Ticket Prices Reduced: ವಂದೇ ಭಾರತ್ ಸೇರಿದಂತೆ ವಿವಿಧ ರೈಲ್ವೆ ಟಿಕೆಟ್ ದರ ಶೇ. 25ರವರೆಗೂ ಕಡಿತಗೊಳಿಸಿದ ಭಾರತೀಯ ರೈಲ್ವೆ

Indian Railways: ಏರ್ ಕಂಡೀಷನ್​ನ ರೈಲುಬೋಗಿಗಳ ಪ್ರಯಾಣಿಕರಿಗೆ ಟಿಕೆಟ್ ದರದಲ್ಲಿ ಶೇ. 25ರವರೆಗೆ ರಿಯಾಯಿತಿ ಕೊಡಲು ರೈಲ್ವ ಇಲಾಖೆ ನಿರ್ಧರಿಸಿದೆ. ಈ ಯೋಜನೆ ತತ್​ಕ್ಷಣದಿಂದಲೇ ಜಾರಿಗೆ ಬರುತ್ತದೆ.

Ticket Prices Reduced: ವಂದೇ ಭಾರತ್ ಸೇರಿದಂತೆ ವಿವಿಧ ರೈಲ್ವೆ ಟಿಕೆಟ್ ದರ ಶೇ. 25ರವರೆಗೂ ಕಡಿತಗೊಳಿಸಿದ ಭಾರತೀಯ ರೈಲ್ವೆ
ರೈಲು
Follow us
|

Updated on: Jul 09, 2023 | 11:45 AM

ಬೆಂಗಳೂರು: ಭಾರತೀಯ ರೈಲ್ವೇಸ್ ತನ್ನ ಕೆಲ ರೈಲುಪ್ರಯಾಣ ದರಗಳನ್ನು (Raiway ticket prices) ಗಣನೀಯವಾಗಿ ಇಳಿಕೆ ಮಾಡಿದೆ. ಎಲ್ಲಾ ರೈಲುಗಳ ಎಸಿ ಚೇರ್ ಕಾರ್ ಮತ್ತು ಎಕ್ಸಿಕ್ಯೂಟಿವ್ ಕ್ಲಾಸ್ ಬೋಗಿಗಳಲ್ಲಿ ಪ್ರಯಾಣ ದರಗಳನ್ನು ಕಡಿಮೆಗೊಳಿಸಿದೆ. ಅನುಭೂತಿ ಮತ್ತು ವಿಸ್ತಾಡೋಮ್ ಕೋಚ್​ಗಳಲ್ಲಿ ಶೇ. 25ರವರೆಗೂ ಟಿಕೆಟ್ ಬೆಲೆ ಇಳಿಸಲಾಗಿದೆ. ಜನರ ಟಿಕೆಟ್​ಗಳಿಗೆ ಇರುವ ಬೇಡಿಕೆಗೆ ಅನುಸಾರವಾಗಿ ಟಿಕೆಟ್ ಬೆಲೆ ಇಳಿಕೆ ಪ್ರಮಾಣ ಇರಲಿದೆ ಎದು ರೈಲ್ವೆ ಬೋರ್ಡ್ ಸ್ಪಷ್ಟಪಡಿಸಿದೆ.

‘ಮೂಲ ದರದ ಶೇ. 25ರವರೆಗೂ ಡಿಸ್ಕೌಂಟ್ ಇರುತ್ತದೆ. ರಿಸರ್ವೇಶನ್ ಶುಲ್ಕ, ಸೂಪರ್ ಫಾಸ್ಟ್ ಸರ್​ಚಾರ್ಜ್, ಜಿಎಸ್​ಟಿ ಇತ್ಯಾದಿ ದರ ಪ್ರತ್ಯೇಕವಾಗಿರುತ್ತದೆ. ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಡಿಸ್ಕೌಂಟ್ ನೀಡಲಾಗುತ್ತದೆ’ ಎಂದು ಮಂಡಳಿ ಪ್ರಕಟಣೆಯಲ್ಲಿ ಹೇಳಲಾಗಿದೆ.

ಇದನ್ನೂ ಓದಿTelangana: ಸಿಕಂದರಾಬಾದ್ ರೈಲ್ವೆ ನಿಲ್ದಾಣದ ಬಳಿ ಅಗ್ನಿ ಅವಘಡ, 3 ಅಂಗಡಿ ಮುಂಗಟ್ಟುಗಳಿಗೆ ಬೆಂಕಿ

ಎಸಿ ಸೀಟುಗಳಿಗೆ ದರ ರಿಯಾಯಿತಿ ಯೋಜನೆಯನ್ನು ನಿಗದಿ ಮಾಡುವ ಅಧಿಕಾರವನ್ನು ವಿವಿಧ ರೈಲ್ವೆ ವಲಯಗಳ ಚೀಫ್ ಕಮರ್ಷಿಯಲ್ ಮ್ಯಾನೇಜರುಗಳಿಗೆ ವಹಿಸಲು ರೈಲ್ವೆ ಸಚಿವಾಲಯ ನಿರ್ಧರಿಸಿದೆ.

ಕೆಲ ರೈಲು ಮಾರ್ಗಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿರುವುದು ತಿಳಿದುಬಂದಿದೆ. ಅದರಲ್ಲೂ ಎಸಿ ಬೋಗಿಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಆಗಿದ್ದು, ಅಲ್ಲಿಗೆ ಜನರನ್ನು ಸೆಳೆಯಲು ರೈಲ್ವೆ ಇಲಾಖೆ ರಿಯಾಯಿತಿ ದರದ ಅಸ್ತ್ರ ಬಳಸುತ್ತಿದೆ. ‘ಕಳೆದ 30 ದಿನದಲ್ಲಿ ಶೇ. 50ಕ್ಕಿಂತಲೂ ಕಡಿಮೆ ಭರ್ತಿಯಾಗಿರುವ ದರ್ಜೆಗಳಿಗೆ ರಿಯಾಯಿತಿ ಒದಗಿಸಲು ಪರಿಗಣಿಸಲಾಗುತ್ತದೆ’ ಎಂದು ರೈಲು ಬೋರ್ಡ್ ತಿಳಿಸಿದೆ.

ಇದನ್ನೂ ಓದಿGST Share: ಕೇಂದ್ರದಿಂದ ಕರ್ನಾಟಕಕ್ಕೆ ತೆರಿಗೆ ಪಾಲು ಯಾಕೆ ಕಡಿಮೆ? ಜಿಎಸ್​ಟಿ ಹಂಚಿಕೆ ಸೂತ್ರ ಏನು? ಇಲ್ಲಿದೆ ಡೀಟೇಲ್ಸ್

‘ತತ್​ಕ್ಷಣದಿಂದಲೇ ಈ ರಿಯಾಯಿತಿ ದರಗಳು ಅನ್ವಯ ಆಗುತ್ತವೆ. ಈಗಾಗಲೇ ಟಿಕೆಟ್ ಬುಕ್ ಮಾಡಿದ ಪ್ರಯಾಣಿಕರಿಗೆ ಇದು ಅನ್ವಯ ಆಗುವುದಿಲ್ಲ’ ಎಂದು ಬೋರ್ಡ್ ಸ್ಪಷ್ಟಪಡಿಸಿದೆ. ಹಾಗೆಯೇ, ರಜೆ ಅಥವಾ ಹಬ್ಬದ ಸಂದರ್ಭಗಳಲ್ಲಿ ಬಿಡಲಾಗುವ ವಿಶೇಷ ರೈಲುಗಳ ಪ್ರಯಾಣಕ್ಕೂ ಈ ರಿಯಾಯಿತಿ ಸಿಗುವುದಿಲ್ಲ ಎಂದು ಹೇಳಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ