AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿಯ ಸಿಇಓ ಆಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಆಂಡಿ ಮೈನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
Follow us
TV9 Web
| Updated By: Rakesh Nayak Manchi

Updated on: Sep 09, 2022 | 1:03 PM

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿ(Ogilvy)ಯ ಜಾಗತಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಬುಲ್ಚಂದಾನಿ ಅವರು ಸದ್ಯ ಸಿಇಓ ಆಗಿರುವ ಆಂಡಿ ಮೈನ್ ಅವರು ನಂತರ ಅಧಿಕಾರವನ್ನು ಹಿಡಿಯಲಿದ್ದಾರೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುಲ್ಚಂದಾನಿ ಅವರು ಜಾಗತಿಕ ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಮೈನ್‌ ಅವರ ಸ್ಥಾನವನ್ನು ತುಂಬಲಿದ್ದು, ವರ್ಷಾಂತ್ಯದವರೆಗೆ ಹಿರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬುಲ್ಚಂದಾನಿ ಅವರು ಸಿಎಓ ಆಗಿ ಅಧಿಕಾರ ವಹಿಸಿದ ನಂತರ 93 ದೇಶಗಳಲ್ಲಿ 131 ಕಛೇರಿಗಳಲ್ಲಿ ಸೃಜನಶೀಲ ನೆಟ್‌ವರ್ಕ್‌ನ ವ್ಯವಹಾರದ ಎಲ್ಲಾ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ. ಅಷ್ಟೇ ಅಲ್ಲದೆ ಅದರ ಜಾಹೀರಾತು, ಸಾರ್ವಜನಿಕ ಸಂಬಂಧಗಳು, ಅನುಭವ, ಸಲಹಾ ಮತ್ತು ಆರೋಗ್ಯ ಘಟಕಗಳು ಇವರ ಅಧಿಕಾರ ವ್ಯಾಪ್ತಿಯಡಿ ಬರಲಿದೆ.

ಓಗಿಲ್ವಿ ಜಾಗತಿಕ ಪ್ರಮುಖ ಮಾರ್ಕೆಟಿಂಗ್ ಮತ್ತು ಸಂವಹನ ಗುಂಪು WPP ಭಾಗವಾಗಿದೆ. ಬುಲ್ಚಂದಾನಿ ಅವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಂತೆ WPPನ ಕಾರ್ಯಕಾರಿ ಸಮಿತಿಯನ್ನು ಸಹ ಸೇರಿಕೊಳ್ಳುತ್ತಾರೆ ಎಂದು ಹೇಳಿಕೆ ತಿಳಿಸಿದೆ.

ದೇವಿಕಾ ಅವರು ಉದ್ಯಮದಲ್ಲಿ ದೇವ್ ಎಂದು ಜನಪ್ರಿಯವಾಗಿದ್ದಾರೆ. ಇವರು ತಮ್ಮ ಬಾಲ್ಯ ಮತ್ತು ಪ್ರೌಢಾವಸ್ಥೆಯನ್ನು ಭಾರತದಲ್ಲಿ ಕಳೆದರು. ಡೆಹ್ರಾಡೂನ್‌ನ ವೆಲ್‌ಹ್ಯಾಮ್ ಬಾಲಕಿಯರ ಶಾಲೆಗೆ ಸೇರುವ ಮೊದಲು ಅವರು ಪಂಜಾಬ್‌ನ ಅಮೃತಸರದಲ್ಲಿ ತಮ್ಮ ಆರಂಭಿಕ ದಿನಗಳನ್ನು ಕಳೆದರು. ನಂತರ ಅವರು ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಮನೋವಿಜ್ಞಾನದಲ್ಲಿ ಪದವಿ ಪಡೆದರು. ತದನಂತರ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿ ಸಂವಹನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಊರ ಜನರಿಂದ ಸೋಫಿಯ ಮಾವ, ಕುಟುಂಬಸ್ಥರಿಗೆ ಅಭಿನಂದನೆ
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಗ್ರಾ ಪಂ ಸದಸ್ಯನಿಗಿರುವಷ್ಟು ಕಾಮನ್ ಸೆನ್ಸ್ ಪಾಟೀಲ್​ಗೆ ಇಲ್ಲ: ಯತ್ನಾಳ್
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಆಪರೇಷನ್ ಸಿಂದೂರದ ಬಗ್ಗೆ ಪಾಕಿಸ್ತಾನಿಗನ ನೇರ ಮಾತು ಕೇಳಿ
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಪಾಕಿಸ್ತಾನಕ್ಕೆ ಬಲೂಚಿ ಮತ್ತು ತಾಲಿಬಾನಿಗಳಿಂದಲೂ ಉಳಿಗಾಲವಿಲ್ಲ!
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಆಪರೇಷನ್​ ಸಿಂಧೂರ್​, ಪ್ರಧಾನಿಗೆ ಧನ್ಯವಾದ ತಿಳಿಸಿದ ಪಹಲ್ಗಾಮ್ ಸಂತ್ರಸ್ತೆ
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
ಅರಸೊತ್ತಿಗೆ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿ: ಅರ್ಚಕ ದೀಕ್ಷಿತ್
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
‘ಭರ್ಜರಿ ಬ್ಯಾಚುಲರ್ಸ್’ ಹೊಸ ಎಪಿಸೋಡ್​ಗೆ ಹೊರಾಂಗಣ ಶೂಟಿಂಗ್; ಯಾವ ಜಿಲ್ಲೆ?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೋಫಿಯಾ ಖುರೇಷಿ ಬೆಳಗಾವಿಯ ಸೊಸೆ: ಲೆಫ್ಟಿನೆಂಟ್ ಕರ್ನಲ್​ರ ಮಾವ ಹೇಳಿದ್ದೇನು?
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
ಸೇನೆಗೆ ವರವಾಯ್ತೇ ಲಕ್ಷ್ಮೀ ಜನಾರ್ದನ ಪ್ರಸಾದ! ಬಲಭಾಗದಿಂದ ಹೂ ನೀಡಿದ ದೇವರು
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ
Dewald Brevis: ಬೇಬಿ ಎಬಿ ಸಿಡಿಲಬ್ಬರ: ಹೊಸ ದಾಖಲೆ ನಿರ್ಮಾಣ