AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಪಾನೀ ಉದ್ದಿಮೆಗಳಿಗೆ ಗ್ಲೋಬಲ್ ಸೌತ್ ತಲುಪಲು ಭಾರತ ಸ್ಪ್ರಿಂಗ್​ಬೋರ್ಡ್ ಇದ್ದಂತೆ: ನರೇಂದ್ರ ಮೋದಿ

Narendra Modi speaks at India-Japan economic forum in Tokyo: ಭಾರತ ಮತ್ತು ಜಪಾನ್ ಜೊತೆಯಾದರೆ ಏಷ್ಯನ್ ಪ್ರದೇಶವನ್ನು ಸ್ಥಿರತೆ ಮತ್ತು ಅಭಿವೃದ್ಧಿಯತ್ತ ಕರೆದೊಯ್ಯಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಜಪಾನ್ ಬಳಿ ತಂತ್ರಜ್ಞಾನ ಇದೆ. ಭಾರತದಲ್ಲಿ ಬಳಿ ಪ್ರತಿಭೆಗಳ ಸಮೂಹ ಇದೆ. ಎರಡರ ಸಮಾಗಮದಿಂದ ಇಬ್ಬರಿಗೂ ಲಾಭ ಎಂದಿದ್ದಾರೆ. ನರೇಂದ್​ರ ಮೋದಿ ಅವರು ಭಾರತ-ಜಪಾನ್ ಜಂಟಿ ಎಕನಾಮಿಕ್ ಫೋರಂ ಉದ್ದೇಶಿಸಿ ಟೋಕಿಯೋದಲ್ಲಿ ಮಾತನಾಡುತ್ತಿದ್ದರು.

ಜಪಾನೀ ಉದ್ದಿಮೆಗಳಿಗೆ ಗ್ಲೋಬಲ್ ಸೌತ್ ತಲುಪಲು ಭಾರತ ಸ್ಪ್ರಿಂಗ್​ಬೋರ್ಡ್ ಇದ್ದಂತೆ: ನರೇಂದ್ರ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 29, 2025 | 5:10 PM

Share

ಟೋಕಿಯೋ, ಆಗಸ್ಟ್ 29: ಜಪಾನ್ ದೇಶಕ್ಕೆ ಎರಡು ದಿನದ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎರಡೂ ದೇಶಗಳ ಸಹಭಾಗಿತ್ವದಿಂದ ಜಗತ್ತಿಗೆ ಲಾಭ ಆಗುವ ಸಾಧ್ಯತೆಯನ್ನು ಪ್ರಸ್ತಾಪಿಸಿದ್ದಾರೆ. ಜಪಾನ್ ಮತ್ತು ಭಾರತ ದೇಶಗಳು ಜಂಟಿಯಾಗಿ ಏಷ್ಯನ್ ಪ್ರದೇಶವನ್ನು ಸ್ಥಿರತೆ, ಅಭಿವೃದ್ಧಿ ಮತ್ತು ಸಮೃದ್ಧಿಯತ್ತ ಕೊಂಡೊಯ್ಯಬಲ್ಲವು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಭಾರತ-ಚೀನಾ ಎಕನಾಮಿಕ್ ಫೋರಂ ಉದ್ದೇಶಿಸಿ ಮಾತನಾಡುತ್ತಿದ್ದ ನರೇಂದ್ರ ಮೋದಿ (Narendra Modi), ಭಾರತದ ಮಾರುಕಟ್ಟೆ ನೀಡುವ ಅವಕಾಶಗಳನ್ನು ಜಪಾನೀಯರ ಮುಂದೆ ತೆರೆದಿಟ್ಟಿದ್ದಾರೆ.

‘ಭಾರತದಲ್ಲಿ ಬಂಡವಾಳ ಕೇವಲ ಹೆಚ್ಚುವುದಷ್ಟೇ ಅಲ್ಲ, ಅದು ದ್ವಿಗುಣಗೊಳ್ಳುತ್ತದೆ. ಕಳೆದ 11 ವರ್ಷದಲ್ಲಿ ಭಾರತದಲ್ಲಿ ಯಾವ ರೀತಿ ಅಭಿವೃದ್ಧಿ ಮತ್ತು ಪರಿವರ್ತನೆ ಆಗಿದೆ ಎಂಬುದು ನಿಮಗೆಲ್ಲಾ ತಿಳಿದಿದೆ. ಭಾರತದಲ್ಲಿ ರಾಜಕೀಯ ಸ್ಥಿರತೆ, ಪಾರದರ್ಶಕತೆ ಇದೆ. ವಿಶ್ವದಲ್ಲೇ ಅತಿವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿ ಎನಿಸುತ್ತೇವೆ’ ಎಂದು ಪ್ರಧಾನಿಗಳು ಬಣ್ಣಿಸಿದ್ದಾರೆ.

ಇದನ್ನೂ ಓದಿ: ಅಮೆರಿಕದೊಂದಿಗಿನ ಉದ್ವಿಗ್ನತೆ ನಡುವೆ ಟೋಕಿಯೋಗೆ ಹೋದ ಪ್ರಧಾನಿ ಮೋದಿ ಹೇಳಿದ್ದೇನು?

ಜಪಾನ್ ತಂತ್ರಜ್ಞಾನ, ಭಾರತದ ಪ್ರತಿಭೆ ಸೇರಿದಾಗ…

ಜಪಾನ್ ದೇಶದ ತಂತ್ರಜ್ಞಾನವು ಭಾರತದ ಪ್ರತಿಭೆಯೊಂದಿಗೆ ಸೇರಿದಾಗ ಈ ಶತಮಾನದ ತಂತ್ರಜ್ಞಾನ ಅಭಿವೃದ್ಧಿಗೆ ಪುಷ್ಟಿ ಸಿಗಬಹುದು. ಈ ಸಮಾಗಮವು ಎರಡೂ ದೇಶಗಳಿಗೆ ಪರಸ್ಪರ ಅನುಕೂಲವಾಗಬಲ್ಲುದು. ಅದು ಪರಿಪಕ್ವವಾದ ಜೊತೆಗಾರಿಕೆಯಾಗಬಲ್ಲುದು ಎಂದು ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.

ಜಪಾನೀ ಉದ್ದಿಮೆಗಳಿಗೆ ಗ್ಲೋಬಲ್ ಸೌತ್ ಮುಟ್ಟಲು ಭಾರತವೇ ಸ್ಪ್ರಿಂಗ್​ಬೋರ್ಡ್

‘ಆಟೊಮೊಬೈಲ್ ಸೆಕ್ಟರ್​ನಲ್ಲಿ ನಮ್ಮ ಜೊತೆಗಾರಿಕೆಯು ಒಳ್ಳೆಯ ಯಶಸ್ಸು ಕಂಡಿದೆ. ಬ್ಯಾಟರಿ, ರೋಬೋಟಿಕ್ಸ್, ಸೆಮಿಕಂಡಕ್ಟರ್ ಮತ್ತು ನೂಕ್ಲಿಯಾರ್ ಎನರ್ಜಿಯಲ್ಲೂ ಇದೇ ಮ್ಯಾಜಿಕ್ ನಾವು ಸೃಷ್ಟಿಸಬಹುದು. ಗ್ಲೋಬಲ್ ಸೌತ್ (ತೃತೀಯ ಜಗತ್ತಿನ ದೇಶಗಳು) ಬೆಳವಣಿಗೆಗೆ ಜಂಟಿಯಾಗಿ ಕೊಡುಗೆ ನೀಡಬಹುದು’ ಎಂದು ಭಾರತದ ಪ್ರಧಾನಿಗಳು ಟೋಕಿಯೋದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಟ್ರಂಪ್ ಟ್ಯಾರಿಫ್​ನಿಂದ ಕಳೆದುಕೊಳ್ಳೋದು 0.5, ಗಳಿಸೋದು 2-3 ಪರ್ಸೆಂಟ್: ಪ್ರೊ| ಮಾಧವ್ ನಲಪತ್

ಜಪಾನೀ ಉದ್ದಿಮೆಗಳಿಗೆ ಗ್ಲೋಬಲ್ ಸೌತ್ ಅನ್ನು ಮುಟ್ಟಲು ಭಾರತವೇ ಸ್ಪ್ರಿಂಗ್ ಬೋರ್ಡ್ ಆಗಬಲ್ಲುದು ಎಂದು ಹೇಳಿದ ಅವರು, ಭಾರತದಲ್ಲಿ ನಿರ್ಮಿಸಿ, ವಿಶ್ವಕ್ಕೆ ನಿರ್ಮಿಸಿ ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ