AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Economy: ಮೂರ್ನಾಲ್ಕು ದಶಕದಲ್ಲಿ ಭಾರತವೇ ವಿಶ್ವದ ನಂಬರ್ ಒನ್: ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ

Lord Karan Bilimoria at Hyderabad: ಭಾರತದ ಆರ್ಥಿಕತೆ ಬಹಳ ವೇಗವಾಗಿ ಬೆಳೆಯುತ್ತಿದ್ದು 2060ರಲ್ಲಿ ವಿಶ್ವದ ಅತಿದೊಡ್ಡ ಆರ್ಥಿಕತೆ ಎನಿಸಲಿದೆ ಎಂದು ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ ಹೈದರಾಬಾದ್​ನಲ್ಲಿ ಹೇಳಿದ್ದಾರೆ.

Indian Economy: ಮೂರ್ನಾಲ್ಕು ದಶಕದಲ್ಲಿ ಭಾರತವೇ ವಿಶ್ವದ ನಂಬರ್ ಒನ್: ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ
ಭಾರತದ ಆರ್ಥಿಕತೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 25, 2023 | 4:09 PM

Share

ಹೈದರಾಬಾದ್, ಜುಲೈ 25: ಭಾರತ 2075ರೊಳಗೆ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಲಿದೆ (Biggest Economy) ಎಂದು ಐಎಂಎಫ್, ಗೋಲ್ಡ್​ಮ್ಯಾನ್ ಸ್ಯಾಕ್ಸ್ ಮೊದಲಾದ ಜಾಗತಿಕ ಸಂಸ್ಥೆಗಳು ಅಭಿಪ್ರಾಯಪಟ್ಟಿವೆ. ಇದೀಗ ಬ್ರಿಟನ್ ಸಂಸದರೊಬ್ಬರು ಭಾರತ 2060ರೊಳಗೆಯೇ ವಿಶ್ವದ ನಂಬರ್ ಒನ್ ಆರ್ಥಿಕ ದೇಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ‘ಇಡೀ ವಿಶ್ವವೇ ಭಾರತದತ್ತ ನೋಡುತ್ತಿದೆ. ಬಹಳ ಶೀಘ್ರದಲ್ಲಿ ಭಾರತ ವಿಶ್ವದ ಮೂರು ಸೂಪರ್​ಪವರ್​ಗಳಲ್ಲಿ ಒಂದೆನಿಸಲಿದೆ’ ಎಂದು ಬ್ರಿಟನ್ ಸಂಸದ ಲಾರ್ಡ್ ಕರಣ್ ಬಿಲಿಮೋರಿಯಾ ಹೇಳಿದ್ದಾರೆ.

ಇಲ್ಲಿಯ ಬೇಗಂಪೇಟ್​ನಲ್ಲಿರುವ ಹೈದರಾಬಾದ್ ಪಬ್ಲಿಕ್ ಸ್ಕೂಲ್​ನ (ಎಚ್​ಪಿಎಸ್) ಸಮಾರಂಭವೊಂದರಲ್ಲಿ ಮಾತನಾಡುತ್ತಿದ್ದ ಲಾರ್ಡ್ ಕರಣ್ ಅವರು, ಬ್ರಿಟನ್ ದೇಶವನ್ನು ಹಿಂದಿಕ್ಕಿ ಭಾರತ ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕ ದೇಶವಾಗಿದೆ ಎಂದು ಹೇಳಿದರು. ಹಾಗೆಯೇ, ಚೀನಾವನ್ನೂ ಭಾರತ ಹಿಂದಿಕ್ಕಬಹುದು ಎನ್ನುತ್ತಾರೆ ಇವರು.

ಇದನ್ನೂ ಓದಿ: HAL Share: ಎಚ್​ಎಎಲ್ ಸತ್ತೇಹೋಯಿತು ಎಂದವರಿಗೆ ಶಾಕ್; ಹೂಡಿಕೆದಾರರಿಗೆ ಸ್ವರ್ಗವಾಗಿದೆ ಎಚ್​ಎಎಲ್ ಷೇರು

‘ಮುಂದಿನ 25 ವರ್ಷದಲ್ಲಿ ಭಾರತದ ಜಿಡಿಪಿ 32 ಟ್ರಿಲಿಯನ್ ಡಾಲರ್​ಗೆ ಏರುತ್ತದೆ. ಆಗ ಭಾರತ ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯ ದೇಶವಾಗುತ್ತದೆ. ನಾನು ಇನ್ನೂ ಒಂದು ಹೆಜ್ಜೆ ಮುಂದಿನದ್ದು ಹೇಳುತ್ತೇನೆ. 2060ರಷ್ಟರಲ್ಲಿ ಭಾರತ ವಿಶ್ವದ ಅತಿದಡೊ್ಡ ಆರ್ಥಿಕತೆಯ ದೇಶವಾಗಲಿದೆ ಎಂಬುದು ನನ್ನ ಭಾವನೆ’ ಎಂದು ಬ್ರಿಟನ್​ನ ಸಂಸದರಾದ ಬಿಲಿಮೋರಿಯಾ ಅಭಿಪ್ರಾಯಪಟ್ಟಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಅಂದರೆ ಇವರ ಪ್ರಕಾರ ಚೀನಾವನ್ನೂ ಭಾರತ ಹಿಂದಿಕ್ಕಿ ಜಗತ್ತಿನ ಟಾಪ್ ಸೂಪರ್ ಪವರ್ ದೇಶವಾಗುತ್ತದೆ.

ಕೋಬ್ರಾ ಬೀರ್ ಸಂಸ್ಥೆಯ ಸ್ಥಾಪಕರಾದ ಕರಣ್ ಬಿಲಿಮೋರಿಯಾ ಅವರಿಗೆ ಬ್ರಿಟನ್ ದೇಶ ಲಾರ್ಡ್ ಬಿರುದು ಕೊಟ್ಟು ಸನ್ಮಾನಿಸಿದೆ. ಭಾರತದಲ್ಲೂ ಕೋಬ್ರಾ ಬೀರ್ ಅನ್ನು ತರುವ ಉದ್ದೇಶದಲ್ಲಿರುವ ಲಾರ್ಡ್ ಕರಣ್ ಬಿಲಿಮೋರಿಯಾ ಅವರು ಹೈದರಾಬಾದ್ ಪಬ್ಲಿಕ್ ಸ್ಕೂಲ್​ನ ಮಾಜಿ ವಿದ್ಯಾರ್ಥಿಯೂ ಹೌದು.

ಇದನ್ನೂ ಓದಿ: Tax Collection: ತೆರಿಗೆ ದರ ಹೆಚ್ಚಿಸಿಲ್ಲ, ಆದರೂ ತೆರಿಗೆ ಸಂಗ್ರಹ ಹೆಚ್ಚಿಸಿದ್ದೇವೆ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಐಎಂಫ್ ಮತ್ತು ಗೋಲ್ಡ್​ಮ್ಯಾನ್ ಸ್ಯಾಕ್ಸ್ ನುಡಿದ ಭವಿಷ್ಯವೇನು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮತ್ತು ಜಾಗತಿಕ ಇನ್ವೆಸ್ಟ್​ಮೆಂಟ್ ಬ್ಯಾಂಕಿಂಗ್ ದೈತ್ಯ ಗೋಲ್ಡ್​ಮ್ಯಾನ್ ಸ್ಯಾಕ್ಸ್ ಎರಡೂ ಕೂಡ ಭಾರತ 2075ರಲ್ಲಿ ಅಗ್ರಮಾನ್ಯ ಆರ್ಥಿಕ ದೇಶವಾಗಲಿದೆ ಎಂದು ಭವಿಷ್ಯ ನುಡಿದಿವೆ. ಅವುಗಳ ಪ್ರಕಾರ 2075ರಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ ಭಾರತ ಮತ್ತು ಅಮೆರಿಕ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿರಲಿವೆ. 2075ರಲ್ಲಿ ಚೀನಾದ ಜಿಡಿಪಿ 57 ಟ್ರಿಲಿಯನ್ ಡಾಲರ್, ಭಾರತದ ಜಿಡಿಪಿ 52.5 ಟ್ರಿಲಿಯನ್ ಡಾಲರ್ ಮತ್ತು ಅಮೆರಿಕದ ಜಿಡಿಪಿ 51.5 ಟ್ರಿಲಿಯನ್ ಡಾಲರ್ ಆಗಬಹುದು ಎಂದು ಇವು ಅಂದಾಜು ಮಾಡಿವೆ.

ಹಾಗೆಯೇ, ಜಾಗತಿಕ ಟಾಪ್ ದೇಶಗಳ ಪಟ್ಟಿಯಲ್ಲಿ 2075ರಲ್ಲಿ ಗಮನಾರ್ಹ ಬದಲಾವಣೆಗಳಾಗುವ ನಿರೀಕ್ಷೆ ಇದೆ. ಇಂಡೋನೇಷ್ಯಾ, ನೈಜೀರಿಯಾ, ಬ್ರೆಜಿಲ್ ದೇಶಗಳೂ ಅಗ್ರಪಂಕ್ತಿಗೆ ಹೋಗಿ ನಿಲ್ಲಬಹುದು ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ