Stock Market: ಭಾರತದ ಷೇರುಪೇಟೆಯಲ್ಲಿ ಮಿಂಚಿನ ಸಂಚಾರ; ಗರಿಗೆದರಿದ ನಿಫ್ಟಿ; ಸೆನ್ಸೆಕ್ಸ್ ಹೊಸ ಎತ್ತರ

Sensex New Record High: ಸೆನ್ಸೆಕ್ಸ್ ಮಾರ್ಚ್ 1ರಂದು 73,574 ಅಂಕಗಳ ಮಟ್ಟ ಮುಟ್ಟುವ ಮೂಲಕ ಹೊಸ ಎತ್ತರಕ್ಕೆ ಏರಿದೆ. ನಿಫ್ಟಿ ಕೂಡ ಮತ್ತೊಮ್ಮೆ 22,000 ಅಂಕಗಳ ಗಡಿ ದಾಟಿ ಹೋಗಿದೆ. ಭಾರತೀಯ ಷೇರುಮಾರುಕಟ್ಟೆಯ ಈ ಓಟಕ್ಕೆ ವಿವಿಧ ಅಂಶಗಳು ಕಾರಣವಿರಬಹುದು. ಭಾರತದ ಮೂರನೇ ಕ್ವಾರ್ಟರ್​ನ ಉತ್ತಮ ಜಿಡಿಪಿ ದತ್ತಾಂಶ ಪ್ರಮುಖವಾದುದು. ಹಾಗೆಯೇ, ಅಮೆರಿಕದ ಹಣದುಬ್ಬರ ಇಳಿಕೆ ಕಂಡಿರುವುದೂ ಸಕಾರಾತ್ಮಕ ಪರಿಣಾಮ ಬೀರಿರಬಹುದು.

Stock Market: ಭಾರತದ ಷೇರುಪೇಟೆಯಲ್ಲಿ ಮಿಂಚಿನ ಸಂಚಾರ; ಗರಿಗೆದರಿದ ನಿಫ್ಟಿ; ಸೆನ್ಸೆಕ್ಸ್ ಹೊಸ ಎತ್ತರ
ಷೇರು ಮಾರುಕಟ್ಟೆ
Follow us
|

Updated on: Mar 01, 2024 | 12:56 PM

ನವದೆಹಲಿ, ಮಾರ್ಚ್ 1: ಷೇರು ಮಾರುಕಟ್ಟೆ ವಾರಾಂತ್ಯದಲ್ಲಿ ಸಖತ್ ಹವಾ ಸೃಷ್ಟಿಸುತ್ತಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿ ಬಹಳಷ್ಟು ಷೇರುಗಳು ಸಕಾರಾತ್ಮಕ ಸ್ಪಂದನೆ ಪಡೆದಿವೆ. ಹಲವು ಸೂಚ್ಯಂಕಗಳು ಹಸಿರು ಬಣ್ಣದಲ್ಲಿವೆ. ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು ಭರ್ಜರಿ ಏರಿಕೆ ಪಡೆದಿವೆ. ಅದರಲ್ಲೂ ಸೆನ್ಸೆಕ್ಸ್ ಹೊಸ ಎತ್ತರಕ್ಕೆ ಏರಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ (bse sensex) ಇಂದು ಶುಕ್ರವಾರ 73,574 ಅಂಕಗಳ ಮಟ್ಟ ಮುಟ್ಟಿತ್ತು. ಇದು ಈವರೆಗೆ ಸೆನ್ಸೆಕ್ಸ್ ಏರಿದ ಗರಿಷ್ಠ ಎತ್ತರ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ50 ಸೂಚ್ಯಂಕ ಮತ್ತೊಮ್ಮೆ 22,000 ಅಂಕಗಳ ಗಡಿ ದಾಟಿದೆ.

ಷೇರು ಮಾರುಕಟ್ಟೆಗೆ ಹೊಸ ಕಳೆ ಕಟ್ಟಲು ಕಾರಣಗಳೇನು?

ಭಾರತದ ಷೇರು ಮಾರುಕಟ್ಟೆ ಶುಕ್ರವಾರ ಉತ್ತಮ ವಹಿವಾಟು ಕಾಣಲು ಕೆಲ ಪ್ರಮುಖ ಕಾರಣಗಳಿವೆ:

ಅಚ್ಚರಿ ಮೂಡಿಸಿದ ಭಾರತದ ಆರ್ಥಿಕತೆ

ಸರ್ಕಾರ ನಿನ್ನೆ ಗುರುವಾರ ಮೂರನೇ ಕ್ವಾರ್ಟರ್​ನ ಜಿಡಿಪಿ ದತ್ತಾಂಶವನ್ನು ಬಿಡುಗಡೆ ಮಾಡಿತು. ಎಲ್ಲರ ನಿರೀಕ್ಷೆಗಳನ್ನೂ ಮೀರಿಸಿ, ಶೇ. 8.4ರಷ್ಟು ಆರ್ಥಿಕ ಬೆಳವಣಿಗೆ ಆಗಿರುವುದು ಈ ದತ್ತಾಂಶ ತೋರಿಸಿದೆ. ಏಪ್ರಿಲ್​ನಿಂದ ಮೊದಲೆರಡು ಕ್ವಾರ್ಟರ್​ನಲ್ಲಿ ಆಗಿದ್ದಕ್ಕಿಂತಲೂ ಮೂರನೇ ಕ್ವಾರ್ಟರ್​ನಲ್ಲಿ ಹೆಚ್ಚು ಬೆಳವಣಿಗೆ ಆಗಿದೆ. ಹಲವು ಆರ್ಥಿಕ ವಿಶ್ಲೇಷಕರು 3ನೇ ಕ್ವಾರ್ಟರ್​ನಲ್ಲಿ ಶೇ. 6ರಿಂದ 7ರಷ್ಟು ಮಾತ್ರವೇ ಜಿಡಿಪಿವೃದ್ಧಿಸಬಹುದು ಎಂದಿದ್ದರು. ಆದ್ದರಿಂದ ಭಾರತದ ಜಿಡಿಪಿ ಬೆಳವಣಿಗೆ ಅಚ್ಚರಿ ಮೂಡಿಸಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿರಬಹುದು.

ಇದನ್ನೂ ಓದಿ: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿಯಲ್ಲಿ ಶೇ. 8.4ರಷ್ಟು ಬೆಳೆದ ಜಿಡಿಪಿ; ಮತ್ತೆ ಅಚ್ಚರಿ ಮೂಡಿಸಿದ ಭಾರತದ ಆರ್ಥಿಕ ಬೆಳವಣಿಗೆ

ಅಮೆರಿಕದ ಹಣದುಬ್ಬರ ಇಳಿಕೆಯ ಪರಿಣಾಮ

ಅಮೆರಿಕದ ಹಣದುಬ್ಬರ ಇನ್ನಷ್ಟು ಕೆಳಗಿಳಿದಿರುವುದು ಜಾಗತಿಕವಾಗಿ ಸಕಾರಾತ್ಮಕ ಪರಿಣಾಮ ಬೀರಿದೆ. ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಬಡ್ಡಿದರ ಕಡಿತಗೊಳಿಸುವ ಮುನ್ಸೂಚನೆ ದಟ್ಟವಾಗಿದೆ. ಇದೂ ಕೂಡ ಹೂಡಿಕೆದಾರರ ವಿಶ್ವಾಸ ಮೂಡಿಸಿದೆ. ಭಾರತ ಮಾತ್ರವಲ್ಲ ಜಾಗತಿಕ ಷೇರುಮಾರುಕಟ್ಟೆಯಲ್ಲೂ ಉತ್ಸಾಹ ಇದೆ.

ಬಿಜೆಪಿ ಗೆಲ್ಲುವ ಸೂಚನೆಯ ಪರಿಣಾಮ

ಇತ್ತೀಚಿನ ಕೆಲ ಸಮೀಕ್ಷೆಗಳು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಮತ್ತೆ ಗೆಲುವು ಸಾಧಿಸಬಹುದು ಎಂದು ಅಂದಾಜು ಮಾಡಿವೆ. ಕಳೆದ ಹತ್ತು ವರ್ಷಗಳಿಂದ ಸರ್ಕಾರ ಮಾಡಿರುವ ನೀತಿಗಳು ಮುಂದುವರಿಯಬಹುದು ಎನ್ನುವಂತಹ ಸಂಗತಿ ಉದ್ಯಮ ವಲಯಕ್ಕೆ ಸಮಾಧಾನ ತಂದಿದೆ. ಬ್ಯಾಂಕಿಂಗ್ ಮತ್ತು ಸರ್ಕಾರಿ ಸಂಸ್ಥೆಗಳ ಷೇರುಗಳಿಗೆ ಬೇಡಿಕೆ ಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು