AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ticket Prices Reduced: ವಂದೇ ಭಾರತ್ ಸೇರಿದಂತೆ ವಿವಿಧ ರೈಲ್ವೆ ಟಿಕೆಟ್ ದರ ಶೇ. 25ರವರೆಗೂ ಕಡಿತಗೊಳಿಸಿದ ಭಾರತೀಯ ರೈಲ್ವೆ

Indian Railways: ಏರ್ ಕಂಡೀಷನ್​ನ ರೈಲುಬೋಗಿಗಳ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಶೇ. 25ರವರೆಗೆ ರಿಯಾಯಿತಿ ಕೊಡಲು ರೈಲ್ವ ಇಲಾಖೆ ನಿರ್ಧರಿಸಿದೆ. ಈ ಯೋಜನೆ ತತ್​ಕ್ಷಣದಿಂದಲೇ ಜಾರಿಗೆ ಬರುತ್ತದೆ.

Ticket Prices Reduced: ವಂದೇ ಭಾರತ್ ಸೇರಿದಂತೆ ವಿವಿಧ ರೈಲ್ವೆ ಟಿಕೆಟ್ ದರ ಶೇ. 25ರವರೆಗೂ ಕಡಿತಗೊಳಿಸಿದ ಭಾರತೀಯ ರೈಲ್ವೆ
ರೈಲು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 09, 2023 | 11:45 AM

Share

ಬೆಂಗಳೂರು: ಭಾರತೀಯ ರೈಲ್ವೇಸ್ ತನ್ನ ಕೆಲ ರೈಲುಪ್ರಯಾಣ ದರಗಳನ್ನು (Raiway ticket prices) ಗಣನೀಯವಾಗಿ ಇಳಿಕೆ ಮಾಡಿದೆ. ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಬೋಗಿಗಳಲ್ಲಿ ಪ್ರಯಾಣ ದರಗಳನ್ನು ಕಡಿಮೆಗೊಳಿಸಿದೆ. ಅನುಭೂತಿ ಮತ್ತು ವಿಸ್ತಾಡೋಮ್ ಕೋಚ್​ಗಳಲ್ಲಿ ಶೇ. 25ರವರೆಗೂ ಟಿಕೆಟ್ ಬೆಲೆ ಇಳಿಸಲಾಗಿದೆ. ಜನರ ಟಿಕೆಟ್​ಗಳಿಗೆ ಇರುವ ಬೇಡಿಕೆಗೆ ಅನುಸಾರವಾಗಿ ಟಿಕೆಟ್ ಬೆಲೆ ಇಳಿಕೆ ಪ್ರಮಾಣ ಇರಲಿದೆ ಎದು ರೈಲ್ವೆ ಬೋರ್ಡ್ ಸ್ಪಷ್ಟಪಡಿಸಿದೆ.

‘ಮೂಲ ದರದ ಶೇ. 25ರವರೆಗೂ ಡಿಸ್ಕೌಂಟ್ ಇರುತ್ತದೆ. ರಿಸರ್ವೇಶನ್ ಶುಲ್ಕ, ಸೂಪರ್ ಫಾಸ್ಟ್ ಸರ್​ಚಾರ್ಜ್, ಜಿಎಸ್​ಟಿ ಇತ್ಯಾದಿ ದರ ಪ್ರತ್ಯೇಕವಾಗಿರುತ್ತದೆ. ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಡಿಸ್ಕೌಂಟ್ ನೀಡಲಾಗುತ್ತದೆ’ ಎಂದು ಮಂಡಳಿ ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿTelangana: ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ, 3 ಅಂಗಡಿ ಮುಂಗಟ್ಟುಗಳಿಗೆ ಬೆಂಕಿ

ಎಸಿ ಸೀಟುಗಳಿಗೆ ದರ ರಿಯಾಯಿತಿ ಯೋಜನೆಯನ್ನು ನಿಗದಿ ಮಾಡುವ ಅಧಿಕಾರವನ್ನು ವಿವಿಧ ರೈಲ್ವೆ ವಲಯಗಳ ಚೀಫ್ ಕಮರ್ಷಿಯಲ್ ಮ್ಯಾನೇಜರುಗಳಿಗೆ ವಹಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ.

ಕೆಲ ರೈಲು ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿರುವುದು ತಿಳಿದುಬಂದಿದೆ. ಅದರಲ್ಲೂ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು, ಅಲ್ಲಿಗೆ ಜನರನ್ನು ಸೆಳೆಯಲು ರೈಲ್ವೆ ಇಲಾಖೆ ರಿಯಾಯಿತಿ ದರದ ಅಸ್ತ್ರ ಬಳಸುತ್ತಿದೆ. ‘ಕಳೆದ 30 ದಿನದಲ್ಲಿ ಶೇ. 50ಕ್ಕಿಂತಲೂ ಕಡಿಮೆ ಭರ್ತಿಯಾಗಿರುವ ದರ್ಜೆಗಳಿಗೆ ರಿಯಾಯಿತಿ ಒದಗಿಸಲು ಪರಿಗಣಿಸಲಾಗುತ್ತದೆ’ ಎಂದು ರೈಲು ಬೋರ್ಡ್ ತಿಳಿಸಿದೆ.

ಇದನ್ನೂ ಓದಿGST Share: ಕೇಂದ್ರದಿಂದ ಕರ್ನಾಟಕಕ್ಕೆ ತೆರಿಗೆ ಪಾಲು ಯಾಕೆ ಕಡಿಮೆ? ಜಿಎಸ್​ಟಿ ಹಂಚಿಕೆ ಸೂತ್ರ ಏನು? ಇಲ್ಲಿದೆ ಡೀಟೇಲ್ಸ್

‘ತತ್​ಕ್ಷಣದಿಂದಲೇ ಈ ರಿಯಾಯಿತಿ ದರಗಳು ಅನ್ವಯ ಆಗುತ್ತವೆ. ಈಗಾಗಲೇ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರಿಗೆ ಇದು ಅನ್ವಯ ಆಗುವುದಿಲ್ಲ’ ಎಂದು ಬೋರ್ಡ್ ಸ್ಪಷ್ಟಪಡಿಸಿದೆ. ಹಾಗೆಯೇ, ರಜೆ ಅಥವಾ ಹಬ್ಬದ ಸಂದರ್ಭಗಳಲ್ಲಿ ಬಿಡಲಾಗುವ ವಿಶೇಷ ರೈಲುಗಳ ಪ್ರಯಾಣಕ್ಕೂ ಈ ರಿಯಾಯಿತಿ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ