AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Stock Market Record: ಷೇರುಪೇಟೆ ಝಗಮಗ; ಸೆನ್ಸೆಕ್ಸ್ ಮತ್ತು ನಿಫ್ಟಿ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ

Sensex and Nifty Indices Rise To New High: ಅದಾನಿ ಗ್ರೂಪ್ ಕಂಪನಿಗಳು ಹಾಗೂ ಬ್ಯಾಂಕಿಂಗ್ ಕಂಪನಿಗಳ ಷೇರುಬೆಲೆ ಹೆಚ್ಚಳವಾದ ಪರಿಣಾಮ ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ಜೂನ್ 28ರಂದು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿವೆ.

Stock Market Record: ಷೇರುಪೇಟೆ ಝಗಮಗ; ಸೆನ್ಸೆಕ್ಸ್ ಮತ್ತು ನಿಫ್ಟಿ ಸಾರ್ವಕಾಲಿಕ ದಾಖಲೆ ಮಟ್ಟದಲ್ಲಿ
ಷೇರುಮಾರುಕಟ್ಟೆ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 28, 2023 | 11:16 AM

Share

ನವದೆಹಲಿ: ಭಾರತದ ಬಂಡವಾಳ ಮಾರುಕಟ್ಟೆಯ ಪ್ರಮುಖ ಸೂಚಿಗಳೆಂದು ಪರಿಗಣಿಸಲಾದ ಬಿಎಸ್​ಇ ಸೆನ್ಸೆಕ್ಸ್ (BSE Sensex) ಮತ್ತು ಎನ್​ಎಸ್​ಇ ನಿಫ್ಟಿ (NSE Nifty) ಜೂನ್ 28ರ ಬೆಳಗ್ಗೆ ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿಕೆ ಕಂಡಿವೆ. ಅದಾನಿ ಗ್ರೂಪ್​ನ ಕಂಪನಿಗಳ ಷೇರು ಮತ್ತು ಬ್ಯಾಂಕಿಂಗ್ ವಲಯದ ಷೇರುಗಳು ಉತ್ತಮವಾಗಿ ವಹಿವಾಟು ಕಂಡ ಪರಿಣಾಮ ಈ ಎರಡು ಸೂಚ್ಯಂಕಗಳು ಹೆಚ್ಚಳ ಕಂಡಿವೆ. ಬೆಳಗ್ಗೆ 9:30ರ ಸಮಯದಲ್ಲಿ ನಿಫ್ಟಿ50 ಸೂಚ್ಯಂಕ 18,908.15 ಅಂಕಗಳ ಮಟ್ಟಕ್ಕೆ ಹೋಗಿತ್ತು. ಇದು ಎನ್​ಎಸ್​ಇ ಇತಿಹಾಸದಲ್ಲೇ ಆ ಸೂಚ್ಯಂಕ ಏರಿದ ಗರಿಷ್ಠ ಮಟ್ಟವಾಗಿದೆ.

ಇನ್ನು ಬಿಎಸ್​ಇ ವಿನಿಮಯ ಕೇಂದ್ರದ ಸೆನ್ಸೆಕ್ಸ್ ಸೂಚ್ಯಂಕ ಕೂಡ ಜೂನ್ 28, ಬುಧವಾರದ ಬೆಳಗಿನ ವಹಿವಾಟಿನಲ್ಲಿ ಶೇ. 0.47ರಷ್ಟು ಹೆಚ್ಚಳ ಕಂಡು 63,716 ಅಂಕಗಳ ಮಟ್ಟ ತಲುಪಿತ್ತು. ಇದೂ ಸಹ ಸೆನ್ಸೆಕ್ಸ್ ಏರಿದ ಗರಿಷ್ಠ ಎತ್ತರವಾಗಿದೆ.

ಇದನ್ನೂ ಓದಿHDFC Merger: ಜುಲೈ 1ರಂದು ಎಚ್​ಡಿಎಫ್​ಸಿ ವಿಲೀನ; 13ಕ್ಕೆ ಷೇರುಪೇಟೆಗಳಿಂದ ಹೊರಕ್ಕೆ; ಎಚ್​ಡಿಎಫ್​ಸಿ ಜಾಗಕ್ಕೆ ಅದಾನಿ ಎಂಟರ್​ಪ್ರೈಸಸ್, ಎಲ್​ಟಿಐ ಮೈಂಡ್​ಟ್ರೀಗೆ ಮಣೆಸಾಧ್ಯತೆ

ನಿಫ್ಟಿ ಸೂಚ್ಯಂಕದಲ್ಲಿರುವ 50 ಕಂಪನಿಗಳ ಪೈಕಿ ಅದಾನಿ ಎಂಟರ್​ಪ್ರೈಸಸ್ ಸಂಸ್ಥೆ ಆತಿಹೆಚ್ಚು ಲಾಭ ಮಾಡಿತು. ಈ ಅದಾನಿ ಕಂಪನಿ ಷೇರು ಬುಧವಾರ ಬೆಳಗಿನ ವಹಿವಾಟಿನಲ್ಲಿ ಶೇ. 4.6ರಷ್ಟು ಹೆಚ್ಚಾಗಿದೆ. ಇನ್ನು ವಿಲೀನಕ್ಕೆ ಹೊರಟಿರುವ ಎಚ್​ಡಿಎಫ್​ಸಿ ಮತ್ತು ಎಚ್​ಡಿಎಫ್​ಸಿ ಬ್ಯಾಂಕು ಈ ಎರಡೂ ಕಂಪನಿಗಳ ಷೇರುಗಳಿಗೆ ಒಳ್ಳೆಯ ಬೇಡಿಕೆ ಬಂದಿದೆ. ಇವೆರಡೂ ಕೂಡ ನಿಫ್ಟಿ ಮತ್ತು ಸೆನ್ಸೆಕ್ಸ್​ನಲ್ಲಿ ಲಿಸ್ಟ್ ಆಗಿವೆ. ಎರಡೂ ಸೂಚ್ಯಂಕಗಳ ಏರಿಕೆಯಲ್ಲಿ ಎಚ್​ಡಿಎಫ್​ಸಿ ಕೊಡುಗೆಯೂ ಇದೆ.

ಸೆನ್ಸೆಕ್ಸ್ ಕಳೆದ ವಾರವೂ ದಾಖಲೆ ಮಟ್ಟಕ್ಕೆ ಹೋಗಿತ್ತು. ಈ ಬಾರಿ ಆ ದಾಖಲೆಯನ್ನೂ ಮೀರಿಸಿ ಬೆಳೆದಿದೆ. ಅದರ ಮಿಡ್​ಕ್ಯಾಪ್ ಮತ್ತು ಸ್ಮಾಲ್​ಕ್ಯಾಪ್ ಸೂಚ್ಯಂಕ ಕೂಡ ಗರಿಷ್ಠ ಮಟ್ಟದಲ್ಲಿವೆ. ಇನ್ನು ವಿವಿಧ ವಲಯವಾರು ಇರುವ 13 ಸೂಚ್ಯಂಕಗಳೂ ಕೂಡ ಉತ್ತಮ ಏರಿಕೆ ಕಂಡಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ