AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock market: 4 ಟ್ರೇಡಿಂಗ್​ ಸೆಷನ್​ನಲ್ಲಿ ಹೂಡಿಕೆದಾರರ ಸಂಪತ್ತು 6.45 ಲಕ್ಷ ಕೋಟಿ ರೂಪಾಯಿ ಹೆಚ್ಚಳ

ಭಾರತದ ಷೇರು ಮಾರುಕಟ್ಟೆಯಲ್ಲಿ ಕಳೆದ ನಾಲ್ಕು ಟ್ರೇಡಿಂಗ್ ಸೆಷನ್​ನಲ್ಲಿ ಹೂಡಿಕೆದಾರರ ಸಂಪತ್ತು 6.45 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿದೆ.

Stock market: 4 ಟ್ರೇಡಿಂಗ್​ ಸೆಷನ್​ನಲ್ಲಿ ಹೂಡಿಕೆದಾರರ ಸಂಪತ್ತು 6.45 ಲಕ್ಷ ಕೋಟಿ ರೂಪಾಯಿ ಹೆಚ್ಚಳ
ಸಾಂದರ್ಭಿಕ ಚಿತ್ರ
Srinivas Mata
|

Updated on: May 10, 2021 | 10:08 PM

Share

ಮುಂಬೈ: ಕಳೆದ ನಾಲ್ಕು ಟ್ರೇಡಿಂಗ್ ಸೆಷನ್​ಗಳಲ್ಲಿ ಭಾರತದ ಷೇರು ಮಾರುಕಟ್ಟೆ ಹೂಡಿಕೆದಾರರ ಸಂಪತ್ತು 6,44,760.45 ಕೋಟಿ, ಅರ್ಥಾತ್ 6.45 ಲಕ್ಷ ಕೋಟಿ ರೂಪಾಯಿ ಹೆಚ್ಚಳವಾಗಿವೆ. ಕಳೆದ ನಾಲ್ಕು ಟ್ರೇಡಿಂಗ್ ಸೆಷನ್​ನಲ್ಲಿ 30 ಷೇರುಗಳ ಗುಚ್ಛವಾದ ಬಿಎಸ್​ಇ ಸೆನ್ಸೆಕ್ಸ್ 1,248.90 ಪಾಯಿಂಟ್​ ಅಥವಾ ಶೇ 2.58ರಷ್ಟು ಏರಿಕೆ ಕಂಡಿದೆ. ಸೋಮವಾರದಂದು (ಮೇ 10, 2021) ಬಿಎಸ್​ಇ 295.94 ಪಾಯಿಂಟ್​ ಮೇಲೇರಿ, 49,502.41 ಪಾಯಿಂಟ್​ನೊಂದಿಗೆ ದಿನಾಂತ್ಯದ ವಹಿವಾಟನ್ನು ಮುಗಿಸಿತು. ಬಿಎಸ್​ಇ ಲಿಸ್ಟೆಡ್ ಕಂಪೆನಿಗಳ ಮಾರುಕಟ್ಟೆ ಬಂಡವಾಳವು ಕಳೆದ ನಾಲ್ಕು ಟ್ರೇಡಿಂಗ್​ ಸೆಷನ್​ನಲ್ಲಿ, ಅಂದರೆ ಮೇ 5ನೇ ತಾರೀಕಿನಿಂದ ಈಚೆಗೆ 6,44,760.45 ಕೋಟಿ ರೂಪಾಯಿ ಹೆಚ್ಚಳವಾಗಿ, 213,28,658.05 ಕೋಟಿ ರೂಪಾಯಿಯನ್ನು ಮುಟ್ಟಿದೆ.

ಕೋವಿಡ್- 19 ಪ್ರಕರಣಗಳ ನಿರಂತರ ಹೆಚ್ಚಳ ಮತ್ತು ಹಲವು ರಾಜ್ಯಗಳಲ್ಲಿ ಸಂಚಾರಕ್ಕೆ ನಿರ್ಬಂಧಗಳನ್ನು ಹೇರಿರುವುದರ ಹೊರತಾಗಿಯೂ ದೇಶೀಯ ಈಕ್ವಿಟಿಗಳು ಆ ಎಲ್ಲ ಆತಂಕಗಳನ್ನು ಮೀರಿ, ಉತ್ತಮವಾದ ಗಳಿಕೆ ಕಂಡಿವೆ. ಜಾಗತಿಕವಾಗಿ ಅನಕೂಲಕರ ಅಂಶಗಳು, ಸ್ಥಿರವಾದ ಮಾರ್ಚ್ ತ್ರೈಮಾಸಿಕ ಗಳಿಕೆ ಹಾಗೂ ಜತೆಗೆ ಉತ್ತಮ ಅಭಿಪ್ರಾಯಗಳು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಣೆ ಮಾಡಿದ ನಗದು ಬೆಂಬಲ ಮತ್ತು ದೇಶದಾದ್ಯಂತ ಹೇರದ ಲಾಕ್​ಡೌನ್ ಈ ಎಲ್ಲ ಕಾರಣಗಳಿಂದಾಗಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಮಧ್ಯೆಯೂ ದೇಶೀಯ ಈಕ್ವಿಟಿಗಳಿಗೆ ಬಲ ಬಂದಿದೆ ಎಂದು ರಿಲಯನ್ಸ್ ಸೆಕ್ಯೂರಿಟೀಸ್​ನ ಬಿನೋದ್ ಮೋದಿ ಅಭಿಪ್ರಾಯ ಪಟ್ಟಿದ್ದಾರೆ.

ಅವರು ಮತ್ತೆ ಮುಂದುವರಿದು ಹೇಳುವಂತೆ, ಪ್ರತಿ ದಿನವೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಪಾಸಿಟಿವ್ ರೇಟ್ ಮತ್ತು ಕೋವಿಡ್​-19 ಪ್ರಕರಣಗಳು ಹೂಡಿಕೆದಾರರ ಮನಸ್ಥಿತಿಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಮಾರುಕಟ್ಟೆಯು ನಿರ್ಣಾಯಕ ಎತ್ತರಕ್ಕೆ ಏರುವುದನ್ನು ತಡೆಯುತ್ತದೆ. ಅಂದಹಾಗೆ ಸೋಮವಾರದಂದು ಲಾರ್ಸನ್ ಅಂಡ್ ಟೂಬ್ರೋ ಟಾಪ್ ಗೇಯ್ನರ್ ಆಗಿ, ಶೇ 4ರಷ್ಟು ಏರಿಕೆ ಕಂಡಿದೆ. ಆ ನಂತರದ ಸ್ಥಾನದಲ್ಲಿ ಡಾ. ರೆಡ್ಡೀಸ್, ಸನ್ ಫಾರ್ಮಾ ಮತ್ತು ಎನ್​ಟಿಪಿಸಿ ಗಳಿಕೆ ಕಂಡಿವೆ.

ಇದನ್ನೂ ಓದಿ: Kotak Mahindra Bank: ಖಾಸಗಿ ಬ್ಯಾಂಕ್ ಷೇರಿನ 10,000 ರೂಪಾಯಿ 20 ವರ್ಷದಲ್ಲಿ 64 ಲಕ್ಷ ರೂ.

(Indian stock market investors wealth increased by Rs 6.45 lakh crore in 4 trading sessions)

Follow Us
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!