AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?

Indian stock market crashes on Ugadi day: ಯುಗಾದಿ ಹಬ್ಬದ ದಿನವಾದ ಇಂದು ಗುರುವಾರ ಭಾರತೀಯ ಷೇರು ಮಾರುಕಟ್ಟೆ ತಲ್ಲಣಗೊಂಡಿದೆ. ಬಿಎಸ್​ಇಯ ಸೆನ್ಸೆಕ್ಸ್, ಎನ್​ಎಸ್​ಇಯ ನಿಫ್ಟಿ ಇಂಡೆಕ್ಸ್​ಗಳು ತೀವ್ರ ಹಿನ್ನಡೆ ಕಂಡಿವೆ. ಸೆನ್ಸೆಕ್ಸ್ ಬಹುತೇಕ 2,500 ಅಂಕಗಳನ್ನು ನಷ್ಟ ಮಾಡಿಕೊಂಡಿದೆ. ನಿಫ್ಟಿ 23,000 ಅಂಕಗಳ ಗಡಿಯೊಳಗೆ ಇಳಿಯುವ ಧಾವಂತದಲ್ಲಿದೆ. ಈ ಕುಸಿತಕ್ಕೆ ಏನು ಕಾರಣ?

ಷೇರು ಮಾರುಕಟ್ಟೆ ಭಾರೀ ಕುಸಿತ; ಸಿಕ್ಕಾಪಟ್ಟೆ ನಷ್ಟ ಕಂಡ ಸೆನ್ಸೆಕ್ಸ್, ನಿಫ್ಟಿ; ಈ ಪರಿ ಕುಸಿತಕ್ಕೆ ಕಾರಣಗಳೇನು?
ಷೇರು ಮಾರುಕಟ್ಟೆ ಕುಸಿತ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Mar 19, 2026 | 5:42 PM

Share

ನವದೆಹಲಿ, ಮಾರ್ಚ್ 19: ಭಾರತದ ಷೇರು ಮಾರುಕಟ್ಟೆ (Stock Market) ಯುಗಾದಿ ಹಬ್ಬದ ದಿನದಂದು ಅಕ್ಷರಶಃ ಗಡಗಡ ಅಲುಗಾಡಿದೆ. ಮಾರುಕಟ್ಟೆಯ ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಎರಡೂ ಕೂಡ ಹೆಚ್ಚೂಕಡಿಮೆ ಶೇ. 3ರಷ್ಟು ಕುಸಿತವನ್ನು ಕಂಡಿವೆ. ಮೂರು ದಿನ ಪಾಸಿಟಿವ್ ಆಗಿದ್ದ ಈ ಇಂಡೆಕ್ಸ್ ಗುರುವಾರ ನೆಲಕಚ್ಚಿವೆ. ಸೆನ್ಸೆಕ್ಸ್ 2,496 ಅಂಕಗಳನ್ನು ಕಳೆದುಕೊಂಡು 74,207.24 ಮಟ್ಟಕ್ಕೆ ಮುಟ್ಟಿದೆ. ನಿಫ್ಟಿ50 ಇಂಡೆಕ್ಸ್ 775.65 ಅಂಕಗಳ ಕಳೆದುಕೊಂಡು 23,002.15 ಮಟ್ಟ ಮುಟ್ಟಿದೆ.

ಈ ಇಂಡೆಕ್ಸ್​ನಲ್ಲಿರುವ ಹತ್ತಾರು ಕಂಪನಿಗಳಷ್ಟೇ ಹಿನ್ನಡೆ ಹೊಂದಿಲ್ಲ, ಬಹುತೇಕ ಇಡೀ ಷೇರು ಮಾರುಕಟ್ಟೆಯ ಹೆಚ್ಚಿನ ಕಂಪನಿಗಳ ಷೇರುಗಳಿಗೆ ಹಿನ್ನಡೆಯಾಗಿದೆ. ಎನ್​ಎಸ್​ಇನಲ್ಲಿ ಲಿಸ್ಟ್ ಆಗಿರುವ ಸುಮಾರು 4,000 ಷೇರುಗಳ ಪೈಕಿ 3,048 ಷೇರುಗಳು ನೆಗಟಿವ್ ಆಗಿವೆ. 864 ಷೇರುಗಳು ಮಾತ್ರವೇ ಗುರುವಾರ ಲಾಭ ಕಂಡಿರುವುದು.

ಇದನ್ನೂ ಓದಿ: ಇಂಧನ ದತ್ತಾಂಶವನ್ನು ರಾಷ್ಟ್ರೀಯ ಭದ್ರತಾ ವಿಚಾರವೆಂದು ವರ್ಗೀಕರಿಸಿದ ಸರ್ಕಾರ; ತೈಲ, ಅನಿಲ ಕ್ಷೇತ್ರದ ಸಂಸ್ಥೆಗಳಿಗೆ ಹೊಸ ಜವಾಬ್ದಾರಿ

ಎಚ್​ಡಿಎಫ್​ಸಿ ಬ್ಯಾಂಕ್, ಎಟರ್ನಲ್, ಶ್ರೀರಾಮ್ ಫೈನಾನ್ಸ್ ಷೇರುಗಳು ಅತಿಹೆಚ್ಚು ಕಳೆದುಕೊಂಡಿರುವುದು. ಗುರುವಾರ ಗಳಿಕೆ ಕಂಡಿರುವ ಷೇರುಗಳಲ್ಲಿ ಹೆಚ್ಚಿನವು ತೈಲ ಮತ್ತು ಇಂಧನ ಕ್ಷೇತ್ರದ ಕಂಪನಿಗಳಾಗಿವೆ.

ಷೇರು ಮಾರುಕಟ್ಟೆ ಕುಸಿತಕ್ಕೆ ಕೆಲ ಸಂಭಾವ್ಯ ಕಾರಣಗಳು ಇಂತಿವೆ:

  • ಅಮೆರಿಕ ಇರಾನ್ ಸಂಘರ್ಷ ತಣ್ಣಗಾರುವ ಲಕ್ಷಣ ಕಾಣುತ್ತಿಲ್ಲ. ತನ್ನನ್ನು ಹೊಡೆದರೆ ತಾನು ಯಾರನ್ನೂ ಬಿಡುವುದಿಲ್ಲ ಎಂದು ಇರಾನ್ ಮಾಡು ಇಲ್ಲ ಮಡಿ ಹೋರಾಟಕ್ಕೆ ಸಿದ್ಧಗೊಂಡಿದೆ. ಇದು ಎಲ್ಲೆಡೆ ಭಯ ಮೂಡಲು ಕಾರಣವಾಗಿದೆ.
  • ಇರಾನ್ ಯುದ್ಧದಿಂದಾಗಿ ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 110 ಡಾಲರ್ ದಾಟಿದೆ. ಇದು ಜಾಗತಿಕವಾಗಿ ಹಣದುಬ್ಬರ ಏರಿಕೆಗೆ ಮತ್ತು ಆರ್ಥಿಕ ಕುಸಿತಕ್ಕೆ ಕಾರಣವಾಗಬಹುದು. ಹೀಗಾಗಿ, ಮಾರುಕಟ್ಟೆ ಭಯಗ್ರಸ್ತವಾಗಿದೆ.
  • ಎಚ್​ಡಿಎಫ್​ಸಿ ಬ್ಯಾಂಕ್​ನ ಛೇರ್ಮನ್ ಅತಾನು ಚಕ್ರಬರ್ತಿ ಅವರು ನೈತಿಕ ಕಾರಣವೊಡ್ಡಿ ರಾಜೀನಾಮೆ ನೀಡಿರುವುದು ಅದರ ಷೇರು ಕುಸಿತಕ್ಕೆ ಎಡೆ ಮಾಡಿಕೊಟ್ಟಿದೆ. ಎಚ್ಡಿಎಫ್​ಸಿ ಬ್ಯಾಂಕ್​ನ ಷೇರುಬೆಲೆ ಒಂದೇ ದಿನದಲ್ಲಿ ಶೇ. 8ರಷ್ಟು ಕುಸಿತವಾಗಿದೆ.

ಇದನ್ನೂ ಓದಿ: ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿರುವ ಭಾರತದ ಎಲ್​ಪಿಜಿ ಟ್ಯಾಂಕರ್​ಗಳಲ್ಲಿ ಗ್ಯಾಸ್ ಎಷ್ಟು ದಿನಕ್ಕಾಗುವಷ್ಟಿದೆ ಗೊತ್ತಾ?

ಹಾಗೆಯೇ, ಅಮೆರಿಕದ ಫೆಡರಲ್ ರಿಸರ್ವ್ ಸಂಸ್ಥೆಯು ಹಣದುಬ್ಬರ ಏರಬಹುದು ಎಂದು ಹೇಳಿದ್ದು, ಡಾಲರ್ ಎದುರು ರುಪಾಯಿ ಮೌಲ್ಯದ ಕುಸಿತ ಮುಂದುರಿಯುತ್ತಿರುವುದು, ಎಫ್​ಐಐಗಳಿಂದ ಷೇರುಗಳ ಬಿಕರಿಯಾಗುತ್ತಿರುವುದು ಇವೆಲ್ಲವೂ ಭಾರತದ ಷೇರು ಮಾರುಕಟ್ಟೆಯ ಹಿನ್ನಡೆಗೆ ಕಾರಣಗಳಾಗಿರಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಬೆಂಗಳೂರಿನ ಸುಧಾಮ ನಗರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಕಟ್ಟಡ!
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ಟಿ ನರಸೀಪುರದಲ್ಲಿ ಮಸೀದಿ ಮುಂದೆಯೇ ಗಣೇಶ ಮೆರವಣಿಗೆ, ಪಟಾಕಿ ಸಿಡಿಸಿ ಸಂಭ್ರಮ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ರವಿ ಕನ್ಯಾ ರಾಶಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದೆ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕನ್ನಡಿಗರೇ ನಿರ್ಮಿಸಿದ ದ್ರುವ ಹೆಲಿಕಾಪ್ಟರ್ ಹಸ್ತಾಂತರ:ಭಾರತೀಯ ಸೇನೆಗೆ ಬಲ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಕೂನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಚಿರತೆ ಮರಿಗಳ ಜನನ
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಯಾದಗಿರಿಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: 6 ಜನರ ವಿರುದ್ಧ ಕೇಸ್​​
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಏಣಿಯ ಮೇಲೆ ಬ್ಯಾಲೆನ್ಸ್, ಕ್ಯಾಪ್ಟನ್ ಆಗಲು ಏನೆಲ್ಲಾ ಸಾಹಸ: ವಿಡಿಯೋ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ಟಿ.ನರಸೀಪುರದಲ್ಲಿ ಶೋಭಾಯಾತ್ರೆಗೆ ಪ್ರತಿಯಾಗಿ ಸೌಹಾರ್ದ ಭೀಮಯಾತ್ರೆ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ