AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿಯ ಸಿಇಓ ಆಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಆಂಡಿ ಮೈನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
TV9 Web
| Edited By: |

Updated on: Sep 09, 2022 | 1:03 PM

Share

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿ(Ogilvy)ಯ ಜಾಗತಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಬುಲ್ಚಂದಾನಿ ಅವರು ಸದ್ಯ ಸಿಇಓ ಆಗಿರುವ ಆಂಡಿ ಮೈನ್ ಅವರು ನಂತರ ಅಧಿಕಾರವನ್ನು ಹಿಡಿಯಲಿದ್ದಾರೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುಲ್ಚಂದಾನಿ ಅವರು ಜಾಗತಿಕ ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಮೈನ್‌ ಅವರ ಸ್ಥಾನವನ್ನು ತುಂಬಲಿದ್ದು, ವರ್ಷಾಂತ್ಯದವರೆಗೆ ಹಿರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬುಲ್ಚಂದಾನಿ ಅವರು ಸಿಎಓ ಆಗಿ ಅಧಿಕಾರ ವಹಿಸಿದ ನಂತರ 93 ದೇಶಗಳಲ್ಲಿ 131 ಕಛೇರಿಗಳಲ್ಲಿ ಸೃಜನಶೀಲ ನೆಟ್‌ವರ್ಕ್‌ನ ವ್ಯವಹಾರದ ಎಲ್ಲಾ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ. ಅಷ್ಟೇ ಅಲ್ಲದೆ ಅದರ ಜಾಹೀರಾತು, ಸಾರ್ವಜನಿಕ ಸಂಬಂಧಗಳು, ಅನುಭವ, ಸಲಹಾ ಮತ್ತು ಆರೋಗ್ಯ ಘಟಕಗಳು ಇವರ ಅಧಿಕಾರ ವ್ಯಾಪ್ತಿಯಡಿ ಬರಲಿದೆ.

ಓಗಿಲ್ವಿ ಜಾಗತಿಕ ಪ್ರಮುಖ ಮಾರ್ಕೆಟಿಂಗ್ ಮತ್ತು ಸಂವಹನ ಗುಂಪು WPP ಭಾಗವಾಗಿದೆ. ಬುಲ್ಚಂದಾನಿ ಅವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಂತೆ WPPನ ಕಾರ್ಯಕಾರಿ ಸಮಿತಿಯನ್ನು ಸಹ ಸೇರಿಕೊಳ್ಳುತ್ತಾರೆ ಎಂದು ಹೇಳಿಕೆ ತಿಳಿಸಿದೆ.

ದೇವಿಕಾ ಅವರು ಉದ್ಯಮದಲ್ಲಿ ದೇವ್ ಎಂದು ಜನಪ್ರಿಯವಾಗಿದ್ದಾರೆ. ಇವರು ತಮ್ಮ ಬಾಲ್ಯ ಮತ್ತು ಪ್ರೌಢಾವಸ್ಥೆಯನ್ನು ಭಾರತದಲ್ಲಿ ಕಳೆದರು. ಡೆಹ್ರಾಡೂನ್‌ನ ವೆಲ್‌ಹ್ಯಾಮ್ ಬಾಲಕಿಯರ ಶಾಲೆಗೆ ಸೇರುವ ಮೊದಲು ಅವರು ಪಂಜಾಬ್‌ನ ಅಮೃತಸರದಲ್ಲಿ ತಮ್ಮ ಆರಂಭಿಕ ದಿನಗಳನ್ನು ಕಳೆದರು. ನಂತರ ಅವರು ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಮನೋವಿಜ್ಞಾನದಲ್ಲಿ ಪದವಿ ಪಡೆದರು. ತದನಂತರ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿ ಸಂವಹನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ