AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿಯ ಸಿಇಓ ಆಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಆಂಡಿ ಮೈನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
TV9 Web
| Edited By: |

Updated on: Sep 09, 2022 | 1:03 PM

Share

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿ(Ogilvy)ಯ ಜಾಗತಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಬುಲ್ಚಂದಾನಿ ಅವರು ಸದ್ಯ ಸಿಇಓ ಆಗಿರುವ ಆಂಡಿ ಮೈನ್ ಅವರು ನಂತರ ಅಧಿಕಾರವನ್ನು ಹಿಡಿಯಲಿದ್ದಾರೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುಲ್ಚಂದಾನಿ ಅವರು ಜಾಗತಿಕ ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಮೈನ್‌ ಅವರ ಸ್ಥಾನವನ್ನು ತುಂಬಲಿದ್ದು, ವರ್ಷಾಂತ್ಯದವರೆಗೆ ಹಿರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬುಲ್ಚಂದಾನಿ ಅವರು ಸಿಎಓ ಆಗಿ ಅಧಿಕಾರ ವಹಿಸಿದ ನಂತರ 93 ದೇಶಗಳಲ್ಲಿ 131 ಕಛೇರಿಗಳಲ್ಲಿ ಸೃಜನಶೀಲ ನೆಟ್‌ವರ್ಕ್‌ನ ವ್ಯವಹಾರದ ಎಲ್ಲಾ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ. ಅಷ್ಟೇ ಅಲ್ಲದೆ ಅದರ ಜಾಹೀರಾತು, ಸಾರ್ವಜನಿಕ ಸಂಬಂಧಗಳು, ಅನುಭವ, ಸಲಹಾ ಮತ್ತು ಆರೋಗ್ಯ ಘಟಕಗಳು ಇವರ ಅಧಿಕಾರ ವ್ಯಾಪ್ತಿಯಡಿ ಬರಲಿದೆ.

ಓಗಿಲ್ವಿ ಜಾಗತಿಕ ಪ್ರಮುಖ ಮಾರ್ಕೆಟಿಂಗ್ ಮತ್ತು ಸಂವಹನ ಗುಂಪು WPP ಭಾಗವಾಗಿದೆ. ಬುಲ್ಚಂದಾನಿ ಅವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಂತೆ WPPನ ಕಾರ್ಯಕಾರಿ ಸಮಿತಿಯನ್ನು ಸಹ ಸೇರಿಕೊಳ್ಳುತ್ತಾರೆ ಎಂದು ಹೇಳಿಕೆ ತಿಳಿಸಿದೆ.

ದೇವಿಕಾ ಅವರು ಉದ್ಯಮದಲ್ಲಿ ದೇವ್ ಎಂದು ಜನಪ್ರಿಯವಾಗಿದ್ದಾರೆ. ಇವರು ತಮ್ಮ ಬಾಲ್ಯ ಮತ್ತು ಪ್ರೌಢಾವಸ್ಥೆಯನ್ನು ಭಾರತದಲ್ಲಿ ಕಳೆದರು. ಡೆಹ್ರಾಡೂನ್‌ನ ವೆಲ್‌ಹ್ಯಾಮ್ ಬಾಲಕಿಯರ ಶಾಲೆಗೆ ಸೇರುವ ಮೊದಲು ಅವರು ಪಂಜಾಬ್‌ನ ಅಮೃತಸರದಲ್ಲಿ ತಮ್ಮ ಆರಂಭಿಕ ದಿನಗಳನ್ನು ಕಳೆದರು. ನಂತರ ಅವರು ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಮನೋವಿಜ್ಞಾನದಲ್ಲಿ ಪದವಿ ಪಡೆದರು. ತದನಂತರ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿ ಸಂವಹನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್