AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿಯ ಸಿಇಓ ಆಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಆಂಡಿ ಮೈನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
TV9 Web
| Edited By: |

Updated on: Sep 09, 2022 | 1:03 PM

Share

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿ(Ogilvy)ಯ ಜಾಗತಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಬುಲ್ಚಂದಾನಿ ಅವರು ಸದ್ಯ ಸಿಇಓ ಆಗಿರುವ ಆಂಡಿ ಮೈನ್ ಅವರು ನಂತರ ಅಧಿಕಾರವನ್ನು ಹಿಡಿಯಲಿದ್ದಾರೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುಲ್ಚಂದಾನಿ ಅವರು ಜಾಗತಿಕ ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಮೈನ್‌ ಅವರ ಸ್ಥಾನವನ್ನು ತುಂಬಲಿದ್ದು, ವರ್ಷಾಂತ್ಯದವರೆಗೆ ಹಿರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬುಲ್ಚಂದಾನಿ ಅವರು ಸಿಎಓ ಆಗಿ ಅಧಿಕಾರ ವಹಿಸಿದ ನಂತರ 93 ದೇಶಗಳಲ್ಲಿ 131 ಕಛೇರಿಗಳಲ್ಲಿ ಸೃಜನಶೀಲ ನೆಟ್‌ವರ್ಕ್‌ನ ವ್ಯವಹಾರದ ಎಲ್ಲಾ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ. ಅಷ್ಟೇ ಅಲ್ಲದೆ ಅದರ ಜಾಹೀರಾತು, ಸಾರ್ವಜನಿಕ ಸಂಬಂಧಗಳು, ಅನುಭವ, ಸಲಹಾ ಮತ್ತು ಆರೋಗ್ಯ ಘಟಕಗಳು ಇವರ ಅಧಿಕಾರ ವ್ಯಾಪ್ತಿಯಡಿ ಬರಲಿದೆ.

ಓಗಿಲ್ವಿ ಜಾಗತಿಕ ಪ್ರಮುಖ ಮಾರ್ಕೆಟಿಂಗ್ ಮತ್ತು ಸಂವಹನ ಗುಂಪು WPP ಭಾಗವಾಗಿದೆ. ಬುಲ್ಚಂದಾನಿ ಅವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಂತೆ WPPನ ಕಾರ್ಯಕಾರಿ ಸಮಿತಿಯನ್ನು ಸಹ ಸೇರಿಕೊಳ್ಳುತ್ತಾರೆ ಎಂದು ಹೇಳಿಕೆ ತಿಳಿಸಿದೆ.

ದೇವಿಕಾ ಅವರು ಉದ್ಯಮದಲ್ಲಿ ದೇವ್ ಎಂದು ಜನಪ್ರಿಯವಾಗಿದ್ದಾರೆ. ಇವರು ತಮ್ಮ ಬಾಲ್ಯ ಮತ್ತು ಪ್ರೌಢಾವಸ್ಥೆಯನ್ನು ಭಾರತದಲ್ಲಿ ಕಳೆದರು. ಡೆಹ್ರಾಡೂನ್‌ನ ವೆಲ್‌ಹ್ಯಾಮ್ ಬಾಲಕಿಯರ ಶಾಲೆಗೆ ಸೇರುವ ಮೊದಲು ಅವರು ಪಂಜಾಬ್‌ನ ಅಮೃತಸರದಲ್ಲಿ ತಮ್ಮ ಆರಂಭಿಕ ದಿನಗಳನ್ನು ಕಳೆದರು. ನಂತರ ಅವರು ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಮನೋವಿಜ್ಞಾನದಲ್ಲಿ ಪದವಿ ಪಡೆದರು. ತದನಂತರ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿ ಸಂವಹನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ