AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿಯ ಸಿಇಓ ಆಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಆಂಡಿ ಮೈನ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
ಓಗಿಲ್ವಿ ಸಿಇಒ ಆಗಿ ನೇಮಕಗೊಂಡ ಭಾರತ ಮೂಲದ ದೇವಿಕಾ ಬುಲ್ಚಂದಾನಿ
TV9 Web
| Updated By: Rakesh Nayak Manchi|

Updated on: Sep 09, 2022 | 1:03 PM

Share

ಜಾಗತಿಕ ಜಾಹೀರಾತು ಮತ್ತು ಸಾರ್ವಜನಿಕ ಸಂಪರ್ಕ ಸಂಸ್ಥೆ ಓಗಿಲ್ವಿ(Ogilvy)ಯ ಜಾಗತಿಕ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO)ಯಾಗಿ ಭಾರತ ಮೂಲದ ದೇವಿಕಾ ಬುಲ್ಚಂದಾನಿ ಅವರು ನೇಮಕಗೊಂಡಿದ್ದಾರೆ. ಬುಲ್ಚಂದಾನಿ ಅವರು ಸದ್ಯ ಸಿಇಓ ಆಗಿರುವ ಆಂಡಿ ಮೈನ್ ಅವರು ನಂತರ ಅಧಿಕಾರವನ್ನು ಹಿಡಿಯಲಿದ್ದಾರೆ ಎಂದು ಕಂಪನಿಯು ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಬುಲ್ಚಂದಾನಿ ಅವರು ಜಾಗತಿಕ ಸಿಇಒ ಹುದ್ದೆಯಿಂದ ಕೆಳಗಿಳಿಯುತ್ತಿರುವ ಮೈನ್‌ ಅವರ ಸ್ಥಾನವನ್ನು ತುಂಬಲಿದ್ದು, ವರ್ಷಾಂತ್ಯದವರೆಗೆ ಹಿರಿಯ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಬುಲ್ಚಂದಾನಿ ಅವರು ಸಿಎಓ ಆಗಿ ಅಧಿಕಾರ ವಹಿಸಿದ ನಂತರ 93 ದೇಶಗಳಲ್ಲಿ 131 ಕಛೇರಿಗಳಲ್ಲಿ ಸೃಜನಶೀಲ ನೆಟ್‌ವರ್ಕ್‌ನ ವ್ಯವಹಾರದ ಎಲ್ಲಾ ಅಂಶಗಳಿಗೆ ಜವಾಬ್ದಾರರಾಗಿರುತ್ತಾರೆ. ಅಷ್ಟೇ ಅಲ್ಲದೆ ಅದರ ಜಾಹೀರಾತು, ಸಾರ್ವಜನಿಕ ಸಂಬಂಧಗಳು, ಅನುಭವ, ಸಲಹಾ ಮತ್ತು ಆರೋಗ್ಯ ಘಟಕಗಳು ಇವರ ಅಧಿಕಾರ ವ್ಯಾಪ್ತಿಯಡಿ ಬರಲಿದೆ.

ಓಗಿಲ್ವಿ ಜಾಗತಿಕ ಪ್ರಮುಖ ಮಾರ್ಕೆಟಿಂಗ್ ಮತ್ತು ಸಂವಹನ ಗುಂಪು WPP ಭಾಗವಾಗಿದೆ. ಬುಲ್ಚಂದಾನಿ ಅವರು ತಮ್ಮ ಹೊಸ ಹುದ್ದೆಯನ್ನು ವಹಿಸಿಕೊಳ್ಳುತ್ತಿದ್ದಂತೆ WPPನ ಕಾರ್ಯಕಾರಿ ಸಮಿತಿಯನ್ನು ಸಹ ಸೇರಿಕೊಳ್ಳುತ್ತಾರೆ ಎಂದು ಹೇಳಿಕೆ ತಿಳಿಸಿದೆ.

ದೇವಿಕಾ ಅವರು ಉದ್ಯಮದಲ್ಲಿ ದೇವ್ ಎಂದು ಜನಪ್ರಿಯವಾಗಿದ್ದಾರೆ. ಇವರು ತಮ್ಮ ಬಾಲ್ಯ ಮತ್ತು ಪ್ರೌಢಾವಸ್ಥೆಯನ್ನು ಭಾರತದಲ್ಲಿ ಕಳೆದರು. ಡೆಹ್ರಾಡೂನ್‌ನ ವೆಲ್‌ಹ್ಯಾಮ್ ಬಾಲಕಿಯರ ಶಾಲೆಗೆ ಸೇರುವ ಮೊದಲು ಅವರು ಪಂಜಾಬ್‌ನ ಅಮೃತಸರದಲ್ಲಿ ತಮ್ಮ ಆರಂಭಿಕ ದಿನಗಳನ್ನು ಕಳೆದರು. ನಂತರ ಅವರು ಮುಂಬೈನ ಸೇಂಟ್ ಕ್ಸೇವಿಯರ್ ಕಾಲೇಜಿನಲ್ಲಿ ಇಂಗ್ಲಿಷ್ ಮತ್ತು ಮನೋವಿಜ್ಞಾನದಲ್ಲಿ ಪದವಿ ಪಡೆದರು. ತದನಂತರ ದಕ್ಷಿಣ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯಕ್ಕೆ ತೆರಳಿ ಅಲ್ಲಿ ಸಂವಹನದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು.

ಮತ್ತಷ್ಟು ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ