AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಜಿಡಿಪಿಗಿಂತ ಹೆಚ್ಚಿದೆ ಷೇರುಮಾರುಕಟ್ಟೆ ಬಂಡವಾಳ; ಇದು ಆತಂಕಕಾರಿ ಸಂಗತಿಯಾ? ಸಿಇಒ ಎಚ್ಚರಿಕೆಯ ಮಾತುಗಳಿವು

Big market capital not good for economy says CEA: ಭಾರತದ ಮಾರುಕಟ್ಟೆಯಲ್ಲಿರುವ ಬಂಡವಾಳವು ಜಿಡಿಪಿಗಿಂತ ಶೇ. 140ರಷ್ಟು ಹೆಚ್ಚಿದೆ. ಇಷ್ಟೊಂದು ದೊಡ್ಡ ಮಾರುಕಟ್ಟೆ ಒಳ್ಳೆಯ ಸಂಗತಿ ಅಲ್ಲ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಎಚ್ಚರಿಸಿದ್ದಾರೆ. ಅತಿಯಾದ ಹಣಕಾಸೀಕರಣದಿಂದ ಅಪಾಯ ಏನು ಎಂಬುದನ್ನು ಮನಗಾಣಬೇಕು. ಸಾರ್ವಜನಿಕ ನೀತಿ ಮತ್ತು ನಿರ್ಧಾರಗಳಿಗೆ ಮಾರುಕಟ್ಟೆ ಪ್ರಭಾವ ಬೀರುವಂತಾಗಬಾರದು ಎಂದಿದ್ದಾರೆ.

ಭಾರತದ ಜಿಡಿಪಿಗಿಂತ ಹೆಚ್ಚಿದೆ ಷೇರುಮಾರುಕಟ್ಟೆ ಬಂಡವಾಳ; ಇದು ಆತಂಕಕಾರಿ ಸಂಗತಿಯಾ? ಸಿಇಒ ಎಚ್ಚರಿಕೆಯ ಮಾತುಗಳಿವು
ವಿ ಅನಂತ ನಾಗೇಶ್ವರನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Sep 02, 2024 | 6:35 PM

Share

ಮುಂಬೈ, ಸೆಪ್ಟೆಂಬರ್ 2: ಪ್ರಬಲ ಜಾಗತಿಕ ಆರ್ಥಿಕ ಬೆಳವಣಿಗೆಯ ಲಾಭ ಪಡೆಯಲು ಭಾರತ ಸರಿಯಾದ ಸ್ಥಿತಿಯಲ್ಲಿದೆ. ಆದರೆ, ಅರ್ಥೀಕರಣ ಹೆಚ್ಚುತ್ತಿರುವ ಬಗ್ಗೆ ಎಚ್ಚರದಿಂದರಬೇಕು ಎಂದು ಭಾರತದ ಮುಖ್ಯ ಆರ್ಥಿಕ ಸಲಹೆಗಾರ ವಿ ಅನಂತ ನಾಗೇಶ್ವರನ್ ಹೇಳಿದರು. ಇಲ್ಲಿ ಇಂದು ಸೋಮವಾರ ಸಿಐಐ ಫೈನಾನ್ಸಿಂಗ್ 3.0 ಸಭೆಯಲ್ಲಿ ಮಾತನಾಡುತ್ತಿದ್ದ ಸಿಇಎ ಅವರು, ಭಾರತದ ಆರ್ಥಿಕತೆಯನ್ನು ಮೀರಿಸಿ ಹಣಕಾಸು ಮಾರುಕಟ್ಟೆ ಬೆಳೆಯುತ್ತಿರುವ ಅಪಾಯವನ್ನು ನಿವೇದಿಸುವ ಪ್ರಯತ್ನ ಮಾಡಿದರು.

ಭಾರತದ ಷೇರುಮಾರುಕಟ್ಟೆಯ ಗಾತ್ರವು ದೇಶದ ಜಿಡಿಪಿಯ ಶೇ. 140ರಷ್ಟಿದೆ. ಹಣಕಾಸು ವಲಯದ ಲಾಭ ಹೆಚ್ಚುತ್ತಲೇ ಇದೆ. ಇಷ್ಟೊಂದು ಅಧಿಕ ಮಟ್ಟದ ಮಾರುಕಟ್ಟೆ ಸಂಪತ್ತು ಇರುವುದನ್ನು ಎಚ್ಚರಿಕೆಯಿಂದ ಗಮನಿಸಬೇಕಾಗುತ್ತದೆ. ಮಾರುಕಟ್ಟೆಯು ಆರ್ಥಿಕತೆಗಿಂತ ದೊಡ್ಡದಾಗಿ ಹೋದರೆ ಸ್ವಾಭಾವಿಕವಾಗಿ ಸಾರ್ವಜನಿಕ ನೀತಿ ಮತ್ತು ನಿರ್ಧಾರಗಳಿಗೆ ಅದರ ಪ್ರಭಾವ ಇರುತ್ತದೆ ಎಂದು ಸಿಇಎ ಅನಂತ ನಾಗೇಶ್ವರನ್ ಎಚ್ಚರಿಸಿದರು.

ಇದನ್ನೂ ಓದಿ: ಇಥನಾಲ್ ಮಿಶ್ರಿತ ಪೆಟ್ರೋಲ್​ನಿಂದಾಗಿ ದೇಶದ ಖಜಾನೆಗೆ ಹತ್ತು ವರ್ಷದಿಂದ ಲಕ್ಷ ಕೋಟಿ ರೂ ಹಣ ಉಳಿತಾಯ?

ಮಾರುಕಟ್ಟೆ ಸಂಪತ್ತು ಅತಿಯಾಗಿ ಹೆಚ್ಚಾದರೆ ಏನು ಅಪಾಯ?

ಅಮೆರಿಕ, ಜಪಾನ್ ಇತ್ಯಾದಿ ಮುಂದುವರಿದ ದೇಶಗಳಲ್ಲಿ ಮಾರುಕಟ್ಟೆ ಬಂಡವಾಳ ಅವುಗಳ ಜಿಡಿಪಿಗಿಂತ ಬಹಳ ಹೆಚ್ಚಿದೆ. ಅಲ್ಲಿ ಅತಿಯಾಗಿ ಹಣಮಯವಾದ ಪರಿಣಾಮ ಸಾಲದ ಮಟ್ಟ ಬಹಳ ಹೆಚ್ಚಿದೆ. ಆಸ್ತಿ ಬೆಲೆ ಹೆಚ್ಚಳದ ಮೇಲೆ ಆರ್ಥಿಕ ಅಭಿವೃದ್ಧಿ ನಿಂತಿದೆ. ಅಸಮಾನತೆ ಹೆಚ್ಚಿದೆ. ಈ ಅಡ್ಡಪರಿಣಾಮಗಳ ಬಗ್ಗೆ ಭಾರತ ಎಚ್ಚರದಿಂದಿರಬೇಕು. ಅಂಥ ಸ್ಥಿತಿ ಎದುರಾಗದಂತೆ ತಪ್ಪಿಸಬೇಕು. ದೇಶದ ಆರ್ಥಿಕ ಆದ್ಯತೆಗಳು ಮತ್ತು ಹೂಡಿಕೆದಾರರ ಹಿತಾಸಕ್ತಿ ಮಧ್ಯೆ ಒಂದು ಸಮತೋಲನ ತರಬೇಕು ಎಂದು ಮುಖ್ಯ ಆರ್ಥಿಕ ಸಲಹೆಗಾರರು ಕಿವಿಮಾತು ಹೇಳಿದರು.

ಬೇರೆಯವರ ಅಜೆಂಡಾಗೆ ಒಳಪಡಬಾರದು, ಭಾರತವೇ ಅಜೆಂಡಾ ಹಾಕುವಂತಾಗಬೇಕು…

ಭಾರತವು ಬೇರೆಯವರ ಅಜೆಂಡಾಗೆ ಒಳಪಡುವುದಕ್ಕಿಂತ, ತಾನೇ ಜಾಗತಿಕ ಅಜೆಂಡಾ ರೂಪಿಸಬೇಕು. ದೇಶದ ಆರ್ಥಿಕತೆಯ ಗಾತ್ರ ಮತ್ತು ಪ್ರಭಾವವು ನಮಗೆ ಜಾಗತಿಕ ಅಜೆಂಡಾ ರೂಪಿಸುವ ಸಾಮರ್ಥ್ಯ ತಂದು ಕೊಡುತ್ತದೆ. ಇದರಿಂದ ನಮ್ಮ ಆರ್ಥಿಕ ಸಾಧನೆ ಹೆಚ್ಚುತ್ತದೆ ಎಂದು ಅನಂತ ನಾಗೇಶ್ವರನ್ ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಹಾರುವ ಕಾರಿಗೆ ಭಾರತವೇ ಅತಿದೊಡ್ಡ ಮಾರುಕಟ್ಟೆ; ಇನ್ನೆರಡು ವರ್ಷದೊಳಗೆ ಕಾಣಲಿದೆ ಮೊದಲ ಏರ್ ಟ್ಯಾಕ್ಸಿ

ಭಾರತದ ಆರ್ಥಿಕತೆಯ ಸ್ಥಿತಿ ಆಶಾದಾಯಕವಾಗಿದ್ದು, ಇದರಿಂದ ಅದರ ಭವಿಷ್ಯ ರೂಪಿಸುವ ಅವಕಾಶ ಸೃಷ್ಟಿಯಾಗುತ್ತದೆ. ದೂರಗಾಮಿಯಾಗಿ ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆ ಕಾಪಾಡಲು ಜಾಣತನದಿಂದ ಹೆಜ್ಜೆ ಇಡಬೇಕು. ಈಗ ನಾವು ಯಾವುದಾದರೂ ಕ್ರಮ ತೆಗೆದುಕೊಂಡರೆ ಅದರ ಫಲ ವ್ಯಕ್ತವಾಗಲು ಸಮಯ ಬೇಕಾಗುತ್ತದೆ ಎನ್ನುವುದು ಅರಿವಿರಬೇಕು ಎಂದು ಸಿಇಎ ಹೇಳಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ