AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಶಕ್ತಿಯಾಗುವತ್ತ ಭಾರತ; ಸೆಮಿಕಂಡಕ್ಟರ್ ಮಿಷನ್​ನ ಮೊದಲ ಹೆಜ್ಜೆ ಯಶಸ್ವಿ, ಎರಡನೇ ಹೆಜ್ಜೆಗೆ ಹೊಸ ಹುಮ್ಮಸ್ಸು

India semiconductor mission: 2021ರ ಡಿಸೆಂಬರ್​ನಲ್ಲಿ ಆರಂಭವಾದ ಇಂಡಿಯಾ ಸೆಮಿಕಂಡಕ್ಟರ್ ಮಿಷನ್​ನ ಗುರಿ ಮತ್ತು ಉದ್ದೇಶ ಈಡೇರಿದೆ. ದೇಶದಲ್ಲಿ ಸೆಮಿಕಂಡ್ಟರ್ ಉದ್ಯಮಕ್ಕೆ ಉತ್ತಮ ತಳಹದಿ ನಿರ್ಮಾಣವಾಗಿದೆ. ಮೂರು ವರ್ಷದಲ್ಲಿ ಐದು ಸೆಮಿಕಂಡಕ್ಟರ್ ಯೂನಿಟ್​ಗಳ ಸ್ಥಾಪನೆಗೆ ಅನುಮೋದನೆ ಸಿಕ್ಕಿದೆ. ಇನ್ನು ಮೂರು ವರ್ಷದೊಳಗೆ ಇವು ಕಾರ್ಯಾರಂಭಿಸುತ್ತವೆ. ಈಗ ಎರಡನೇ ಹಂತದ ಮಿಷನ್ ಆರಂಭಿಸುವ ಸಮಯ ಎಂದು ಉದ್ಯಮ ವಲಯ ಹೇಳುತ್ತಿದೆ.

ಸಿಲಿಕಾನ್ ಶಕ್ತಿಯಾಗುವತ್ತ ಭಾರತ; ಸೆಮಿಕಂಡಕ್ಟರ್ ಮಿಷನ್​ನ ಮೊದಲ ಹೆಜ್ಜೆ ಯಶಸ್ವಿ, ಎರಡನೇ ಹೆಜ್ಜೆಗೆ ಹೊಸ ಹುಮ್ಮಸ್ಸು
ಸೆಮಿಕಂಡಕ್ಟರ್ ಮಿಷನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 21, 2024 | 11:44 AM

Share

ನವದೆಹಲಿ, ಅಕ್ಟೋಬರ್ 21: ಮೂರು ವರ್ಷಗಳ ಹಿಂದೆ ಆರಂಭವಾದ ಇಂಡಿಯಾ ಸೆಮಿಕಂಡಕ್ಟರ್ ಮಿಶನ್​ನ (ಐಎಸ್​ಎಂ) ಗುರಿ ಬಹುತೇಕ ಈಡೇರಿದೆ. ಈ ಮಿಷನ್​ನ ಅಡಿಯಲ್ಲಿ ಬರುವ 76,000 ಕೋಟಿ ರೂ ಪ್ರೋತ್ಸಾಹಕ ನಿಧಿ ತನ್ನ ಕೆಲಸ ಮಾಡಿದೆ. ಭಾರತದಲ್ಲಿ ಸೆಮಿಕಂಡಕ್ಟರ್ ಇನ್​ಫ್ರಾಸ್ಟ್ರಕ್ಚರ್ ಅಭಿವೃದ್ಧಿಗೆ ಇದು ತಳಹದಿ ನಿರ್ಮಿಸಲುವಲ್ಲಿ ಯಶಸ್ವಿಯಾಗಿದೆ. ಮಿಷನ್ ಆರಂಭವಾಗಿ 34 ತಿಂಗಳಲ್ಲಿ ಐದು ಸೆಮಿಕಂಡಕ್ಟರ್ ಯೋಜನೆಗಳಿಗೆ ಅನುಮೋದನೆ ಸಿಕ್ಕಿದೆ. ಇವೆಲ್ಲವೂ ಕೂಡ ಇನ್ನು ಮೂರು ವರ್ಷದೊಳಗೆ ಕಾರ್ಯನಿರ್ವಹಣೆಗೆ ತೊಡಗಲಿವೆ.

ನಾಲ್ಕು ಚಿಪ್ ಪ್ಯಾಕೇಜಿಂಗ್ ಘಟಕಗಳು ಮತ್ತು ಒಂದು ಚಿಪ್ ಫ್ಯಾಬ್ ಘಟಕ 2027ರೊಳಗೆ ಚಾಲನೆಗೆ ಬರಲಿವೆ. ಈ ಐದು ಸೆಮಿಕಂಡಕ್ಟರ್ ಘಟಕಗಳು ಸದ್ಯ ನಿರ್ಮಾಣ ಹಂತದಲ್ಲಿವೆ. ಭಾರತಕ್ಕೆ ಹೊಸತಾಗಿರುವ ಈ ಉದ್ಯಮ ಇಷ್ಟು ವೇಗದಲ್ಲಿ ಬೆಳವಣಿಗೆ ಹೊಂದುತ್ತದೆ ಎಂದು ನಿರೀಕ್ಷಿಸಿದವರು ಕಡಿಮೆಯೇ.

ಇದನ್ನೂ ಓದಿ: ಏಪ್ರಿಲ್​ನಿಂದ ಸೆಪ್ಟೆಂಬರ್​ವರೆಗೆ ಭಾರತದಿಂದ ವಾಹನಗಳ ರಫ್ತು ಶೇ. 14ರಷ್ಟು ಹೆಚ್ಚಳ; ಜಾಗತಿಕವಾಗಿ ಮಿಂಚುತ್ತಿರುವ ಮೇಡ್ ಇನ್ ಇಂಡಿಯಾ ವಾಹನಗಳು

ಅಮೆರಿಕದ ಮೈಕ್ರಾನ್ ಸಂಸ್ಥೆ ಭಾರತದಲ್ಲಿ 2.75 ಬಿಲಿಯನ್ ಡಾಲರ್ ಹೂಡಿಕೆಯಲ್ಲಿ ಚಿಪ್ ಅಸೆಂಬ್ಲಿಂಗ್, ಟೆಸ್ಟಿಂಗ್, ಮಾರ್ಕಿಂಗ್ ಮತ್ತು ಪ್ಯಾಕೇಜಿಂಗ್ ಯೂನಿಟ್ ಅನ್ನು ನಿರ್ಮಿಸುತ್ತಿದೆ. ಭಾರತದ ಟಾಟಾ ಎಲೆಕ್ಟ್ರಾನಿಕ್ಸ್, ಕೇನಸ್ ಟೆಕ್ನಾಲಜಿ, ಸಿಜಿ ಪವರ್, ಮುರುಗಪ್ಪ ಗ್ರೂಪ್ ಮೊದಲಾದ ಕಂಪನಿಗಳು ಸೆಮಿಕಂಡಕ್ಟರ್ ಕ್ಷೇತ್ರಕ್ಕೆ ಅಡಿ ಇಟ್ಟಿವೆ. ದೇಶದ ಸೆಮಿಕಂಡಕ್ಟರ್ ಇಕೋಸಿಸ್ಟಂ ಈಗ ಜಾಗತಿಕವಾಗಿ ವ್ಯವಹಾರಕ್ಕೆ ತೊಡಗಲು ಸಿದ್ಧವಾಗಿರುವ ಸ್ಪಷ್ಟ ಸಂದೇಶ ರವಾನೆಯಾಗಿದೆ.

ಎರಡನೇ ಹಂತದ ಯೋಜನೆಗೆ ಸಜ್ಜಾಗಬೇಕು…

ಭಾರತದ ಸೆಮಿಕಂಡಕ್ಟರ್ ಮಿಷನ್​ನ ಮೊದಲ ಹಂತದ ಯೋಜನೆಯ ಉದ್ದೇಶ ಬಹುತೇಕ ಪೂರ್ಣಗೊಂಡಿದೆ. ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್​ಗೆ ಅಗತ್ಯವಿರುವ ತಳಹದಿಯನ್ನು ನಿರ್ಮಿಸಲಾಗಿದೆ. ಮುಂದಿನ ಸುದೀರ್ಘ ಪ್ರಯಾಣದ ಆರಂಭ ಮಾತ್ರ ಇದು ಎಂದು ಭಾರತೀಯ ಸೆಲೂಲಾರ್ ಮತ್ತು ಎಲೆಕ್ಟ್ರಾನಿಕ್ಸ್ ಸಂಘಟನೆಯ ಅಧ್ಯಕ್ಷ ಪಂಕ್ ಮೊಹಿಂದ್ರೂ ಹೇಳುತ್ತಾರೆ.

ಇದನ್ನೂ ಓದಿ: ಭಾರತದಲ್ಲಿ ಸ್ಟಾರ್ಟಪ್​ಗಳಿಗೆ ಮತ್ತೆ ಫಂಡಿಂಗ್ ಸುಗ್ಗಿ; ಒಂದೇ ವಾರದಲ್ಲಿ ಮೂರು ಪಟ್ಟು ಬಂಡವಾಳ ಹೆಚ್ಚಳ

ಎರಡನೇ ಹಂತದ ಮಿಷನ್ ಜಾರಿಗೊಳಿಸಿದರೆ ಜಾಗತಿಕ ಸೆಮಿಕಂಡಕ್ಟರ್ ಕಂಪನಿಗಳ ಜೊತೆ ಸಹಭಾಗಿತ್ವ ಸಾಧಿಸಲು ಗಮನ ಕೊಡಬಹುದು. ಚಿಪ್ ತಯಾರಿಕೆ ಬೇಕಾದ ರಾಸಾಯನಿಕ, ಅನಿಲ ಇತ್ಯಾದಿ ಕಚ್ಚಾ ವಸ್ತುಗಳ ಇಕೋಸಿಸ್ಟಂ ಅನ್ನು ಬಲಪಡಿಸಬಹುದು. ದೇಶದೊಳಗೆ ಈ ಉದ್ಯಮಕ್ಕೆ ಅಗತ್ಯ ಇರುವ ಕೌಶಲ್ಯವಂತ ಉದ್ಯೋಗಿಗಳನ್ನು ನಿರ್ಮಿಸುವುದು ಇವೇ ಮುಂತಾದ ಗುರಿ ಸಾಧನೆಗೆ ಗಮನ ಹರಿಸುವ ಅಗತ್ಯ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಡಿಕೆ ಶಿವಕುಮಾರ್ ಸಿಎಂ ಆದ ಬಳಿಕ ಕುಮಾರಕೃಪಾ ಅತಿಥಿ ಗೃಹವೇ ಸರ್ಕಾರಿ ನಿವಾಸ?
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ
ಮಗು ಜನಿಸಿದ್ದಕ್ಕೆ ನೆಲಭೋಜನ ಮಾಡಿ ಹರಕೆ ತೀರಿಸಿದ ವಸಿಷ್ಠ ಸಿಂಹ, ಹರಿಪ್ರಿಯಾ