AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಐಟಿ ಉದ್ಯೋಗಾಕಾಂಕ್ಷಿಗಳೇ? ಕೆಲಸ ಸಿಗುವುದು ಇನ್ನಷ್ಟು ವಿಳಂಬವಾಗಬಹುದು

ಐಟಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕೆಂಬ ಹಂಬಲದಲ್ಲಿರುವವರಿಗೆ ನಿರಾಸೆ ತರಿಸುವಂಥ ನಿರ್ಧಾರವನ್ನು ಪ್ರಮುಖ ಕಂಪನಿಗಳು ಕೈಗೊಂಡಿವೆ. ದೇಶದ ಪ್ರಮುಖ ಐಟಿ ಕಂಪನಿಗಳು ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ಕೆಲ ಕಾಲ ಮುಂದೂಡುವ ತೀರ್ಮಾನ ಕೈಗೊಂಡಿವೆ ಎಂದು ವರದಿಯಾಗಿದೆ.

ನೀವು ಐಟಿ ಉದ್ಯೋಗಾಕಾಂಕ್ಷಿಗಳೇ? ಕೆಲಸ ಸಿಗುವುದು ಇನ್ನಷ್ಟು ವಿಳಂಬವಾಗಬಹುದು
ಸಾಂದರ್ಭಿಕ ಚಿತ್ರImage Credit source: PTI
TV9 Web
| Updated By: Ganapathi Sharma|

Updated on: Nov 08, 2022 | 5:07 PM

Share

ಬೆಂಗಳೂರು: ಐಟಿ ಕ್ಷೇತ್ರದಲ್ಲಿ ಉದ್ಯೋಗ ಪಡೆಯಬೇಕೆಂಬ ಹಂಬಲದಲ್ಲಿರುವವರಿಗೆ ನಿರಾಸೆ ತರಿಸುವಂಥ ನಿರ್ಧಾರವನ್ನು ಪ್ರಮುಖ ಕಂಪನಿಗಳು (IT Companies) ಕೈಗೊಂಡಿವೆ. ಕೋವಿಡ್-19 (Covid-19) ಸಾಂಕ್ರಾಮಿಕದ ನಂತರ ಉದ್ಯೋಗಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ (Recruitments) ವಿಳಂಬ ನೀತಿ ಅನುಸರಿಸುತ್ತಾ ಬಂದಿರುವ ಕಂಪನಿಗಳು ಇದೀಗ ನೇಮಕಾತಿ ಪ್ರಕ್ರಿಯೆಯನ್ನು ಮತ್ತೆ ಕೆಲ ಕಾಲ ಮುಂದೂಡುವ ತೀರ್ಮಾನ ಕೈಗೊಂಡಿವೆ ಎಂದು ವರದಿಯಾಗಿದೆ.

ಎರಡನೇ ತ್ರೈಮಾಸಿಕ ಅವಧಿಯಲ್ಲಿ ದೇಶದ 10 ದೊಡ್ಡ ಐಟಿ ಕಂಪನಿಗಳ ಪೈಕಿ 5 ಕಂಪನಿಗಳು ಮಾರಾಟ, ನೆರವು ಸಿಬ್ಬಂದಿ ಸಂಬಂಧಿತ ಉದ್ಯೋಗ ಕಡಿತ ಮಾಡಿವೆ. ಅನೌಪಚಾರಿಕವಾಗಿ ನೇಮಕಾತಿ ಪ್ರಕ್ರಿಯೆ ತಡೆಹಿಡಿದಿವೆ ಎಂದು ‘ಲೈವ್​ ಮಿಂಟ್’ ಪತ್ರಿಕೆ ವರದಿ ಮಾಡಿದೆ.

ಯಾವ ಕಂಪನಿಗಳಲ್ಲಿ ಉದ್ಯೋಗ ಕಡಿತ, ನೇಮಕಾತಿ ಮುಂದೂಡಿಕೆ?

ಇದನ್ನೂ ಓದಿ
Image
ಆರೋಗ್ಯ ವಿಮೆ ಪೋರ್ಟ್ ಮಾಡುವುದು ಹೇಗೆ, ಪ್ರಯೋಜನವೇನು? ಇಲ್ಲಿದೆ ವಿವರ
Image
ನಿಮ್ಮ ಪಿಎಫ್​ ಖಾತೆಗೂ ಬಂತೇ ಇಪಿಎಫ್​ ಬಡ್ಡಿ ಹಣ, ಪರಿಶೀಲಿಸುವುದು ಹೇಗೆ? ಇಲ್ಲಿದೆ ನೋಡಿ
Image
Stock Market: ಷೇರುಪೇಟೆ ವಹಿವಾಟಿಗೆ ಇಂದು ಬಿಡುವು; ಕಾರಣವೇನು?
Image
Petrol Price on November 8: ಬಳ್ಳಾರಿಯಲ್ಲಿ ಪೆಟ್ರೋಲ್ ಬೆಲೆ 1 ರೂ. ಕುಸಿತ; ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಡೀಸೆಲ್ ದರ ಹೀಗಿದೆ

ದೇಶದ ಅತಿದೊಡ್ಡ ಐಟಿ ಸೇವಾ ಕಂಪನಿಗಳಾದ ವಿಪ್ರೋ ಮತ್ತು ಟೆಕ್ ಮಹೀಂದ್ರಾದ ಮಾರಾಟ ವಿಭಾಗದ ಸಿಬ್ಬಂದಿ, ನೆರವು ಸಿಬ್ಬಂದಿ ಹಾಗೂ ಸಾಫ್ಟ್​ವೇರ್ ಎಂಜಿನಿಯರ್​ಗಳ ಸಂಖ್ಯೆಯಲ್ಲಿ ಹಂತಹಂತವಾಗಿ ಕುಸಿತ ಕಾಣಿಸಿದೆ. ಈ ಕಂಪನಿಗಳು ನೇಮಕಾತಿಯನ್ನೂ ಮುಂದೂಡಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಎಲ್​ ಆ್ಯಂಡ್ ಟಿ ಹಾಗೂ ಹೈದರಾಬಾದ್ ಮೂಲದ ಸಿಯೆಂಟ್​ ಲಿಮಿಟೆಡ್ ಕಂಪನಿಗಳು ಮಾರಾಟ ಸಿಬ್ಬಂದಿಯ ಸಂಖ್ಯೆಯಲ್ಲಿ ಕಡಿತ ಮಾಡಿವೆ. ಝೆನ್​ಸಾರ್ ಲಿಮಿಟೆಡ್ ಕೂಡ ಉದ್ಯೋಗಿಗಳ ಸಂಖ್ಯೆಯನ್ನು ಹಂತ ಹಂತವಾಗಿ ಕಡಿಮೆ ಮಾಡಿದೆ.

ಇದನ್ನೂ ಓದಿ: Microsoft: ಆರ್ಥಿಕ ಸಂಕಷ್ಟ, ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಮೈಕ್ರೋಸಾಫ್ಟ್

ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಹೆಚ್ಚಿನೆಲ್ಲ ಉದ್ದಿಮೆಗಳು, ವ್ಯವಹಾರಗಳು ಆನ್​ಲೈನ್ ವೇದಿಕೆಗೆ ಬದಲಾದುದರಿಂದ ಐಟಿ ಕಂಪನಿಗಳು ಹೆಚ್ಚೆಚ್ಚು ನೇಮಕಾತಿ ಮಾಡಿಕೊಂಡಿದ್ದವು. 2020ರ ಜುಲೈ ಹಾಗೂ 2022ರ ಸೆಪ್ಟೆಂಬರ್ ಅವಧಿಯಲ್ಲಿ 10 ಅತಿದೊಡ್ಡ ಐಟಿ ಕಂಪನಿಗಳು ಮೂರನೇ ಒಂದು ಭಾಗದಷ್ಟು ಮಂದಿಯನ್ನು ಅಥವಾ 5 ಲಕ್ಷ ಜನರನ್ನು ನೇಮಕಾತಿ ಮಾಡಿಕೊಂಡಿದ್ದವು. ಈ 10 ಕಂಪನಿಗಳು ಒಟ್ಟಾಗಿ ಸೆಪ್ಟೆಂಬರ್​ 30ರ ವೇಳೆಗೆ ಸುಮಾರು 17.4 ಲಕ್ಷ ಉದ್ಯೋಗಿಗಳನ್ನು ಹೊಂದಿದ್ದವು. ಆದರೆ, ಆರ್ಥಿಕತೆ ಕುಂಠಿತಗೊಂಡಿರುವುದು, ಲಾಭದಲ್ಲಿ ಕುಸಿತವಾಗಿರುವುದು ಉದ್ದಿಮೆ ವಾತಾವರಣದಲ್ಲಿ ಬದಲಾವಣೆ ಸೃಷ್ಟಿಸಿತು. ಉದ್ಯೋಗ ಕಡಿತ, ನೇಮಕಾತಿ ತಡೆಹಿಡಿಯುವಿಕೆ ಅಥವಾ ಮುಂದೂಡಿಕೆಗೆ ಕಾರಣವಾಯಿತು ಎಂದು ‘ಲೈವ್​ ಮಿಂಟ್’ ವರದಿ ಹೇಳಿದೆ.

ಜಾಗತಿಕವಾಗಿಯೂ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅನೇಕ ಐಟಿ ಕಂಪನಿಗಳು ಉದ್ಯೋಗ ಕಡಿತ, ನೇಮಕಾತಿ ವಿಳಂಬದ ಮೊರೆ ಹೋಗಿವೆ. ಖ್ಯಾತ ಟೆಕ್ ಕಂಪನಿ ಮೈಕ್ರೋಸಾಫ್ಟ್ 1,000 ಮಂದಿ ಉದ್ಯೋಗಿಗಳನ್ನು ಇತ್ತೀಚೆಗೆ ವಜಾಗೊಳಿಸಿತ್ತು. ವೈದ್ಯಕೀಯ ಸಾಧನ ಉತ್ಪಾದನಾ ಕಂಪನಿ ಫಿಲಿಪ್ಸ್ ಕೂಡ 4,000 ಉದ್ಯೋಗ ಕಡಿತ ಮಾಡಿತ್ತು. ಮೈಕ್ರೋಬ್ಲಾಗಿಂಗ್ ತಾಣ ಟ್ವಿಟರ್ ಕೂಡ ಅರ್ಧದಷ್ಟು ಉದ್ಯೋಗ ಕಡಿತ ಮಾಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?