆ ಪ್ರಮುಖ ಕಾರಣವಾಗಿರುತ್ತದೆ ಎಂದು ಈ ವರದಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: Rich List: ಅಂಬಾನಿಯನ್ನೂ ಮೀರಿಸಿದ ಗೌತಮ್ ಅದಾನಿ ಈಗ ಏಷ್ಯಾದ ನಂಬರ್ ಒನ್ ಶ್ರೀಮಂತ; ಬ್ಲೂಮ್​ಬರ್ಗ್ ಪಟ್ಟಿಯಲ್ಲಿ ಹಲವು ಸ್ಥಾನ ಮೇಲೇರಿದ ಅದಾನಿ

ವಿಶ್ವಸಂಸ್ಥೆ ವರದಿ ಪ್ರಕಾರ, ಭಾರತದ ಆರ್ಥಿಕ ಬೆಳವಣಿಗೆ 2023ರಲ್ಲಿ ಶೇ. 6.3; 2024ರಲ್ಲಿ ಶೇ. 6.2; 2025ರಲ್ಲಿ ಶೇ. 6.6ರಷ್ಟು ಇರಬಹುದು ಎನ್ನಲಾಗಿದೆ.

ಈ ವರ್ಷ (2024ರಲ್ಲಿ) ಭಾರತದ ಆರ್ಥಿಕ ಬೆಳವಣಿಗೆ ಶೇ. 6.2ರಷ್ಟು ಇರಬಹುದು. ಸಾರ್ವಜನಿಕ ಹೂಡಿಕೆ ಮತ್ತು ಖಾಸಗಿ ಅನುಭೋಗ ಹೆಚ್ಚಿರುವುದು ಈ ಪ್ರಬಲ ಬೆಳವಣಿಗೆಗೆ ಕಾರಣವಾಗಬಹುದು. ಮ್ಯಾನುಫ್ಯಾಕ್ಚರಿಂಗ್ ಮತ್ತು ಸರ್ವಿಸ್ ಸೆಕ್ಟರ್​ಗಳಿಂದಲೂ ಪೂರಕ ಬೆಂಬಲ ಸಿಗುತ್ತದೆ ಎಂದು ಹೇಳಲಾಗಿದೆ.

ಹಾಗೆಯೇ, ಅತಿವೃಷ್ಟಿ, ಅನಾವೃಷ್ಟಿಗಳಿಂದ ಕೃಷಿ ಉತ್ಪಾದನೆಗೆ ಹಿನ್ನಡೆ ಆದರೂ ಆಗಬಹುದು ಎಂದು ವರದಿಯಲ್ಲಿ ಎಚ್ಚರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ