AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಕುಂಭಕ್ಕೆ 3,000 ವಿಶೇಷ ಟ್ರೈನುಗಳು; ರೈಲ್ವೇಸ್​ನಿಂದ ಹೊಸ ಡಿವಿಶನ್; ಕಣಿವೆ ರಾಜ್ಯಕ್ಕೆ ರೈಲ್ವೆ ಬಲ

Indian Railways and Mahakumbh: ಉತ್ತರಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಪ್ರತೀ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಕ್ಕೆ ಭರ್ಜರಿ ವ್ಯವಸ್ಥೆ ನಡೆಯುತ್ತಿದೆ. 2025ರ ಜನವರಿ 13ರಿಂದ ಫೆಬ್ರುವರಿ 26ರವರೆಗೆ ನಡೆಯುವ ಮಹಾಕುಂಭಕ್ಕೆ ಭಾರತೀಯ ರೈಲ್ವೆ ಸಾವಿರಾರು ಟ್ರೈನುಗಳ ವ್ಯವಸ್ಥೆ ಮಾಡಿದೆ. 10,000ಕ್ಕೂ ಅಧಿಕ ಟ್ರೈನುಗಳಿರುತ್ತವೆ. 3,000ಕ್ಕೂ ಅಧಿಕ ವಿಶೇಷ ಟ್ರೈನುಗಳನ್ನು ನಿಯೋಜಿಸಲಾಗಿದೆ. ಇದರಲ್ಲಿ 700 ಟ್ರೈನುಗಳನ್ನು ದೂರದ ಸ್ಥಳಗಳಿಗೆ ನಿಯೋಜಿಸಲಾಗಿದೆ.

ಮಹಾಕುಂಭಕ್ಕೆ 3,000 ವಿಶೇಷ ಟ್ರೈನುಗಳು; ರೈಲ್ವೇಸ್​ನಿಂದ ಹೊಸ ಡಿವಿಶನ್; ಕಣಿವೆ ರಾಜ್ಯಕ್ಕೆ ರೈಲ್ವೆ ಬಲ
ಭಾರತೀಯ ರೈಲ್ವೆ
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:Jan 13, 2025 | 9:04 AM

Share

ನವದೆಹಲಿ, ಜನವರಿ 1: ಉತ್ತರಪ್ರದೇಶದ ಪ್ರಯಾಗ್​ರಾಜ್ (ಅಲಹಾಬಾದ್) ನಗರದಲ್ಲಿ ನಡೆಯಲಿರುವ 2025ರ ಮಹಾಕುಂಭ ಮೇಳದಲ್ಲಿ 3,000 ವಿಶೇಷ ರೈಲುಗಳು ಸಂಚರಿಸಲಿವೆ. ಈ ಪೈಕಿ 560 ಟ್ರೈನುಗಳು ರಿಂಗ್ ರೈಲ್​ನಲ್ಲಿ ಕಾರ್ಯಾಚರಿಸಲಿವೆ. ಪ್ರಯಾಗ್​ರಾಜ್ ಜಂಕ್ಷನ್, ಸುಬೇದಾರ್​ಗಂಜ್, ನೈನಿ, ಪ್ರಯಾಗ್​ರಾಜ್ ಛಿಯೋಕಿ, ಪ್ರಯಾಗ್ ಜಂಕ್ಷನ್, ಫಫಮಾವು (Phaphamau), ಪ್ರಯಾಗ್​ರಾಜ್ ರಾಮಬಾಗ್, ಪ್ರಯಾಗ್​ರಾಜ್ ಸಂಗಮ್ ಮತ್ತು ಝುನ್ಸಿ ಈ ಒಂಬತ್ತು ರೈಲ್ವೆ ನಿಲ್ದಾಣಗಳಲ್ಲಿ ಒಟ್ಟು 560 ಟಿಕೆಟಿಂಗ್ ಪಾಯಿಂಟ್​​ಗಳನ್ನು ನಿರ್ಮಿಸಲಾಗುತ್ತಿದೆ ಎನ್ನುವ ಮಾಹಿತಿ ಮಾಧ್ಯಮಗಳಿಗೆ ಲಭಿಸಿದೆ.

ಈ ಟಿಕೆಟ್ ಕೌಂಟರ್​ಗಳಲ್ಲಿ ಪ್ರತೀ ದಿನ ಹತ್ತು ಲಕ್ಷ ಟಿಕೆಟ್​ಗಳನ್ನು ವಿತರಿಸಲಾಗುತ್ತದೆ. 15 ದಿನ ಮುಂಚಿತವಾಗಿ ಟಿಕೆಟ್ ಬುಕ್ ಮಾಡಲು ಅವಕಾಶ ನೀಡಲಾಗುತ್ತಿದೆ. ರೈಲ್ವೆ ಇಲಾಖೆ ಒಟ್ಟಾರೆ 10,000ಕ್ಕೂ ಅಧಿಕ ರೆಗ್ಯುಲರ್ ಟ್ರೈನುಗಳನ್ನು ಮಹಾಕುಂಭಕ್ಕೆ ವ್ಯವಸ್ಥೆ ಮಾಡಿದೆ. 3,000ಕ್ಕೂ ಅಧಿಕ ಸ್ಪೆಷಲ್ ಟ್ರೈನುಗಳು ಸಂಚರಿಸಲಿವೆ. ಈ ವಿಶೇಷ ಟ್ರೈನುಗಳ ಪೈಕಿ 1,800 ಟ್ರೈನುಗಳು ಅಲ್ಪ ದೂರಕ್ಕೆ ಸೀಮಿತವಾಗಿರುತ್ತವೆ. 700 ಟ್ರೈನುಗಳು ದೂರದ ಸ್ಥಳಗಳಿಗೆ ನಿಯೋಜಿತವಾಗಿವೆ. 560 ಟ್ರೈನುಗಳು ರಿಂಗ್ ರೈಲ್​ನಲ್ಲಿ ಸಂಚರಿಸಲಿವೆ.

ಇದನ್ನೂ ಓದಿ: 2024ರಲ್ಲಿ ಜಾಗತಿಕ ಆರ್ಥಿಕ ನಾಯಕತ್ವದ ನೀಲನಕ್ಷೆ ಹಾಕಿದ ಭಾರತ

ಮಹಾಕುಂಭದ ವಿಶೇಷತೆ…

ಈ ವರ್ಷ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳ ಬಹಳ ವಿಶೇಷವಾದುದು. ಇಲ್ಲಿ ಪ್ರತೀ 12 ವರ್ಷಗಳಿಗೊಮ್ಮೆ ಪೂರ್ಣ ಕುಂಭ ಮೇಳ ನಡೆಯುತ್ತದೆ. ಈ ರೀತಿ 12 ಪೂರ್ಣ ಕುಂಭ ಮೇಳಗಳಾದಾಗ ಮಹಾಕುಂಭ ನಡೆಯುತ್ತದೆ. ಅಂದರೆ, ಪ್ರತೀ 144 ವರ್ಷಗಳಿಗೊಮ್ಮೆ ಮಹಾಕುಂಭ ನಡೆಯುತ್ತದೆ. ಹೆಚ್ಚೂಕಡಿಮೆ ಒಂದೂವರೆ ಶತಮಾನದ ಬಳಿಕ ಈ ಕುಂಭ ಮೇಳವು ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿದೆ. 2025ರ ಜನವರಿ 13ರಿಂದ ಫೆಬ್ರುವರಿ 26ರವರೆಗೆ 45 ದಿನಗಳವರೆಗೆ ಮಹಾಕುಂಭ ಇರಲಿದೆ. ಕೋಟಿಗಟ್ಟಲೆ ಜನರು ಈ ಮಹಾಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜಮ್ಮುವಿನಲ್ಲಿ 69ನೇ ರೈಲ್ವೆ ಡಿವಿಶನ್ ಸ್ಥಾಪನೆ

ಜಮ್ಮು ಮತ್ತು ಕಾಶ್ಮೀರ ರಾಜ್ಯದಲ್ಲಿ ರೈಲ್ವೆ ಕನೆಕ್ಟಿವಿಟಿ ಹೆಚ್ಚಿಸಲಾಗುತ್ತಿದೆ. ಉಧಮ್​ಪುರ್ ಶ್ರೀನಗರ್ ಬಾರಾಮುಲ್ಲಾ ರೈಲ್ ಲಿಂಕ್ ಪ್ರಾಜೆಕ್ಟ್ ಅನ್ನು ಇತ್ತೀಚೆಗೆ ಪೂರ್ಣಗೊಳಿಸಲಾಗಿದೆ. ಕೆಲ ಮಾರ್ಗಗಳಲ್ಲಿ ಪ್ರಾಯೋಗಿಕವಾಗಿ ಟ್ರೈನುಗಳ ಸಂಚಾರ ನಡೆಸಲಾಗುತ್ತಿದೆ.

ಇದನ್ನೂ ಓದಿ: ಹತ್ತು ವರ್ಷದಲ್ಲಿ ರಕ್ಷಣಾ ವಲಯದ ರಫ್ತಿನಲ್ಲಿ ಹತ್ತು ಪಟ್ಟು ಹೆಚ್ಚಳ; ರಾಜನಾಥ್ ಸಿಂಗ್ ಪ್ರಶಂಸೆ

ಭಾರತೀಯ ರೈಲ್ವೇಸ್ ಸಂಸ್ಥೆಯು ಜಮ್ಮು ಕಾಶ್ಮೀರಕ್ಕೆ ಪ್ರತ್ಯೇಕ ರೈಲು ವಿಭಾಗವನ್ನು ತೆರೆಯಲು ಯೋಜಿಸಿದೆ. ಕಾಶ್ಮೀರದ ರೈಲ್ವೆ ಯೋಜನೆಗಳ ಆಡಳಿತಾತ್ಮಕ ನಿಯಂತ್ರಣವು ಸದ್ಯ ಉತ್ತರ ರೈಲ್ವೆಯ ಫಿರೋಜ್​ಪುರ್ ಡಿವಿಶನ್ ಅಡಿಯಲ್ಲಿ ಬರುತ್ತಿದೆ. ಈಗ ಜಮ್ಮು ರೈಲ್ವೆ ಡಿವಿಶನ್ ಸ್ಥಾಪನೆಯಿಂದ ಕಣಿವೆ ರಾಜ್ಯದ ರೈಲ್ವೆ ಯೋಜನೆಗಳು ಇನ್ನಷ್ಟು ಸಮರ್ಪಕವಾಗಿ ಜಾರಿಯಾಗಲು ಸಾಧ್ಯವಾಗುತ್ತದೆ. ಜಮ್ಮುವಿನಲ್ಲಿ ರೈಲ್ವೆ ಡಿವಿಶನ್ ಸ್ಥಾಪನೆಯಾದರೆ ಅದು ಭಾರತೀಯ ರೈಲ್ವೆಯ 69ನೇ ವಿಭಾಗವಾಗಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:32 am, Wed, 1 January 25

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ