AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market: ಭಾರತದ ಷೇರುಪೇಟೆಯಲ್ಲಿ ಮಿಂಚಿನ ಸಂಚಾರ; ಗರಿಗೆದರಿದ ನಿಫ್ಟಿ; ಸೆನ್ಸೆಕ್ಸ್ ಹೊಸ ಎತ್ತರ

Sensex New Record High: ಸೆನ್ಸೆಕ್ಸ್ ಮಾರ್ಚ್ 1ರಂದು 73,574 ಅಂಕಗಳ ಮಟ್ಟ ಮುಟ್ಟುವ ಮೂಲಕ ಹೊಸ ಎತ್ತರಕ್ಕೆ ಏರಿದೆ. ನಿಫ್ಟಿ ಕೂಡ ಮತ್ತೊಮ್ಮೆ 22,000 ಅಂಕಗಳ ಗಡಿ ದಾಟಿ ಹೋಗಿದೆ. ಭಾರತೀಯ ಷೇರುಮಾರುಕಟ್ಟೆಯ ಈ ಓಟಕ್ಕೆ ವಿವಿಧ ಅಂಶಗಳು ಕಾರಣವಿರಬಹುದು. ಭಾರತದ ಮೂರನೇ ಕ್ವಾರ್ಟರ್​ನ ಉತ್ತಮ ಜಿಡಿಪಿ ದತ್ತಾಂಶ ಪ್ರಮುಖವಾದುದು. ಹಾಗೆಯೇ, ಅಮೆರಿಕದ ಹಣದುಬ್ಬರ ಇಳಿಕೆ ಕಂಡಿರುವುದೂ ಸಕಾರಾತ್ಮಕ ಪರಿಣಾಮ ಬೀರಿರಬಹುದು.

Stock Market: ಭಾರತದ ಷೇರುಪೇಟೆಯಲ್ಲಿ ಮಿಂಚಿನ ಸಂಚಾರ; ಗರಿಗೆದರಿದ ನಿಫ್ಟಿ; ಸೆನ್ಸೆಕ್ಸ್ ಹೊಸ ಎತ್ತರ
ಷೇರು ಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 01, 2024 | 12:56 PM

Share

ನವದೆಹಲಿ, ಮಾರ್ಚ್ 1: ಷೇರು ಮಾರುಕಟ್ಟೆ ವಾರಾಂತ್ಯದಲ್ಲಿ ಸಖತ್ ಹವಾ ಸೃಷ್ಟಿಸುತ್ತಿದೆ. ಬಿಎಸ್​ಇ ಮತ್ತು ಎನ್​ಎಸ್​ಇಯಲ್ಲಿ ಬಹಳಷ್ಟು ಷೇರುಗಳು ಸಕಾರಾತ್ಮಕ ಸ್ಪಂದನೆ ಪಡೆದಿವೆ. ಹಲವು ಸೂಚ್ಯಂಕಗಳು ಹಸಿರು ಬಣ್ಣದಲ್ಲಿವೆ. ಸೆನ್ಸೆಕ್ಸ್, ನಿಫ್ಟಿ ಸೂಚ್ಯಂಕಗಳು ಭರ್ಜರಿ ಏರಿಕೆ ಪಡೆದಿವೆ. ಅದರಲ್ಲೂ ಸೆನ್ಸೆಕ್ಸ್ ಹೊಸ ಎತ್ತರಕ್ಕೆ ಏರಿದೆ. ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ನ ಸೆನ್ಸೆಕ್ಸ್ ಸೂಚ್ಯಂಕ (bse sensex) ಇಂದು ಶುಕ್ರವಾರ 73,574 ಅಂಕಗಳ ಮಟ್ಟ ಮುಟ್ಟಿತ್ತು. ಇದು ಈವರೆಗೆ ಸೆನ್ಸೆಕ್ಸ್ ಏರಿದ ಗರಿಷ್ಠ ಎತ್ತರ. ಇನ್ನು, ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್​ನ ನಿಫ್ಟಿ50 ಸೂಚ್ಯಂಕ ಮತ್ತೊಮ್ಮೆ 22,000 ಅಂಕಗಳ ಗಡಿ ದಾಟಿದೆ.

ಷೇರು ಮಾರುಕಟ್ಟೆಗೆ ಹೊಸ ಕಳೆ ಕಟ್ಟಲು ಕಾರಣಗಳೇನು?

ಭಾರತದ ಷೇರು ಮಾರುಕಟ್ಟೆ ಶುಕ್ರವಾರ ಉತ್ತಮ ವಹಿವಾಟು ಕಾಣಲು ಕೆಲ ಪ್ರಮುಖ ಕಾರಣಗಳಿವೆ:

ಅಚ್ಚರಿ ಮೂಡಿಸಿದ ಭಾರತದ ಆರ್ಥಿಕತೆ

ಸರ್ಕಾರ ನಿನ್ನೆ ಗುರುವಾರ ಮೂರನೇ ಕ್ವಾರ್ಟರ್​ನ ಜಿಡಿಪಿ ದತ್ತಾಂಶವನ್ನು ಬಿಡುಗಡೆ ಮಾಡಿತು. ಎಲ್ಲರ ನಿರೀಕ್ಷೆಗಳನ್ನೂ ಮೀರಿಸಿ, ಶೇ. 8.4ರಷ್ಟು ಆರ್ಥಿಕ ಬೆಳವಣಿಗೆ ಆಗಿರುವುದು ಈ ದತ್ತಾಂಶ ತೋರಿಸಿದೆ. ಏಪ್ರಿಲ್​ನಿಂದ ಮೊದಲೆರಡು ಕ್ವಾರ್ಟರ್​ನಲ್ಲಿ ಆಗಿದ್ದಕ್ಕಿಂತಲೂ ಮೂರನೇ ಕ್ವಾರ್ಟರ್​ನಲ್ಲಿ ಹೆಚ್ಚು ಬೆಳವಣಿಗೆ ಆಗಿದೆ. ಹಲವು ಆರ್ಥಿಕ ವಿಶ್ಲೇಷಕರು 3ನೇ ಕ್ವಾರ್ಟರ್​ನಲ್ಲಿ ಶೇ. 6ರಿಂದ 7ರಷ್ಟು ಮಾತ್ರವೇ ಜಿಡಿಪಿವೃದ್ಧಿಸಬಹುದು ಎಂದಿದ್ದರು. ಆದ್ದರಿಂದ ಭಾರತದ ಜಿಡಿಪಿ ಬೆಳವಣಿಗೆ ಅಚ್ಚರಿ ಮೂಡಿಸಿದೆ. ಇದು ಹೂಡಿಕೆದಾರರ ವಿಶ್ವಾಸ ಹೆಚ್ಚಿಸಿರಬಹುದು.

ಇದನ್ನೂ ಓದಿ: ಅಕ್ಟೋಬರ್​ನಿಂದ ಡಿಸೆಂಬರ್​ವರೆಗಿನ ಅವಧಿಯಲ್ಲಿ ಶೇ. 8.4ರಷ್ಟು ಬೆಳೆದ ಜಿಡಿಪಿ; ಮತ್ತೆ ಅಚ್ಚರಿ ಮೂಡಿಸಿದ ಭಾರತದ ಆರ್ಥಿಕ ಬೆಳವಣಿಗೆ

ಅಮೆರಿಕದ ಹಣದುಬ್ಬರ ಇಳಿಕೆಯ ಪರಿಣಾಮ

ಅಮೆರಿಕದ ಹಣದುಬ್ಬರ ಇನ್ನಷ್ಟು ಕೆಳಗಿಳಿದಿರುವುದು ಜಾಗತಿಕವಾಗಿ ಸಕಾರಾತ್ಮಕ ಪರಿಣಾಮ ಬೀರಿದೆ. ಅಮೆರಿಕದ ಫೆಡರಲ್ ಬ್ಯಾಂಕ್ ತನ್ನ ಬಡ್ಡಿದರ ಕಡಿತಗೊಳಿಸುವ ಮುನ್ಸೂಚನೆ ದಟ್ಟವಾಗಿದೆ. ಇದೂ ಕೂಡ ಹೂಡಿಕೆದಾರರ ವಿಶ್ವಾಸ ಮೂಡಿಸಿದೆ. ಭಾರತ ಮಾತ್ರವಲ್ಲ ಜಾಗತಿಕ ಷೇರುಮಾರುಕಟ್ಟೆಯಲ್ಲೂ ಉತ್ಸಾಹ ಇದೆ.

ಬಿಜೆಪಿ ಗೆಲ್ಲುವ ಸೂಚನೆಯ ಪರಿಣಾಮ

ಇತ್ತೀಚಿನ ಕೆಲ ಸಮೀಕ್ಷೆಗಳು ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟ ಮತ್ತೆ ಗೆಲುವು ಸಾಧಿಸಬಹುದು ಎಂದು ಅಂದಾಜು ಮಾಡಿವೆ. ಕಳೆದ ಹತ್ತು ವರ್ಷಗಳಿಂದ ಸರ್ಕಾರ ಮಾಡಿರುವ ನೀತಿಗಳು ಮುಂದುವರಿಯಬಹುದು ಎನ್ನುವಂತಹ ಸಂಗತಿ ಉದ್ಯಮ ವಲಯಕ್ಕೆ ಸಮಾಧಾನ ತಂದಿದೆ. ಬ್ಯಾಂಕಿಂಗ್ ಮತ್ತು ಸರ್ಕಾರಿ ಸಂಸ್ಥೆಗಳ ಷೇರುಗಳಿಗೆ ಬೇಡಿಕೆ ಬಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್