AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Closing Bell: ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 133 ಪಾಯಿಂಟ್ಸ್ ಏರಿಕೆ; ಕೋಲ್ ಇಂಡಿಯಾ ಪ್ರತಿ ಷೇರು 5.50 ರೂ. ಗಳಿಕೆ

ಭಾರತದ ಷೇರುಮಾರುಕಟ್ಟೆ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಜೂನ್ 27ನೇ ತಾರೀಕಿನ ಸೋಮವಾರದಂದು ಏರಿಕೆ ದಾಖಲಿಸಿವೆ.

Closing Bell: ಸೆನ್ಸೆಕ್ಸ್ 433 ಪಾಯಿಂಟ್ಸ್, ನಿಫ್ಟಿ 133 ಪಾಯಿಂಟ್ಸ್ ಏರಿಕೆ; ಕೋಲ್ ಇಂಡಿಯಾ ಪ್ರತಿ ಷೇರು 5.50 ರೂ. ಗಳಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 27, 2022 | 4:47 PM

Share

ಭಾರತದ ಷೇರು ಮಾರುಕಟ್ಟೆ (Share Market) ಸೂಚ್ಯಂಕಗಳಾದ ಸೆನ್ಸೆಕ್ಸ್ ಹಾಗೂ ನಿಫ್ಟಿ ಜೂನ್ 27ನೇ ತಾರೀಕಿನ ಸೋಮವಾರದಂದು ಏರಿಕೆಯನ್ನು ದಾಖಲಿಸಿವೆ. ಬಿಎಸ್​ಇ ಸೆನ್ಸೆಕ್ಸ್ 433.30 ಪಾಯಿಂಟ್ಸ್ ಅಥವಾ ಶೇ 0.82ರಷ್ಟು ಮೇಲೇರಿ 53,161.28 ಪಾಯಿಂಟ್ಸ್​ನಲ್ಲಿ ವಹಿವಾಟು ಮುಗಿಸಿತು. ಇನ್ನು ಎನ್​ಎಸ್​ಇ ನಿಫ್ಟಿ ಸೂಚ್ಯಂಕವು 132.70 ಪಾಯಿಂಟ್ಸ್ ಅಥವಾ ಶೇ 0.85ರಷ್ಟು ಹೆಚ್ಚಳವಾಗಿ, 15,832 ಪಾಯಿಂಟ್ಸ್​ನೊಂದಿಗೆ ವ್ಯವಹಾರ ಚುಕ್ತಾ ಮಾಡಿತು. ಇಂದಿನ ಷೇರು ಮಾರುಕಟ್ಟೆ ವ್ಯವಹಾರದಲ್ಲಿ 2311 ಕಂಪೆನಿಯ ಷೇರುಗಳು ಏರಿಕೆಯನ್ನು ದಾಖಲಿಸಿದರೆ, 1030 ಕಂಪೆನಿಯ ಷೇರುಗಳು ಬೆಲೆಯಲ್ಲಿ ಇಳಿಕೆ ಕಂಡವು. 140 ಕಂಪೆನಿಯ ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಲಿಲ್ಲ.

ಎಲ್ಲ ವಲಯದ ಸೂಚ್ಯಂಕಗಳು ಏರಿಕೆಯಲ್ಲೇ ಮುಕ್ತಾಯವನ್ನು ಕಂಡವು. ಕ್ಯಾಪಿಟಲ್ ಗೂಡ್ಸ್, ಮಾಹಿತಿ ತಂತ್ರಜ್ಞಾನ ವಲಯದ ಸೂಚ್ಯಂಕಗಳು ತಲಾ ಶೇ 2ರಷ್ಟು ಹೆಚ್ಚಳ ದಾಖಲಿಸಿದವು. ಬಿಎಸ್​ಇ ಮಿಡ್​ಕ್ಯಾಪ್ ಸೂಚ್ಯಂಕ ಶೇ 0.8 ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕ ಶೇ 1.5ರಷ್ಟು ಮೇಲೇರಿದವು.

ನಿಫ್ಟಿಯಲ್ಲಿ ಏರಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಕೋಲ್ ಇಂಡಿಯಾ ಶೇ 3.12

ಒಎನ್​ಜಿಸಿ ಶೇ 3.02

ಲಾರ್ಸನ್ ಶೇ 2.74

ಎಚ್​ಸಿಎಲ್​ ಟೆಕ್ ಶೇ 2.65

ಟೆಕ್ ಮಹೀಂದ್ರಾ ಶೇ 2.65

ನಿಫ್ಟಿಯಲ್ಲಿ ಇಳಿಕೆ ಕಂಡ ಪ್ರಮುಖ ಷೇರುಗಳು ಹಾಗೂ ಶೇಕಡಾವಾರು ಪ್ರಮಾಣ

ಅಪೋಲೋ ಹಾಸ್ಪಿಟಲ್ ಶೇ -1.14

ಐಷರ್ ಮೋಟಾರ್ಸ್ ಶೇ -1.03

ಎಚ್​ಡಿಎಫ್​ಸಿ ಲೈಫ್ ಶೇ -0.61

ಕೊಟಕ್ ಮಹೀಂದ್ರಾ ಶೇ -0.40

ರಿಲಯನ್ಸ್ ಶೇ -0.30

ಇದನ್ನೂ ಓದಿ: ಷೇರು ಮಾರುಕಟ್ಟೆ ಬೆಲೆಗಳ ಏರಿಳಿತ ಊಹಿಸುವುದು ಹೇಗೆ ಗೊತ್ತಾ..! ಇಲ್ಲಿದೆ ಮಾಹಿತಿ

Published On - 4:47 pm, Mon, 27 June 22

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​